Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೂಡಾ ಹಗರಣದಲ್ಲಿ ಹೋರಾಟಕ್ಕಿಳಿದಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಮಹಿಳೆ ದೂರು..!

Facebook
Twitter
Telegram
WhatsApp

 

ಮೈಸೂರು: ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿ, ಹೋರಾಟಕ್ಕೆ ಇಳಿದಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಇದೀಗ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಮಹಿಳೆಯ ದೂರಿನ ಆಧಾರದ ಮೇಲೆ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ನೇಹಮಯಿ ಕೃಷ್ಣ ಅವರು ತನ್ನ ಮೇಲೆ ಅಟ್ಯಾಕ್ ಮಾಡಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

ಮಹಿಳೆ ನೀಡಿದ ದೂರಿನಲ್ಲಿ, ನನ್ನ ಗಂಡ ಹಾರ್ಟ್ ಅಟ್ಯಾಕ್ ನಿಂದ ನಿಧನ ಹೊಂದಿದ್ದಾರೆ. ಡೆತ್ ಬೆನಿಫಿಸರಿ ಹಾಣ ಹಾಗೂ ನನ್ನ ಒಡವೆಗಳನ್ನು ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ನಲ್ಲಿ ಕೇಸ್ ನಡೆಯುತ್ತಿದೆ. 18/7/2024 ರಂದು ಕೋರ್ಟ್ ಮುಗಿಸಿಕೊಂಡು ನಾನು ಮತ್ತು ನನ್ನ ತಾಯಿ ಬರುತ್ತಿದ್ದವು. ನನ್ನ ಅತ್ತೆ, ಮಾವ, ಅತ್ತೆ ಸಹೋದರನ ಪರವಾಗಿ ಸ್ನೇಹಮಯಿ ಕೃಷ್ಣ ಕಿರುಕುಳ ನೀಡಿದ್ದಾರೆ. ನನ್ನ ಹಿಡಿದು ಎಳೆದಾಡಿ, ನನಗೆ, ನನ್ನ ತಾಯಿಗೆ ಜೀವ ಬೆದರಿಕೆ ಹಾಕಿದ್ದಾರಲ್ಲದೆ, ಕೆಟ್ಟ ಪದಗಳಿಂದ ನಿಂದಿಸಿದ್ದಾರೆ ಎಂದು ಲಾವಣ್ಯ ಎಂಬ ಮಹಿಳೆ ದೂರು ನೀಡಿದ್ದಾರೆ.

ಈ ದೂರಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ನೇಹಮಯಿ ಕೃಷ್ಣ, ಆ ಮಹಿಳೆ ಯಾರೆಂಬುದೇ ನನಗೆ ಗೊತ್ತಿಲ್ಲ. ನನ್ನ ಮೇಲಿನ ಆರೋಪ ಸುಳ್ಳು. ನನ್ನ ವಿರುದ್ಧ ಹಲವರು ಷಡ್ಯಂತ್ರ ಮಾಡುತ್ತಿದ್ದಾರೆ. ನಾನು ಜೈಲಿಗೆ ಹೋದರು ಸರಿ, ಹೋರಾಟ‌ ನಿಲ್ಲಿಸಲ್ಲ. ಅಲ್ಲಿಂದಾನೇ ಹೋರಾಟ‌ ಮಾಡುತ್ತೇನೆ. ಆ ದಿನ ನಾನು ಮೈಸೂರಿನಲ್ಲಿಯೇ ಇದ್ದೆ. ಬೇಕಾದರೆ ಟವರ್ ಲೊಕೇಶನ್, ಸಿಸಿಟಿವಿ ಎಲ್ಲವನ್ನು ಪರಿಶೀಲನೆ ಮಾಡಲಿ. ಮೂಡಾ ಹಗರಣದಲ್ಲಿ ಭಾಗಿಯಾಗಿರುವವರೆಲ್ಲಾ ಒಟ್ಟಿಗೆ ಸೇರಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜಾತಿ ಧರ್ಮ ಮೀರಿ ಎಲ್ಲರೂ ಸಾಹಿತ್ಯದ ಕೆಲಸ ಮಾಡಬೇಕು : ಬಿ.ಕೆ.ರಹಮತ್‍ವುಲ್ಲಾ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 29 : ಸಾಹಿತ್ಯಕ್ಕೂ ಜಾತಿ ಧರ್ಮಕ್ಕೂ ಒಂದಕ್ಕೊಂದು ಸಂಬಂಧವಿಲ್ಲ. ಜಾತಿ ಧರ್ಮ ಮೀರಿ ಎಲ್ಲರೂ

ಹಿಂದೂ ಮಹಾಗಣಪತಿ ಶೋಭಾಯಾತ್ರೆ : ಪೌರ ಕಾರ್ಮಿಕರನ್ನು ಸನ್ಮಾನಿಸಿ ಗೌರವ ಧನ ನೀಡಿ : ವಿಜಯಸೇನೆಯಿಂದ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 29 : ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಪ್ರತಿ ವರ್ಷವೂ ಚಿತ್ರದುರ್ಗದಲ್ಲಿ ಹಿಂದೂ

ಉದ್ಯಾನವನಗಳ ನಿರ್ವಹಣೆ ಸಾರ್ವಜನಿಕರು ಸಹಕರಿಸಿ : ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ

ಚಿತ್ರದುರ್ಗ, ಸೆಪ್ಟೆಂಬರ್. 29 : ನಗರದಲ್ಲಿನ ಉದ್ಯಾನ ವನಗಳನ್ನು ನಗರಸಭೆ ನಿರ್ಮಾಣ ಮಾಡಿದರೂ, ಸಸಿಗಳನ್ನು ಹಾಕಿದರೂ ಸ್ಥಳೀಯರು ಜವಾಬ್ದಾರಿ ತೆಗೆದುಕೊಂಡು ನಿರ್ವಹಣೆ ಮಾಡಬೇಕು ಆಗಲೇ‌ ಉದ್ಯಾನವನಗಳು ನಳನಳಿಸುತ್ತವೆ ಅಲ್ಲದೆ ನಗರದ ಸ್ವಚ್ಛತೆ, ನೈರ್ಮಲ್ಯ ಕಾಪಾಡುವಲ್ಲಿ

error: Content is protected !!