Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..!

Facebook
Twitter
Telegram
WhatsApp

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬೆಂಬಿಡದೆ ಮಳೆ ಸುರಿಯುತ್ತಲೆ ಇದೆ. ಇಂದು ಕೂಡ ಮಳೆಯಾಗುವ ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಎಚ್ಚರಿಕೆ ಕೊಟ್ಟಿದೆ. ದಕ್ಷಿಣ ಒಳನಾಡಿನಲ್ಲಿ ಮಿಂಚು, ಗುಡುಗು ಸಮೇತ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಅಕ್ಟೋಬರ್ 9ರವರೆಗೂ ಜೋರಾದ ಗಾಳಿಯೊಂದಿಗೆ ಮಳೆಯಾಗಲಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದ 15 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

 

ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬಳ್ಳಾರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಿಗೆ ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ಸೂಚನೆ ನೀಡಿದೆ. ಬಹುತೇಕ ಜಿಲ್ಲೆಯಲ್ಲಿ ಬೆಳಗ್ಗೆಯಿಂದಾನೂ ಮೋಡ ಕವಿದ ವಾತಾವರಣ ಮನೆ ಮಾಡಿದೆ.

ಇಂದು ಬೆಳಗ್ಗೆಯಿಂದಾನೇ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಶಿವಮೊಗ್ಗ, ವಿಜಯನಗರ, ಕೋಲಾರದಲ್ಲಿ ಸಾಧಾರಣ ಮಳೆಯಾಗಿದೆ. ಮೈಸೂರು, ಹೊನ್ನಾಳಿ ಸೇರಿದಂತೆ ಹಲವೆಡೆ ಬೆಳಗ್ಗೆಯಿಂದಾನೂ ಮಳೆ ಸುರಿದಿದೆ. ಒಂದೇ ಸಮನೆ ಮಳೆ ಸುರಿಯುತ್ತಿರುವ ಕಾತಣ ಜನ ಹೈರಾಣಾಗಿದ್ದಾರೆ.

ವಿಪರೀತ ಮಳೆಯಿಂದಾಗಿ ಕೆಲವೆಡೆ ಬೆಳೆ ನಾಶವಾಗಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಕೇಳಿದರೇನೆ ತಲೆ ಸುತ್ತಿ ಬೀಳುವಂತೆ ಆಗಿದೆ. ದಿನೇ ದಿನೇ ತರಕಾರಿ, ಸೊಪ್ಪಿನ ಬೆಲೆ ಏರಿಕೆಯಾಗುತ್ತಲೆ ಇದೆ. ಪ್ರತಿದಿನ ