Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎ.ಡಿ.ಜಿ.ಪಿ. ಚಂದ್ರಶೇಖರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ : ಜೆಡಿಎಸ್ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 01 : ಭ್ರಷ್ಠಾಚಾರ, ದುರ್ನಡತೆ, ಕ್ರಿಮಿನಲ್ ಕೇಸ್‍ನಲ್ಲಿ ಭಾಗಿಯಾಗಿರುವ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾದಳದ ಮುಖ್ಯಸ್ಥ ಎ.ಡಿ.ಜಿ.ಪಿ. ಎಂ.ಚಂದ್ರಶೇಖರ್‍ರವರನ್ನು ಕೂಡಲೆ ಭಾರತೀಯ ಸೇವೆಯಿಂದ ಅಮಾನತ್ತುಗೊಳಿಸಿ ಉನ್ನತ ಮಟ್ಟದ ತನಿಖೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಕೇಡರ್ ಸೆಂಟ್ರಲ್ ಪ್ರಾಧಿಕಾರ ಕೇಂದ್ರ ಗೃಹ ಸಚಿವಾಲಯಕ್ಕೆ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರದ ಶಿಫಾರಸ್ಸಿನೊಂದಿಗೆ ಕಳಿಸಿಕೊಡುವಂತೆ ಜಿಲ್ಲಾ ಜಾತ್ಯತೀತ ಜನತಾದಳದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿರವರ ಬಗ್ಗೆ ಹಗರುವಾಗಿ ಮಾತನಾಡಿರುವ ಎಂ.ಚಂದ್ರಶೇಖರ್ ಹಂದಿಗಳ ಜೊತೆ ಗುದ್ದಾಡಿದರೆ ಮೈಯೆಲ್ಲಾ ಕೊಚ್ಚೆಯಾಗುತ್ತದೆಂಬ ಕೀಳು ಪದಗಳನ್ನು ಬಳಸಿ ಅಧಿಕಾರದ ದರ್ಪದಿಂದ ಮೆರೆಯುತ್ತಿರುವ ಹಿಮಾಚಲಪ್ರದೇಶ ಐ.ಪಿ.ಎಸ್. ಕೇಡರ್‍ಗೆ ಸೇರಿದ ಎಂ.ಚಂದ್ರಶೇಖರ್ ಪತ್ನಿಗೆ ಅನಾರೋಗ್ಯ ಎಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ ರಾಜಕೀಯ ಪ್ರಭಾವ ಬೀರಿ ಕರ್ನಾಟಕಕ್ಕೆ ವರ್ಗಾವಣೆಗೊಂಡು ಪ್ರಮುಖ ಆಯಕಟ್ಟಿನಲ್ಲಿ ಕೆಲಸ ಮಾಡಿರುವುದಲ್ಲದೆ ಭೂಗಳ್ಳರು, ಸಮಾಜಘಾತುಕರೊಡನೆ ಕೈಜೋಡಿಸಿ ನೂರಾರು ಪ್ರಕರಣಗಳನ್ನು ತನಿಖೆ ನಡೆಸದಿರುವುದು ದುರಂತ ಎಂದು ಪ್ರತಿಭಟನಾನಿರತರು ಆಪಾದಿಸಿದರು.

ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿರವರು ಕಳೆದ ತಿಂಗಳ 28 ರಂದು ರಾಜಧಾನಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಲೋಕಾಯುಕ್ತ ಕಚೇರಿಯಲ್ಲಿ ತನಿಖೆಗೆ ಬಾಕಿ ಉಳಿದಿರುವ ಪ್ರಕರಣಗಳ ಬಗ್ಗೆ ರಾಜ್ಯಪಾಲರನ್ನು ಮಾಹಿತಿ ಕೇಳಿದ್ದನ್ನು ಮನದಲ್ಲಿಟ್ಟುಕೊಂಡು ದುರಹಂಕಾರದ ಮಾತುಗಳನ್ನು ಆಡಿರುವ ಎ.ಡಿ.ಜಿ.ಪಿ. ಎಂ.ಚಂದ್ರಶೇಖರ್‍ರವರನ್ನು ತಕ್ಷಣವೆ ಸೇವೆಯಿಂದ ಅಮಾನತ್ತುಪಡಿಸಿ ತನಿಖೆ ನಡೆಸುವಂತೆ ಪ್ರತಿಭಟನಾನಿರತರು ಒತ್ತಾಯಿಸಿದರು.

ಜೆಡಿಎಸ್.ಜಿಲ್ಲಾಧ್ಯಕ್ಷ ಎಂ.ಜಯಣ್ಣ, ದಾವಣಗೆರೆ ಜಿಲ್ಲಾ ಉಸ್ತುವಾರಿ ಡಿ.ಯಶೋಧರ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಉಪಾಧ್ಯಕ್ಷ ಮಠದಟ್ಟಿ ವೀರಣ್ಣ, ತಾಲ್ಲೂಕು ಅಧ್ಯಕ್ಷ ಸಣ್ಣತಿಮ್ಮಣ್ಣ, ಜಿಲ್ಲಾ ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ಯುವ ಘಟಕದ ಜಿಲ್ಲಾಧ್ಯಕ್ಷ

ಓ. ಪ್ರತಾಪ್‍ಜೋಗಿ, ಮಂಜಣ್ಣ, ನಗರಸಭೆ ಸದಸ್ಯರುಗಳಾದ ದೀಪು, ನಸ್ರುಲ್ಲಾ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಬ್ಬು, ವೀರಭದ್ರಣ್ಣ, ಕರಿಬಸಪ್ಪ, ರುದ್ರಣ್ಣ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...