Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಿರುಪತಿ ಲಡ್ಡು ಪ್ರಕರಣ : ವಿಶೇಷ ತನಿಖೆಗೆ ಆಗ್ರಹಿಸಿದ ಸುಪ್ರೀಂ ಕೋರ್ಟ್..!

---Advertisement---

 

ತಿರುಪತಿಗೆ ಹೋದವರು ಲಡ್ಡು ಪ್ರಸಾದವನ್ನು ತರದೆ ಬರುವುದೇ ಇಲ್ಲ. ಆದರೆ ಇದೇ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ದೇಶದಲ್ಲಿ ಈ ವಿಚಾರ ಬಾರೀ ಚರ್ಚೆಗೆ ಗ್ರಾಸವಾಗಿದೆ. ಈ ಸಂಬಂಧ ಇದೀಗ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ವಿಶೆಷವಾದ ತನಿಖೆಗೆ ಆಗ್ರಹ ಮಾಡಿದೆ‌.

ತಿರುಪತಿ ಲಡ್ಡು ತಯಾರಿಕೆಯಲ್ಲಿ ಮೀನು ಎಣ್ಣೆ, ಹಂದಿ‌ ಕೊಬ್ಬನ್ನು ಬಳಕೆ ಮಾಡಿದೆ ಎಂಬ ಆರೋಪವಿದೆ. ಈ ಸಂಬಂಧ ವಿಶೇಷ ತನಿಖಾ ತಂಡ ರಚಿಸಬೇಕು. ಅದರಲ್ಲಿ ಆಂಧ್ರಪ್ರದೇಶದ ಇಬ್ಬರೂ ಪೊಲೀಸ್ ಅಧಿಕಾರಿಗಳು, ಕೇಂದ್ರ ಆಹಾರ ನಿಯಂತ್ರಕ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಲಡ್ಡು ಪ್ರಕರಣದ ವಿಶೇಷ ತನಿಖಾ ತಂಡದಲ್ಲಿದ್ದಾರೆ ಎಂಬ ಮಾಹಿತಿಯನ್ನು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ನೀಡಿದೆ.

ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರಿದ್ದ ವಿಭಾಗೀಯ ಪೀಠದಲ್ಲಿ ಲಡ್ಡು ಪ್ರಕರಣ ವಿಚಾರಣೆ ನಡೆದಿದೆ. ಈ ವೇಳೆ ಈ ಪ್ರಕರಣದಲ್ಲಿ ಯಾವುದೇ ರೀತಿಯ ರಾಜಕೀಯ ಮಾಡುವುದು ಬೇಡ ಎಂದೇ ಪೀಠ ಹೇಳಿದೆ. ಯಾಕಂದ್ರೆ ಇದು ಪ್ರಪಂಚದಾದ್ಯಂತ ಇರುವ ತಿರುಪತಿ ತಿಮ್ಮಪ್ಪ ಭಕ್ತರ ನಂಬಿಕೆಯ ಪ್ರಶ್ನೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.

ತಿರುಪತಿ ಲಡ್ಡು ವಿಚಾರದಲ್ಲಿ ಹಾಲಿ ಹಾಗೂ ಮಾಜಿ ಸಿಎಂಗಳ ನಡುವೆ ಕಿತ್ತಾಟ ನಡೆದಿದೆ. ಹಾಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು, ಈ ಹಿಂದಿನ ಸಿಎಂ ಜಗನ್ ಮೋಹನ್ ರೆಡ್ಡಿ ಬಗ್ಗೆ ಆರೋಪ ಮಾಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳ ನಡುವೆಯೇ ವಾಗ್ಯುದ್ಧ ನಡೆಯುತ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment