Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಾತಿಗಣತಿ ಜಾರಿಯಿಂದ ಸರ್ಕಾರ ಉರುಳುತ್ತದೆ ಎಂದಾದರೇ ಹಾಗೆಯೇ ಆಗಲಿ : ಬಿ.ಕೆ.ಹರಿಪ್ರಸಾದ್ ಸ್ಪೋಟಕ ಹೇಳಿಕೆ

Facebook
Twitter
Telegram
WhatsApp

ಬೆಂಗಳೂರು: ಜಾತಿಗಣತಿ ಜಾರಿಯಾಗಲಿದೆ ಎಂದು ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದಾಗಿನಿಂದ ಪರ-ವಿರೋಧ ಚರ್ಚೆಗಳು ಕೇಳಿ ಬರುತ್ತಲೇ ಇದಾವೆ. ಆದರೆ ಸರ್ಕಾರದಿಂದ ಮಾತ್ರ ಇನ್ನು ಜಾರಿಯಾಗಿಲ್ಲ. ಈ ಬಗ್ಗೆ ಇದೀಗ ಕಾಂಗ್ರೆಸ್ ಎಂಎಲ್ಸಿಯಾಗಿರುವ ಬಿ.ಕೆ.ಹರಿಪ್ರಸಾದ್ ವಿಚಾರ ತೆಗೆದಿದ್ದಾರೆ. ಸರ್ಕಾರ ಉರುಳಿದರು ಪರವಾಗಿಲ್ಲ ಎಂಬ ಮಾತುಗಳನ್ನಾಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಜಾತಿಗಣತಿ ಜಾರಿ ವಿಚಾರ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೇ ಇದೆ. ಆದರೆ‌ಜಾತಿಗಣತಿ ಜಾರಿಗೆ ಸರ್ಕಾರ ಯಾಕೆ ಚಿಂತೆ ಮಾಡುತ್ತಿದೆ. ಜಾರಿ ಮಾಡುವುದಕ್ಕೆ ಮೀನಾಮೇಷ ಎಣಿಸುತ್ತಿರುವುದೇಕೆ. ಮೊದಲು ಜಾತುಗಣತಿ ವರದಿಯನ್ನು ಜಾರಿಗೆ ತರಲಿ. ಜಾತಿ ಗಣತಿ ಜಾರಿಯಾದರೆ ಎಲ್ಲಾ‌ ಸಮುದಾಯದವರಿಗೂ ಅನುಕೂಲವಾಗಲಿದೆ. ಜಾತಿಗಣತಿಯಿಂದ ಸರ್ಕಾರ ಉರುಳುತ್ತದೆ ಎಂದಾರೆ ಹಾಗೆಯೇ ಆಗಲಿ. ರಾಹುಲ್ ಗಾಂಧಿ ಪ್ರಣಾಳಿಕೆಯಲ್ಲಿ ಗೌರವ ಇಟ್ಟುಕೊಂಡಿರುವವರು. ಈಗ ಅವರೇ ಜಾತಿ ಹಣತಿ ವರದಿ ಬಿಡುಗಡೆಗೆ ಬೆಂಬಲ ನೀಡಬೇಕು.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೇ ಜಾತಿ ಗಣತಿ ವರದಿ ಉಲ್ಲೇಖಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಕೂಡ ಅದನ್ನೇ ಉಲ್ಲೇಖಿಸಿದ್ದರು. ಪ್ರಪಂಚವೇ ಬಿದ್ದು ಹೋದರೂ ಜಾತಿ ಗಣತಿ ವರದಿ ಜಾರಿಯಾಗಬೇಕೆಂದು ರಾಹುಲ್ ಗಾಂಧಿ ಅವರೇ ಹೇಳಿದ್ದಾರೆ. ಅದೇ ರೀತಿ ಪ್ರಪಂಚ ತಲೆಕೆಳಗಾದರೆ ಆಗಲಿ, ಸರ್ಕಾರ ಬಿದ್ದು ಹೋದರೇ ಹೋಗಲಿ. ಯಾಕೆ ಹೆದರಬೇಕು ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ.

