ಸುದ್ದಿಒನ್, ಚಿತ್ರದುರ್ಗ, ಅ. 02 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ದಿ.1-10-24ರಂದು ಮಂಗಳವಾರ ಎಸ್.ಜೆ.ಎಂ. ದಂತ ಮಹಾವಿದ್ಯಾಲಯದ 34ನೇ ಪದವಿ ಪ್ರದಾನ ಸಮಾರಂಭ ನೆರವೇರಿತು. ಕಾರ್ಯಕ್ರಮದಲ್ಲಿ ಬಿ.ಡಿ.ಎಸ್. ಪದವಿಯನ್ನು ಪೂರೈಸಿದ 55 ವಿದ್ಯಾರ್ಥಿಗಳು ಪದವಿ ಪ್ರಮಾಣ ಪತ್ರಗಳನ್ನು ಸ್ವೀಕರಿಸಿದರು.

ರಾಜೀವಗಾಂಧಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಕೆ. ರಮೇಶ್, ಬೆಂಗಳೂರು ರಾಜರಾಜೇಶ್ವರಿ ದಂತ ಮಹಾವಿದ್ಯಲಯದ ಪ್ರಾಂಶುಪಾಲರಾದ ಡಾ. ಹೆಚ್.ಸಿ. ಗಿರೀಶ್, ಎಸ್.ಜೆ.ಎಂ. ವಿದ್ಯಾಪೀಠ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು, ಡಾ. ಎಂ.ಹೆಚ್. ರಘುನಾಥರೆಡ್ಡಿ, ಪ್ರಾಚಾರ್ಯರು, ಎಸ್ಜೆಎಂ ದಂತ ಮಹಾವಿದ್ಯಲಯ ಇವರುಗಳು ವೇದಿಕೆಯಲ್ಲಿದ್ದರು.
ಡಾ. ಕೋದಂಡರಾಮ, ಡಾ. ಹರಿಣಿ, ಡಾ. ದೀಪಾ, ಡಾ. ಕೇಶವರೆಡ್ಡಿ, ಡಾ. ಹರೀಶ, ಡಾ. ಅಬ್ದುಲ್ ಮುಜೀಬ್, ಡಾ. ಜಯಚಂದ್ರ, ಡಾ. ತನ್ವೀರ ಅಹಮದ್ ಮೊದಲಾದವರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











