Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನನ್ನ ಬಳಿ ಇರುವ ದಾಖಲೆ ಕೊಟ್ಟರೆ ಇನ್ನು 6-7 ಸಚಿವರು ರಾಜೀನಾಮೆ ಕೊಡಬೇಕಾಗುತ್ತದೆ : ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ

Facebook
Twitter
Telegram
WhatsApp

 

ಬೆಂಗಳೂರು: ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಕುಮಾರಸ್ವಾಮಿ ಅವರನ್ನು ವಿಚಾರಣೆಗೆ ಕರೆದಿದ್ದರು. ವಿಚಾರಣೆಗೆ ಹಾಜರಾಗಿ ಬಂದ ಮರುದಿನವೇ ಸುದ್ದಿಗೋಷ್ಟಿ ನಡೆಸಿರುವ ಕುಮಾರಸ್ವಾಮಿ ಅವರು, ಕಾಂಗ್ರೆಸ್ ಮೇಲೆ ಕಿಡಿಕಾರಿದ್ದಾರೆ.

ವಿಚಾರಣೆ ಮಾಡುವುದಕ್ಕೆ ಅನುಮತಿ‌ಕೊಡಿ ಅಂತ ಪತ್ರ ಬರೆದಿದ್ದಾರಲ್ಲ ಚಂದ್ರಶೇಖರ್ ಈ ಪತ್ರದ ಮಾಹಿತಿ ಒಂದೇ ಒಂದು ಖಾಸಗಿ ಚಾನೆಲ್ ಗೆ ಹೋಗಿರುವುದು. ಎಲ್ಲಾ ಚಾನೆಲ್ ಗಳಿಗೂ ಮಾಹಿತಿ ಸೋರಿಕೆಯಾಗಿಲ್ಲ. ಐಜಿಪಿ ಕಚೇರಿ, ರಾಜ್ಯಪಾಲರ ಕಚೇರಿ ಮಧ್ಯದಲ್ಲಿ ನಡೆದಿದೆ. ಇಲ್ಲಿ ನಿರಂತರವಾಗಿ ಮೂರು ತಿಂಗಳಿಂದ ಏನು ಹಲವಾರು ಪ್ರಕರಣಗಳು ನಡೆಯುತ್ತಾ ಇದಾವೆ. ಆ ಪ್ರಕರಣಗಳಿಗೆ ಸಂಬಂಧಿಸಿದಂತ ಡಿಜಿ ಕಚೇರಿಗೆ ದೂರುಗಳು ಕೊಟ್ಟ ಮೇಲೆ ಅವರು ಯಾವ ಚಾನೆಲ್ ಗಳಿಗೆ ಹೋಗಿ ಕೂರುತ್ತಾ ಇದಾರೆ. ಯಾವ ಚಾನೆಲ್ ನಲ್ಲಿ ಬಟ್ಟೆ ಕಟ್ಟಿ ಪ್ರತಿದಿನ ಮೂರು ಗಂಟೆ ನಾಲ್ಕು ಗಂಟೆ ಪ್ರಚಾರ ಮಾಡಿಕೊಂಡು ಬಂದ್ರು. ಇಲ್ಲಿ ನೀವೂ ಸೋರಿಕೆ ಮಾಡಿಕೊಂಡು ಬಂದು, ರಾಜ್ಯಪಾಲರ ಕಚೇರಿಯನ್ನ ಸರ್ಚ್ ಮಾಡುವುದಕ್ಕೆ ಅನುಮತಿ‌ಕೊಡಿ ಅಂದ್ರೆ ಏನು ಅರ್ಥ. ಈ ಸರ್ಕಾರ ಹೇಗೆ ಆಡಳಿತ ನಡೆಸುತ್ತಾ ಇದೆ.

ಈ ಥರ ಆದ್ರೆ ಇದು ಇಲ್ಲಿಗೆ ನಿಲ್ಲಲ್ಲ. ಹೇಳುದ್ರಲ್ಲ ಸಿದ್ದರಾಮಯ್ಯ ಅವರು 40% ಸರ್ಕಾರ ಅಂತ ಹೇಳಿ. ಜನಗಳ ಮುಂದೆ ಹೇಳಿ ಬಂದಿದ್ರಲ್ಲ, ಆದ್ರೆ ಈಗ ಅವರ ಪಕ್ಷದವರೇ ಹೇಳುತ್ತಾರೆ. ಇವರು ಬಂದ ಮೇಲೆ 40%ಗೂ ಜಾಸ್ತಿಯಾಗಿದೆ ಅಂತ. ಇದಕ್ಕೆ ಜನ ನಿಮಗೆ ಅಧಿಕಾರ ಕೊಟ್ರಾ ಸಿದ್ದರಾಮಯ್ಯ ಅವರೇ. ನಾನು ಏನು ಎಲ್ಲಿಯೂ ಓಡಿ ಹೋಗೊಲ್ಲ. ನನ್ನ ಹತ್ತಿರ ಇರುವ ಡಾಕ್ಯುಮೆಂಟ್ ಬಿಟ್ರೆ, ಇನ್ನು ಆರರಿಂದ ಏಳು ಜನ ಮಂತ್ರಿಗಳು ರಾಜೀನಾಮೆ ಕೊಡಬೇಕಾಗುತ್ತದೆ.

