Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿಂದೂ ಮಹಾಗಣಪತಿ ಶೋಭಯಾತ್ರೆ ವೇಳೆ ದರ್ಶನ್ ಭಾವಚಿತ್ರ ಬಾವುಟ ಹಾರಾಟಕ್ಕೆ ಬ್ರೇಕ್..!

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 : ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ನೇತೃತ್ವದಲ್ಲಿ ಹಿಂದೂ ಮಹಾಗಣಪತಿ ಬೃಹತ್ ಶೋಭಯಾತ್ರೆ ವಿಜೃಂಭಣೆಯಿಂದ ನಡೆಯತ್ತಿದೆ. ಈ ವೇಳೆ ಬಾರೀ ಜನಸ್ತೋಮ ಸೇರಿದೆ.

ಆದರೆ ಈ ಶೋಭಾಯಾತ್ರೆಯಲ್ಲಿ ದರ್ಶನ್ ಭಾವಚಿತ್ರವಿರುವ ಬಾವುಟ ಹಾರಾಟಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಶೋಭಾಯಾತ್ರೆ ಮೆರವಣಿಗೆ ವೇಳೆ ದೇವರ ಚಿತ್ರವಿರುವ ಬಾವುಟಗಳನ್ನು ಹಾರಿಸುತ್ತಾರೆ. ಆದರೆ ಈ ಮೆರವಣಿಗೆಯಲ್ಲಿ ದರ್ಶನ್ ಬಾವುಟ ಹಾರಿಸುವ ಪ್ರಯತ್ನ ನಡೆದಿದೆ. ಶನಿವಾರ ಮಧ್ಯಾಹ್ನ 12.30 ಕ್ಕೆ ಈ ದೃಶ್ಯ ಕಂಡು ಬಂದಿದ್ದು ಚಿತ್ರದುರ್ಗ ನಗರದಲ್ಲಿಂದು ಹಿಂದೂ ಮಹಾ ಗಣಪತಿ ಶೋಭಾ ಯಾತ್ರೆಯಲ್ಲಿ ದರ್ಶನ್ ಅಭಿಮಾನಿಗಳು ಬೃಹತ್ ಗಾತ್ರದ ದರ್ಶನ್ ಭಾವಚಿತ್ರ ಇರುವ ಏನ್ರೀ ಮೀಡಿಯಾ ಎಂಬ ಭಾವುಟವನ್ನ ಕೈನಲ್ಲಿ ಹಿಡಿದು ದರ್ಶನ್ ಪರ ಘೋಷಣೆಗಳನ್ನ ಕೂಗುತ್ತಿದ್ದದ್ದು ಕಂಡು ಬಂದಿದೆ.

ಈ ವೇಳೆ ಹಿಂದೂ ಕಾರ್ಯಕರ್ತರು, ದರ್ಶನ್ ಅಭಿಮಾನಿಗೆ ಕಿವಿ ಮಾತು ಹೇಳಿದ್ದಾರೆ. ದರ್ಶನ್ ಬಾವುಟವನ್ನು ಹಾರಿಸಬೇಡಿ ಎಂದು ತಿಳಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೆಲ ಹೊತ್ತು ದರ್ಶನ ಅಭಿಮಾನಿ ನಡುವೆ ಹಾಗೂ ಹಿಂದೂ ಕಾರ್ಯಕರ್ತರು ವಾಗ್ವಾದ ನಡೆದಿದ್ದು ಕಂಡು ಬಂದಿದೆ. ಅಷ್ಟರಲ್ಲಿ ಪೊಲೀಸರು ಬಾವುಟವನ್ನು ಕಸಿದುಕೊಂಡು ತಮ್ಮ ವಶಕ್ಕೆ ಪಡೆದಿದ್ದಾರೆ. ಇದರಿಂದಾಗಿ ದರ್ಶನ್ ಅಭಿಮಾನಿಗಳು ಸಪ್ಪೆ ಮೋರೆ ಹಾಕಿಕೊಂಡು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಗಣೇಶನ‌ ಮೆರವಣಿಗೆ ನಗರದ ಬಿ.ಡಿ. ರಸ್ತೆಯಲ್ಲಿ ಅದ್ದೂರಿಯಾಗಿ ಸಾಗುತ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment