Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುಲಿಗೆ ಪ್ರಕರಣ: ಹೆಚ್ಡಿಕೆಗೆ ವಿರುದ್ಧ ನಾನ್ ಬೇಲಬಲ್ ಎಫ್ಐಆರ್ ದಾಖಲು : ಕುಮಾರಸ್ವಾಮಿ ಮುಂದಿನ ನಡೆ ಏನು..?

Facebook
Twitter
Telegram
WhatsApp

ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ತಮ್ಮ ಪಕ್ಷದವರಿಂದಲೇ ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ. ಜೆಡಿಎಸ್ ಸೋಷಿಯಲ್ ಮೀಡಿಯಾ ಉಪಾಧ್ಯಕ್ಷರಾಗಿರುವ ವಿಜಯ್ ತಾತಾ ಈ ಸಂಬಂಧ ದೂರು ಸಲ್ಲಿಸಿದ್ದಾರೆ. ಕುಮಾರಸ್ವಾಮಿ ಅವರು 50 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿ ದೂರು ನೀಡಲಾಗಿದೆ. ದೂರಿನ ಆಧಾರದ ಮೇಲೆ ಎಫ್ಐಆರ್ ಕೂಡ ದಾಖಲಾಗಿದೆ. ಅದು ನಾನ್ ಬೇಲಬಲ್ ಸೆಕ್ಷನ್ ಅಡಿ ದೂರು ದಾಖಲಾಗಿದೆ.

ಬಿಎನ್​ಎಸ್ ಸೆಕ್ಷನ್ 3(5), 308(2), 351(2) ಅಡಿಯಲ್ಲಿ ದಾಖಲಾಗಿದೆ. 308 ಬಿಎನ್ಎಸ್ ಸೆಕ್ಷನ್​ ಅಂದ್ರೆ ಸುಲಿಗೆ ಆರೋಪ‌ ಪ್ರಕರಣವಾಗಿದೆ. ನಾನ್ ಬೇಲಬಲ್ ಕೇಸ್ ಆಗಿರುವ ಕಾರಣ, ಕುಮಾರಸ್ವಾಮಿ ಅವರನ್ನು ತಕ್ಷಣ ಅರೆಸ್ಟ್ ಮಾಡಲು ಬಹುದು. ಈ ಕೇಸ್ ಸುಮಾರು ಎರಡು ವರ್ಷಗಳ ಕಾಲ ಶಿಕ್ಷೆಯಾಗಲಿದೆ.

ಆದರೆ ಇನ್ನೊಂದು ಸೆಕ್ಷನ್ 3(5) ಇದು ಸಮಾನ ಉದ್ದೇಶ ಹೊಂದಿರುವ ಆರೋಪಿಗಳಿಗೆ ಸಂಬಂಧಿಸಿದ್ದಾಗಿದೆ‌. ಹೀಗಾಗಿ ತಕ್ಷಣವೇ ಅರೆಸ್ಟ್ ಮಾಡುವುದಕ್ಕೆ ಬರುವುದಿಲ್ಲ. ವಿಚಾರಣೆಗೆ ಏಳು ದಿನಗಳ ಕಾಲ ಅವಕಾಶ ನೀಡಬೇಕು. ಹಾಗೇ ನೋಟೋಸ್ ಗೂ ಬಾರದೆ ಇದ್ದಾಗ ಬಂಧನ ಮಾಡಬಹುದು. ನಾನ್ ಬೇಲಬಲ್ ಕೇಸ್ ಆಗಿರುವ ಕಾರಣ ಕೇಂದ್ರ ಸಚಿವ ಕುಮಾರಸ್ವಾಮಿ ಹೈಕೋರ್ಟ್ ಗೆ ಹೋಗುವ ಸಾಧ್ಯತೆ ಇದೆ. ಇನ್ನು ಇದಕ್ಕೆ ಸಂಬಂಧಿಸಿದಂತೆಯೇ ಫೋನ್ ಮೂಲಕ ಕುಮಾರಸ್ವಾಮಿ ಅವರು ಬೆದರಿಕೆ ಹಾಕಿರುವ ಆರೋಪವೂ ಇದೆ. ಕುಮಾರಸ್ವಾಮಿ ಯಾವ ರೀತಿಯಾಗಿ ಕಾನೂನು ಹೋರಾಟ ಮಾಡುತ್ತಾರೆಂದು ನೋಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ, ಶನಿವಾರ- ರಾಶಿ ಭವಿಷ್ಯ ಅಕ್ಟೋಬರ್-5,2024 ಸೂರ್ಯೋದಯ: 06:10, ಸೂರ್ಯಾಸ್ತ : 05:58 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿನ್ ಅಯಣ ಶರದ

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

ದರ್ಶನ್ ಜಾಮೀನಿಗಾಗಿ ವಕೀಲರು ಮಂಡಿಸಿದ ವಾದವೇನು..? ಇಲ್ಲಿದೆ ಪಾಯಿಂಟ್ ಪಾಯಿಂಟ್ ಹೈಲೇಟ್..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ನಟ ದರ್ಶನ್ ಈಗಾಗಲೇ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿ ಬಹಳ ದಿನಗಳೇ ಕಳೆದಿವೆ. ಆದರೆ ಚಾರ್ಜ್ ಶೀಟ್ ಸಂಪೂರ್ಣವಾಗಿ ಸ್ಟಡಿ ಮಾಡುವ ಕಾರಣಕ್ಕೆ ಆಗಾಗ ದರ್ಶನ್

error: Content is protected !!