ಬಿಡಣಾ ಬಿಡಣಾ, ಹೆದರಿಕೊಂಡು ಹೋಗಲ್ಲ. ಕುಮಾರಸ್ವಾಮಿ ಏನು ಅನ್ನೋದು, ದೇವೇಗೌಡರ ಕುಟುಂಬ ಕೆದಕಿದರೆ, ದೇವೇಗೌಡರ ಕಣ್ಣಲ್ಲಿ ನೀರು ಹಾಕಿದರೆ, ನಾವ್ಯಾರು ತೀರ್ಪು ಕೊಡೋರಲ್ಲ, ನಾವ್ಯಾರು ಶ್ರಮ ಹಾಕಬೇಕಿಲ್ಲ. ಯಾವ ದೇವೇಗೌಡ್ರು ಶಿವನನ್ನು ನಂಬಿ ಬದುಕಿದ್ದಾರೆ, ಆ ವ್ಯಕ್ತಿಯ ಕಣ್ಣಲ್ಲಿ ನೀರು ಯಾಕೆ ಬಿದ್ದಿದೆ, ನೋವು ಏನಿದೆ ಅದನ್ನ ನೋಡಿ ಆ ಭಗವಂತನೆ ಶಿಕ್ಷೆ ನೀಡುತ್ತಾನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಜೀಂ ಪ್ರೇಮ್‍ಜಿ ಫೌಂಡೇಶನ್ ಕಾರ್ಯ ಪ್ರಪಂಚಕ್ಕೆ ಮಾದರಿ: ಕೆ.ರಾಜಶೇಖರ ಹಿಟ್ನಾಳ

  ಸುದ್ದಿಒನ್, ಕೊಪ್ಪಳ, ಸೆಪ್ಟೆಂಬರ್. 28 : ಅಜೀಂ ಪ್ರೇಮ್‍ಜಿ ಫೌಂಡೇಶನ ಮಾಡುತ್ತಿರುವ ಸೇವಾ ಕಾರ್ಯವು ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಲೋಕಸಭಾ ಸದಸ್ಯರಾದ ಕೆ.ರಾಜಶೇಖರ ಹಿಟ್ನಾಳ ಹೇಳಿದರು. ಅವರು ನಗರದ ಸಿ.ಪಿ.ಎಸ್.ಶಾಲೆಯಲ್ಲಿ ಅಜೀಂ ಪ್ರೇಮ್‍ಜಿ

ಭಗತ್ ಸಿಂಗ್ ರ ಕನಸಿನ ಸಮಾಜವಾದಿ ಭಾರತಕ್ಕೆ ಕೈಜೋಡಿಸಿ : ರವಿಕುಮಾರ್

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 : ಬಿಳಿಯರು ತೊಲಗಬಹದು, ನಮ್ಮವರೇ ನಮ್ಮನ್ನು ಆಳ್ವಿಕೆ ಮಾಡಿ ಜನರ ಶೋಷಣೆ ನಿಲ್ಲುವುದಿಲ್ಲ’ ಎಂದು ಭಗತ್ ಸಿಂಗ್ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ನುಡಿದ್ದರು. ಅವರು ಹೇಳಿದ ಒಂದು

ಹಿಂದೂ ಮಹಾಗಣಪತಿ ಶೋಭಯಾತ್ರೆ ವೇಳೆ ದರ್ಶನ್ ಭಾವಚಿತ್ರ ಬಾವುಟ ಹಾರಾಟಕ್ಕೆ ಬ್ರೇಕ್..!

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 : ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ನೇತೃತ್ವದಲ್ಲಿ ಹಿಂದೂ ಮಹಾಗಣಪತಿ ಬೃಹತ್ ಶೋಭಯಾತ್ರೆ

error: Content is protected !!