Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಜ್ಞಾನದ ಅರಿವಿನಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ : ಡಾ.ಜಿ. ಎನ್ ಮಲ್ಲಿಕಾರ್ಜುನಪ್ಪ

Facebook
Twitter
Telegram
WhatsApp

ಸುದ್ದಿಒನ್, ಹಿರಿಯೂರು, ಅಕ್ಟೋಬರ್. 02 : ಯಾವುದೇ ದೇಶದ, ವ್ಯಕ್ತಿಯ ನಿಜವಾದ ಅಭಿವೃದ್ಧಿ ವಿಜ್ಞಾನದ ಬಗೆಗಿನ ಸರಿಯಾದ ಅರಿವಿನಿಂದ ಮಾತ್ರ ಸಾಧ್ಯ” ಎಂದು ಸಾಹಿತಿ, ಚಿಂತಕ ಹಾಗೂ ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಅಧ್ಯಕ್ಷ ಡಾ.ಜಿ. ಎನ್ ಮಲ್ಲಿಕಾರ್ಜುನಪ್ಪ ಅಭಿಪ್ರಾಯಪಟ್ಟರು.

ಅವರು ಹಿರಿಯೂರಿನ ಗಿರೀಶ ಶಿಕ್ಷಣ ಮಹಾವಿದ್ಯಾಲಯ ಮತ್ತು ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಸಹಯೋಗದಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ಖಗೋಳ ವಿಸ್ಮಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಮಾತನಾಡಿದರು.

ಬಾಹ್ಯಾಕಾಶದ ವಿದ್ಯಾಮಾನಗಳನ್ನು, ವಿಸ್ಮಯಗಳನ್ನು ದುರುಪಯೋಗಪಡಿಸಿಕೊಳ್ಳುವ ರೀತಿಯಲ್ಲಿ ಕಥೆಗಳನ್ನು ಹೆಣೆದು ಹೊಟ್ಟೆ ಹೊರೆವ ವರ್ಗ ಇಂದಿನ ಆಧುನಿಕ ಯುಗದಲ್ಲಿ ಭಯೋತ್ಪಾದಕ ರೀತಿಯಲ್ಲಿ ಮುಂದುವರೆದಿರುವುದು ಶೋಚನೀಯ. ಪೂಜೆ, ಯಜ್ಞ, ಹೋಮ ಹವನಾದಿಗಳ ಮೂಲಕ ಯಾವುದೇ ಭೌತಿಕ ಅಥವಾ ಭೌದ್ಧಿಕ ಪ್ರಗತಿ ಸಾಧ್ಯ” ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕ್ಷೇತ್ರಶಿಕ್ಷಣಾಧಿಕಾರಿ C.M ತಿಪ್ಪೇಸ್ವಾಮಿ “ಶಿಕ್ಷಕರಿಗೆ ಮತ್ತು ಶಿಕ್ಷಕರಾಗುವ ಕನಸು ಹೊತ್ತು ಶಿಕ್ಷಣ ಮಹಾವಿದ್ಯಾಲಯಗಳಲ್ಲಿ ಕಲಿಯುವ ಪ್ರಶಿಕ್ಷಣಾರ್ಥಿಗಳಿಗೆ ಜ್ಞಾನ ವಿಜ್ಞಾನದ ಕೌಶಲ್ಯಗಳನ್ನು ಅದೆಷ್ಟು ಕಲಿಸಿದರೂ ಕಡಿಮೆಯೇ” ಎಂದು ಹೇಳಿದರು.

ಉಪನ್ಯಾಸ ನೀಡಿ ಮಾತನಾಡಿದ ಹವ್ಯಾಸಿ ಖಗೋಳ ವೀಕ್ಷಕ ಎಚ್.ಎಸ್.ಟಿ.ಸ್ವಾಮಿ “ಖಗೋಳ ವಿಜ್ಞಾನ ಸತ್ಯಕ್ಕೆ ಹತ್ತಿರವಾದರೆ, ಅದನ್ನು ಅವಲಂಬಿಸಿ ಹೇಳುವ ಜ್ಯೋತಿಷ್ಯ ಕಾಲ್ಪನಿಕ ವ್ಯಾಖ್ಯಾನ ಮತ್ತು ವಿಶ್ಲೇಷಣೆ. ಆಕಾಶಕಾಯಗಳಲ್ಲಿನ ಯಾವುದೇ ಗ್ರಹ, ನಕ್ಷತ್ರಗಳು ಶ್ರೇಷ್ಠವೂ ಅಲ್ಲ, ಕಂಟಕವೂ ಅಲ್ಲ. ಅವುಗಳ ಬಗೆಗಿನ ಅರಿವು ನಮ್ಮನ್ನು ಮೌಢ್ಯಾಚರಣೆಗಳಿಂದ ದೂರವಿರಿಸುತ್ತದೆ. ಪ್ರತಿಯೊಬ್ಬರೂ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ”ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಎಂ. ಎ. ಸುಧಾ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸೈನ್ಸ್ ಫೌಂಡೇಶನ್ ಚಿತ್ರದುರ್ಗ ನಿರ್ದೇಶಕರಾದ ಪ್ರೊ.ಈ.ರುದ್ರಮುನಿ, ಕೆ.ವಿ.ನಾಗಲಿಂಗರೆಡ್ಡಿ, ಉಪನ್ಯಾಸಕಿ ಶ್ರೀಮತಿ ಡಿ.ವೇದಾ ವೇದಿಕೆಯಲ್ಲಿದ್ದರು. ಉಪನ್ಯಾಸಕ ಹೆಚ್. ಮಂಜುನಾಥ್ ಪ್ರಾಸ್ತಾವಿಕ ಭಾಷಣ ಮಾಡಿದರು.ಉಪನ್ಯಾಸಕಿ ಮಂಜುಮುತ್ತು ನಿರೂಪಿಸಿ,ಉಪನ್ಯಾಸಕ ನಿಜಲಿಂಗಪ್ಪ ವಂದಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Acidity : ಅಸಿಡಿಟಿಯಿಂದ ಬಳಲುತ್ತಿದ್ದೀರಾ ? ಇದನ್ನು ದಿನಕ್ಕೆ ಎರಡು ಬಾರಿ ಮಾಡಿ..!

  ಸುದ್ದಿಒನ್ : ಕೆಲವರು ಸ್ವಲ್ಪ ತಿಂದ ನಂತರ ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಾರೆ. ಇದು ದೇಹದ ಅಸ್ವಸ್ಥತೆ ಮತ್ತು ಎದೆಯುರಿ ಉಂಟುಮಾಡುತ್ತದೆ. ಈ ಹಠಾತ್ ಸಮಸ್ಯೆಯಿಂದ ಪರಿಹಾರ ಪಡೆಯಲು ಈ ಕೆಳಗಿನ ಮನೆಮದ್ದುಗಳನ್ನು ಪ್ರಯತ್ನಿಸಿ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ, ಶನಿವಾರ- ರಾಶಿ ಭವಿಷ್ಯ ಅಕ್ಟೋಬರ್-5,2024 ಸೂರ್ಯೋದಯ: 06:10, ಸೂರ್ಯಾಸ್ತ : 05:58 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿನ್ ಅಯಣ ಶರದ

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

error: Content is protected !!