Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದರ್ಶನ್ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ..!

---Advertisement---

ಬೆಂಗಳೂರು: ದರ್ಶನ್ ಪತ್ನಿ ವಿಜಯಲಕ್ಷ್ಮೀ ನಿನ್ನೆಯಷ್ಟೇ ಬಳ್ಳಾರಿ ಜೈಲಿಗೆ ಭೇಟಿ ನೀಡಿ, ಧೈರ್ಯ ತುಂಬಿ ಹೋಗಿದ್ದರು. ಇಂದು ಜಾಮೀನು ಸಿಗುವ ಭರವಸೆಯನ್ನು ವ್ಯಕ್ತಪಡಿಸಿದ್ದರು. ಆದರೆ ಇಂದು ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ. ನಾಳೆ ಮಧ್ಯಾಹ್ನ 12.30ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ.

ಇಂದು ಕೋರ್ಟ್ ಗೆ ಹಿರಿಯ ವಕೀಲ ಎಸ್ಪಿಪಿ ಪ್ರಸನ್ನ ಕುಮಾರ್ ಹಾಜರಿದ್ದರು. ಅವರ ಸಮ್ಮುಖದಲ್ಲಿ ಸಿ.ವಿ. ನಾಗೇಶ್ ವಾದ ಮಂಡನೆ ಮಾಡಿದರು. ಮಾಧ್ಯಮಗಳು ದರ್ಶನ್ ಅವರನ್ನು ಅಪರಾಧಿ ಎಂದೇ ಬಿಂಬಿಸಿವೆ ಎಂದು ಸಿವಿ ನಾಗೇಶ್ ಟೀಕೆ ಮಾಡಿದ್ದಾರೆ. ಮಾಧ್ಯಮ, ಸಾಮಾಜಿಕ ಜಾಲತಾಣಗಳ ವಿಚಾರವನ್ನು ಉಲ್ಲೇಖಿಸಿದ್ದಾರೆ. ಇಂದು ದೀರ್ಘವಾಗಿ ವಾದ ಮಂಡನೆ ಮಾಡಿದ್ದಾರೆ.

ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿರುವ ವೈರುಧ್ಯಗಳ ಬಗ್ಗೆಯೂ ವಾದ ಮಂಡಿಸಿದ್ದಾರೆ. ಇಂದಿನ ವಾದ ಮಂಡನೆಯಲ್ಲಿ ಕೊಲೆಯಲ್ಲಿ ದರ್ಶನ್ ಪಾತ್ರವೇ ಇಲ್ಲ. ಸಹ ಆರೋಪಿಗಳ ಹೇಳಿಕೆ ಸುಳ್ಳು ಎಂದು ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾರೆ. ಡಿಜಿಟಲ್ ಸಾಕ್ಷಿಗಳನ್ನು ಕ್ರಿಯೇಟ್ ಮಾಡು ಆರೋಪ ಮಾಡಲಾಗಿದೆ.

ಆದರೆ ಇದಕ್ಕೆ ಆಕ್ಷೇಪಣೆ ಸಲ್ಲಿಸಿರುವ ಎಸ್ಪಿಪಿ ಪ್ರಸನ್ನಕುಮಾರ್, ವಾದ ಮಂಡನೆ ಮಾಡಿದ್ದಾರೆ. ದರ್ಶನ್ ಗೆ ಯಾಕೆ ಜಾಮೀನು ನೀಡಬೇಕೆಂದು ಪ್ರಶ್ನೆ ಮಾಡಿದ್ದಾರೆ. ವಾದ ಪ್ರತಿವಾದ ಆಲಿಸಿರುವ ಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ. ಇನ್ನು ಬಳ್ಳಾರಿ ಜೈಲಿನಲ್ಲಿ ದರ್ಶನ್ ಬೆನ್ನು ನೋವಿನ ಸಮಸ್ಯೆಯಿಂದ ನರಳುತ್ತಿದ್ದಾರೆ. ಜೈಲಿಗೆ ಬಂದ ವೈದ್ಯರು ತಪಾಸಣೆ ನಡೆಸಿದ್ದಾರೆ. ಆದರೆ ದರ್ಶನ್, ಸ್ಕ್ಯಾನಿಂಗ್ ಮಾಡಿಸಿಕೊಳ್ಳಲು ಒಪ್ಪಿಲ್ಲ. ನಾಳೆ ದರ್ಶನ್ ಕೇಸ್ ಏನಾಗಬಹುದು ಎಂಬ ಕುತೂಹಲವಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment