ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಮೈಸೂರು: ಇಂದಿನಿಂದ ವಿಶ್ವ ವಿಖ್ಯಾತ ದಸರಾ 2024ಕ್ಕೆ ಚಾಲನೆ ಸಿಕ್ಕಿದೆ. ಸಾಹಿತಿ ಹಂಪ ನಾಗರಾಜಯ್ಯ ಅವರು ದಸರಾಗೆ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಹಂಪ ನಾಗರಾಜಯ್ಯ ಅವರು, ಸರ್ಕಾರದ ಬಗ್ಗೆ ಕಾಳಜಿ ತೋರಿದ್ದಾರೆ. ಜನರೇ ಆಯ್ಕೆ ಮಾಡಿದ ಸರ್ಕಾರವನ್ನು ಬೀಳಿಸಬಾರದೆಂದು ಕಿವಿ ಮಾತು ಹೇಳಿದ್ದಾರೆ.
ಉದ್ಘಾಟನೆಯ ಬಳಿಕ ಮಾತನಾಡಿದ ಹಂಪ ನಾಗರಾಜಯ್ಯ ಅವರು, ಸರ್ಕಾರಗಳನ್ನು ಉರುಳಿಸುವ ದುರಾಲೋಚನೆ ಬರದಂತೆ ತಡೆಯಬೇಕು. ಚುನಾಯಿತ ಸರ್ಕಾರಗಳನ್ನು ಉಳಿಸುವ ಚಿಂತನೆಯಾಗಬೇಕು. ಲೋಕಾಂಬಿಕೆಯೂ ಅಂತಹ ಚಿಂತನೆ ಮೂಡಿಸಲಿ. ಸರ್ಕಾರ ಅಸ್ಥಿರತೆ ಮಾಡಬೇಡಿ. ಮೊದಲೇ ದೊಡ್ಡ ಹೊರೆಗಳಿಂದ ಶ್ರೀಸಾಮಾನ್ಯರು ಬಳಲಿ ಬಸವಳಿದಿದ್ದಾರೆ. ಪುನಃ ನಡೆಯುವ ಚುನಾವಣೆಗಳು ದೊಡ್ಡ ಹೊರೆಯಾಗಲಿವೆ. ಜನರಿಗೆ ಇನ್ನಷ್ಟು ಭಾರ ಹೇರಿದರೆ ಕುಸಿದು ಬಿಡುತ್ತಾನೆ. ಯಾವ ಪಕ್ಷವೂ ಅಧಿಕಾರದಲ್ಲಿ ಶಾಶ್ವತವಾಗಿ ಇರುವುದಕ್ಕೆ ಸಾಧ್ಯವಿಲ್ಲ. ಸೋತ ಪಕ್ಷವೂ ಮತ್ತೆ ಅಧಿಕಾರಕ್ಕೆ ಬರಬಹುದು. ಕೆಡವುವುದು ಸುಲಭ ಆದರೆ ಕಟ್ಟುವುದು ಬಹಳ ಕಷ್ಟ ಎಂದಿದ್ದಾರೆ.
ರಾಜ್ಯದಲ್ಲಿ ಸದ್ಯ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದೆ. ಆದರೆ ವಿಪಕ್ಷ ನಾಯಕರು ಸರ್ಕಾರ ಇಷ್ಟರಲ್ಲಿಯೇ ಪತನವಾಗುತ್ತೆ ಎಂದು ಹೇಳಿಕೊಂಡೆ ಬರುತ್ತಿದ್ದಾರೆ. ಹಾಗೇ ಮೂಡಾ ಹಗರಣದ ಸುದ್ದಿಯನ್ನಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕೆಂದು ಪ್ರತಿಭಟನೆಗಳನ್ನು ಮಾಡಿದ್ದಾರೆ. ಆದರೆ ವಿಪಕ್ಷಗಳ ಮಾತಿಗೆ ಜಗ್ಗದೆ ಸಿದ್ದರಾಮಯ್ಯ ಅವರು ತನಿಖೆ ಎದುರಿಸುತ್ತೇನೆ, ರಾಜೀನಾಮೆ ಕೊಡಲ್ಲ ಎಂದಿದ್ದಾರೆ. ಹೀಗಾಗಿಯೇ ಸಾಹಿತಿ ಹಂಪ ನಾಗರಾಜಯ್ಯ ಅವರು ಕಿವಿ ಮಾತು ಹೇಳಿದ್ದಾರೆ. ಜನರೇ ಆಯ್ಕೆ ಮಾಡಿರುವ ಸರ್ಕಾರವನ್ನು ಉಳಿಸುವ ಪ್ರಯತ್ನವಾಗಬೇಕೆಂದು ತಿಳಿಸಿದ್ದಾರೆ.


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್