Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಲ್ಲಿಕಾರ್ಜುನ ಖರ್ಗೆ – ಸತೀಶ್ ಜಾರಕಿಹೊಳಿ ಭೇಟಿ : ಡಿಕೆ ಬ್ರದರ್ಸ್ ಮುಂದಿನ ನಡೆ ಏನು..?

Facebook
Twitter
Telegram
WhatsApp

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿಯೇ ಸತೀಶ್ ಜಾರಕಿಹೊಳಿ ನಡೆ ಸಂಚಲನ ಮೂಡಿಸಿದೆ. ಸತೀಶ್ ಜಾರಕಿಹೊಳಿ ಅವರು ಇದ್ದಕ್ಕಿದ್ದ ಹಾಗೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಬಂದಿದ್ದರು. ಈ ಭೇಟಿ ಹಲವು ಕುತೂಹಲಗಳಿಗೆ ಕಾರಣವಾಗಿದೆ. ಮೊದಲೇ ರಾಜ್ಯ ರಾಜಕಾರಣದಲ್ಲಿ ಏನೇನೋ ಸುದ್ದಿ ಸದ್ದು ಮಾಡುತ್ತಿದೆ. ಅದರಲ್ಲೂ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರುತ್ತಲೇ ಇದೆ. ಈ ಬೆನ್ನಲ್ಲೇ ಜಾರಕಿಹೊಳಿ ನಡೆ ಚರ್ಚೆ ಹುಟ್ಟು ಹಾಕಿದ್ದು, ಇದೀಗ ಡಿಕೆ ಬ್ರದರ್ಸ್ ಕೂಡ ದೆಹಲಿಗೆ ಹೋಗಲು ಪ್ಲ್ಯಾನ್ ಮಾಡಿದ್ದಾರೆ‌.

 

ಸದ್ಯ ದಸರಾ ಕಾರ್ಯಕ್ರಮಗಳು ನಡೆಯುತ್ತಿವೆ. ಹೀಗಾಗಿ ದಸರಾ ಮುಗಿದ ಮೇಲೆ ದೆಹಲಿಗೆ ಹೋಗುವುದಕ್ಕೆ ಯೋಜನೆ ಹಾಕಿಕೊಂಡಿದ್ದಾರೆ. ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಒಟ್ಟಾಗಿ ಹೋಗಿ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಸಿದ್ಧರಾಗಿದ್ದಾರೆ.

ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಈಗಾಗಲೇ ಸಮಯವನ್ನು ಕೇಳಿದ್ದಾರಂತೆ. ನಮಗೂ ವರಿಷ್ಠರ ಬೆಂಬಲವಿದೆ, ಮುಕ್ತ ಅವಕಾಶವಿದೆ ಎಂಬ ಸಂದೇಶ ಸಾರುವುದಕ್ಕೆ ಈ ಭೇಟಿ ಮಾಡುವ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ. ಜೊತೆಗೆ ರಾಜ್ಯದ ವಿದ್ಯಮಾನಗಳ ಬಗ್ಗೆ ಹೈಕಮಾಂಡ್ ನಾಯಕರಿಗೆ ಸಂಪೂರ್ಣ ಮಾಹಿತಿ ನೀಡಲು ಭೇಟಿಯಾಗುತ್ತಿದ್ದಾರೆ. ಸತೀಶ್ ಜಾರಕಿಹೊಳಿ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದಾಗ ಹಲವು ವಿಚಾರಗಳು ಚರ್ಚೆಯಾಗಿವೆ ಎನ್ನಲಾಗಿದೆ. ಹೀಗಾಗಿ ರಾಜ್ಯ ರಾಜಕಾರಣದಲ್ಲಿ ಈಗಾಗಲೇ ಸ್ಟ್ರಾಂಗ್ ಎನಿಸಿಕೊಂಡಿರುವ ಡಿಕೆ ಬ್ರದರ್ಸ್, ಹೈಮಾಂಡ್ ಭೇಟಿ ಮಾಡಿ, ರಾಜ್ಯ ರಾಜಕಾರಣದ ವರದಿ ಒಪ್ಪಿಸಲಿದ್ದಾರೆ. ದಸರಾ ಮುಗಿದ ಬಳಿಕ ದೆಹಲಿಯತ್ತ ಪಯಣ ಬೆಳೆಸಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ : ಮಳೆಗೆ ಜಿಲ್ಲೆಯಾದ್ಯಂತ 80 ಮನೆಗಳು ಹಾನಿ : ಮಳೆ ವರದಿ…!

ಚಿತ್ರದುರ್ಗ.ಅ.18:  ಗುರುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 15 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 6.8 ಹಿರಿಯೂರು ತಾಲ್ಲೂಕು 14.2 ಮಿ.ಮೀ, ಹೊಳಲ್ಕೆರೆ ತಾಲ್ಲೂಕು

ಚಿತ್ರದುರ್ಗ | ಮೂವರು ಮಹಿಳೆಯರು ಕಾಣೆ : ಪತ್ತೆಗೆ ಮನವಿ

ಚಿತ್ರದುರ್ಗ. ಅ.18: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂವರು ಮಹಿಳೆಯರು ಕಾಣೆಯಾದ ಕುರಿತು ಮೂರು  ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಹೊಳಲ್ಕೆರೆ ತಾಲ್ಲೂಕಿನ ತೇಕಲವಟ್ಟಿ ಗೊಲ್ಲರಹಟ್ಟಿ ಗ್ರಾಮದ ರೇಣುಕಮ್ಮ ಗಂಡ ಕರಿಯಪ್ಪ

ಜೈಲಿನಿಂದ ಬಿಡುಗಡೆಯಾದ ನಾಗೇಂದ್ರರಿಗೆ ಹೊಸ ಟಾಸ್ಕ್ ನೀಡಿದ ಸಿಎಂ ಸಿದ್ದರಾಮಯ್ಯ..!

  ಬೆಂಗಳೂರು : ವಾಲ್ಮೀಕಿ ಹಗರಣದಲ್ಲಿ ಬಂಧಿಯಾಗಿದ್ದ ಬಿ.ನಾಗೇಂದ್ರ ಅವರು ಇತ್ತೀಚೆಗಷ್ಟೇ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಜಮೀರ್ ಅಹ್ಮದ್ ಜೊತೆಗೂಡಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ

error: Content is protected !!