Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ನಿಸ್ವಾರ್ಥ ಸೇವೆ ಸಲ್ಲಿಸಿ ರೋಗಿಗಳ ಪ್ರಾಣ ಉಳಿಸಿ : ಶಾಸಕ ಡಾ.ಎಂ.ಚಂದ್ರಪ್ಪ

---Advertisement---

 

ವರದಿ ಮತ್ತು ಫೋಟೋ ಕೃಪೆ,
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಹೊಳಲ್ಕೆರೆ, ಅಕ್ಟೋಬರ್. 05 : ಎಂತಹ ಸಂದರ್ಭವೇ ಎದುರಾದರೂ ತಾಳ್ಮೆ, ಸಂಯಮ ಕಳೆದುಕೊಳ್ಳಬೇಡಿ. ಯಾರೆ ಆಸ್ಪತ್ರೆಗೆ ಬರಲಿ ತಾರತಮ್ಯವಿಲ್ಲದೆ ನಿಸ್ವಾರ್ಥ ಸೇವೆ ಸಲ್ಲಿಸಿ ರೋಗಿಗಳ ಪ್ರಾಣ ಉಳಿಸಿ ಎಂದು ಶಾಸಕ ಡಾ.ಎಂ.ಚಂದ್ರಪ್ಪ ವೈದ್ಯರುಗಳಿಗೆ ಕರೆ ನೀಡಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ನಡೆದ ಆರೋಗ್ಯ ರಕ್ಷಾ ಸಮಿತಿಯ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವೈದ್ಯರುಗಳನ್ನು ದೈವ ಸ್ವರೂಪಿಯಾಗಿ ಕಾಣಲಾಗುತ್ತಿದೆ. ನಲವತ್ತು ವರ್ಷಗಳಿಂದಲೂ ನನಗೆ ಜ್ವರ, ಕೆಮ್ಮ, ನೆಗಡಿ ಬಂದಿರುವುದು ಗೊತ್ತಿಲ್ಲ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಜೋಪಾನವಾಗಿ ಕಾಪಾಡಿಕೊಳ್ಳಬೇಕು. ಸಾರ್ವಜನಿಕರ ಸೇವೆ ಮಾಡಬೇಕೆಂಬ ಉದ್ದೇಶದಿಂದ ನನ್ನ ರಾಜಕೀಯ ಜೀವನದಲ್ಲಿ ಅತ್ಯುತ್ತಮವಾದ ಶಾಲಾ-ಕಾಲೇಜು, ಹೈಟೆಕ್ ಆಸ್ಪತ್ರೆ, ಸ್ಟೇಡಿಯಂ, ಒಳಾಂಗಣ ಕ್ರೀಡಾಂಗಣ, ಈಜುಕೊಳ ನಿರ್ಮಿಸಿದ್ದೇನೆ. ಮುಂದಿನ ಪೀಳಿಗೆಯ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ. ಇದಕ್ಕೆ ಕ್ಷೇತ್ರದ ಜನ ಸಹಕಾರ ನೀಡುತ್ತಿದ್ದಾರೆಂದು ಸ್ಮರಿಸಿದರು.

ತಾಯಿ-ಮಕ್ಕಳ ಆಸ್ಪತ್ರೆ ತುಂಬಾ ಮುಖ್ಯ. ಹೆಚ್.ಡಿ.ಪುರದಲ್ಲಿ ಹನ್ನೆರಡು ಕೋಟಿ ರೂ.ವೆಚ್ಚದಲ್ಲಿ ಹೈಟೆಕ್ ಆಸ್ಪತ್ರೆ ಕಟ್ಟಿಸಿದ್ದೇನೆ. ಚಿಕ್ಕಜಾಜೂರಿನಲ್ಲಿ ಹದಿನೈದು ಕೋಟಿಯಲ್ಲಿ ಸುಸಜ್ಜಿತವಾದ ಆಸ್ಪತ್ರೆ ನಿರ್ಮಾಣವಾಗಿದೆ. ವಸತಿ ಗೃಹಗಳಿಗೆ ಎರಡೆರಡು ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದೇನೆ. ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಲಕ್ಷಾಂತರ ರೂ.ಗಳನ್ನು ನೀಡಿ ಶಿಕ್ಷಣ, ಆರೋಗ್ಯ, ರಸ್ತೆಗೆ ಮಹತ್ವ ಕೊಟ್ಟಿದ್ದೇನೆ. ಒಟ್ಟಾರೆ ಸಮಾಜಕ್ಕೆ ವೈದ್ಯರುಗಳ ಸೇವೆ ಅತ್ಯವಶ್ಯಕ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ತಾಲ್ಲೂಕು ಆರೋಗ್ಯಾಧಿಕಾರಿ ಶ್ರೀಮತಿ ರೇಖಾ, ಪುರಸಭೆ ಮುಖ್ಯಾಧಿಕಾರಿ ಶ್ರೀಮತಿ ರೇಣುಕಾ

ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ವಿನಯ್ ಸಿ.ಸಜ್ಜನ್, ನಾಮ ನಿರ್ದೇಶಿತ ಸದಸ್ಯರುಗಳು, ವೈದ್ಯಾಧಿಕಾರಿಗಳು ಆರೋಗ್ಯ ರಕ್ಷಾ ಸಮಿತಿಯ ಸಾಮಾನ್ಯ ಸಭೆಯಲ್ಲಿ ಹಾಜರಿದ್ದರು.

 

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...