 

ಜಾತಿಗಣತಿ ಜಾರಿ ವಿಚಾರದಲ್ಲಿ ಸಿಮ ಸಿದ್ದರಾಮಯ್ಯ ಅವರು ಎಚ್ಚರಿಕೆಯ ಹೆಜ್ಜೆ ಇಡಬೇಕು. ಒಂದು ವರ್ಷ ಕಾಯುವುದು ಉತ್ತಮ ಎಂದು ಡಿಕೆ ಸುರೇಶ್ ಹೇಳಿದ್ದರು. ಇದಕ್ಕೂ ಬಿಕೆ ಹರಿಪ್ರಸಾದ್ ತಿರುಗೇಟು ನೀಡಿದ್ದು, ಜಾತಿಗಣತಿ ಜಾರಿ ವಿಚಾರ ನಮ್ಮ ಪ್ರಣಾಳಿಕೆಯಲ್ಲಿಯೇ ಇದೆ. ಡಿಕೆ ಸುರೇಶ್ ಅವರು ಪ್ರಣಾಳಿಕೆಯನ್ನು ತಿಳಿದುಕೊಂಡು ಮಾತನಾಡಿದ್ದಾರೋ ಇಲ್ಲವೋ ಗೊತ್ತಿಲ್ಲ ಎಂದೇ ಉತ್ತರಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶರಣ ಸಂಸ್ಕೃತಿ ಉತ್ಸವ 2024 : ನಸಾಬ್ ಚಲನಚಿತ್ರ ಪೋಸ್ಟರ್ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 06 : ಕೆ. ಕಿಶೋರ್ ಕುಮಾರ್ ನಿರ್ದೇಶನದ ಕೀರ್ತಿಕುಮಾರ್ ನಾಯ್ಕ ನಟಿಸಿರುವ ಇದೇ ತಿಂಗಳ 25 ರಂದು ಬಿಡುಗಡೆಗೊಳ್ಳಲಿರುವ ನಸಾಬ್ ಚಿತ್ರದ ಪೋಸ್ಟರ್ ಗಳನ್ನು ಚಿತ್ರದುರ್ಗದಲ್ಲಿ ಶರಣ ಸಂಸ್ಕøತಿ ಉತ್ಸವ

ಚಿತ್ರದುರ್ಗ ಜಿಲ್ಲಾ ವಕೀಲರಿಂದ ಅ13 ರಂದು ನಾಟಕ ಪ್ರದರ್ಶನ : ರಾಜವೀರ ಮದಕರಿನಾಯಕ”ಕ್ಕೆ ಭರ್ಜರಿ‌ ತಾಲೀಮು

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 06 :  ಜಿಲ್ಲಾ ವಕೀಲರ ಸಂಘ ಚಿತ್ರದುರ್ಗ ಹಾಗೂ ಜಿಲ್ಲಾ ವಕೀಲರ ಸಾಂಸ್ಕೃತಿಕ ಬಳಗ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 13 ರಂದು ಮದಕರಿ ನಾಯಕ ಜಯಂತಿ ಹಾಗೂ ದಸರಾ

ಗಿಡಗಳನ್ನು ನೆಟ್ಟು ಸುಮ್ಮನಾದರೆ ಸಾಲದು ಅವುಗಳ ರಕ್ಷಣೆಯ ಜವಾಬ್ದಾರಿಯನ್ನು ಹೊರಬೇಕು : ಕವಿ ಕೊರ್ಲಕುಟೆ ಜೆ.ತಿಪ್ಪೇಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 06 : ಗಿಡಗಳನ್ನು ಹಾಕಿ ಸುಮ್ಮನಾದರೆ ಸಾಲದು ಅವುಗಳ ರಕ್ಷಣೆಯ ಸಹ ಜವಾಬ್ದಾರಿ ಹೊರಬೇಕು

error: Content is protected !!