Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

50/50 ಸೈಟ್ ಇದೆ : ಜಿಟಿಡಿ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಸ್ನೇಹಮಯಿ ಕೃಷ್ಣ..!

Facebook
Twitter
Telegram
WhatsApp

ಮೈಸೂರು: ಮೂಡಾ ಹಗರಣ ಬಳಕಿಗೆ ಬಂದಾಗಿನಿಂದ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡುವಂತೆ ಒಂದೇ ಸಮನೇ ದುಂಬಾಲು ಬಿದ್ದಿದ್ದಾರೆ. ಇದರ ನಡುವೆ ಜಿಟಿ ದೇವೇಗೌಡ ಅವರು ಸಿದ್ದರಾಮಯ್ಯ ಪರವಾಗಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ಯಾಕೆ ರಾಜೀನಾಮೆ ನೀಡಬೇಕು. ಕುಮಾರಸ್ವಾಮಿ ಅವರು ನೀಡುತ್ತಾರಾ ಎಂದು ನೇರವಾಗಿಯೇ ಕೇಳಿದ್ದರು. ಜಿಟಿ ದೇವೇಗೌಡ ಅವರು ಬೆಂಬಲ‌ ನೀಡಿದ್ದರ ಬಗ್ಗೆ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದು, ಅವರ ಮೇಲೂ ಆರೋಪ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ, ಮೂಡಾ ಹಗರಣದ ತನಿಖೆ ಬಗ್ಗೆ ದೂರು ನೀಡಿ, ಒತ್ತಾಯಿಸುತ್ತಿರುವ ಸ್ನೇಹಮಯಿ ಕೃಷ್ಣ ಅವರು, ಅವರದ್ದು ಪಾಲು ಇದೆ. ಅದಕ್ಕೆ ಈಗಲಿಂದಾನೇ ಪೀಠಿಕೆ ಹಾಕುತ್ತಿದ್ದಾರೆ. ಅವರದ್ದು ಕೂಡ ಇಲ್ಲಿ ನಿವೇಶನಗಳಿದಾವೆ. ಜಿಟಿ ದೇವೇಗೌಡ ಅವರ ಪ್ರಭಾವ ಬಳಸಿಕೊಂಡು ಅವರ ಕುಟುಂಬದವರು ನಿವೇಶನಗಳನ್ನ ಪಡೆದಿದ್ದಾರೆ.

 

ಜಿಟಿ ದೇವೇಗೌಡ್ರು ಮಾತ್ರವಲ್ಲ ಹಲವು ರಾಜಕಾರಣಿಗಳು ತಮ್ಮ ಪ್ರಭಾವ ಬಳಸಿ ನಿವೇಶನಗಳನ್ನ ಪಡೆದುಕೊಂಡಿದ್ದಾರೆ. ಅದೆಲ್ಲವೂ ಈಗ ತನಿಖೆಯಾಗಬೇಕು. ಸಿದ್ದರಾಮಯ್ಯ ಅವರ ವಿರುದ್ಧ ಮಾತ್ರ ನಾನು ಹೋರಾಡುತ್ತಿಲ್ಲ. ಅಕ್ರಮ ನಡೆಸಿದವರೆಲ್ಲರ ವಿರುದ್ಧ ನನ್ನ ಹೋರಾಟ‌ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಇದೆಲ್ಲದರ ತನಿಖೆ ನಡೆಯುತ್ತದೆ. ಕಳ್ಳರು ಕಳ್ಳರು ಒಂದಾಗುತ್ತಾರೆ. ತಮ್ಮ ಅಪರಾಧ ಕೊರತೆಯನ್ನು ಮುಚ್ಚಿ ಹಾಕಲು ಒಂದು ಸಂಚು ರೂಪಿಸುತ್ತಾರೆ. ಯಾರೆಲ್ಲ ನಿವೇಶನ ತೆಗೆದುಕೊಂಡಿದ್ದಾರೆ ಅವರೆಲ್ಲಾ ಒಂದಾಗುತ್ತಿದ್ದಾರೆ, ಒಟ್ಟಿಗೆ ಸಭೆ ನಡೆಸುತ್ತಿದ್ದಾರೆ. ಸಂಚು ರೂಪಿಸುತ್ತಿದ್ದಾರೆ. ನೋಡೋಣಾ‌ ಮುಂದೆ ಇನ್ನು ಏನೆಲ್ಲಾ‌ ಮಾಡುತ್ತಾರೆ ಎಂಬುದನ್ನು ಅಂತ ಸ್ನೇಹಮಯಿ‌ ಕೃಷ್ಣ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ, ಶನಿವಾರ- ರಾಶಿ ಭವಿಷ್ಯ ಅಕ್ಟೋಬರ್-5,2024 ಸೂರ್ಯೋದಯ: 06:10, ಸೂರ್ಯಾಸ್ತ : 05:58 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿನ್ ಅಯಣ ಶರದ

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

ದರ್ಶನ್ ಜಾಮೀನಿಗಾಗಿ ವಕೀಲರು ಮಂಡಿಸಿದ ವಾದವೇನು..? ಇಲ್ಲಿದೆ ಪಾಯಿಂಟ್ ಪಾಯಿಂಟ್ ಹೈಲೇಟ್..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ನಟ ದರ್ಶನ್ ಈಗಾಗಲೇ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿ ಬಹಳ ದಿನಗಳೇ ಕಳೆದಿವೆ. ಆದರೆ ಚಾರ್ಜ್ ಶೀಟ್ ಸಂಪೂರ್ಣವಾಗಿ ಸ್ಟಡಿ ಮಾಡುವ ಕಾರಣಕ್ಕೆ ಆಗಾಗ ದರ್ಶನ್

error: Content is protected !!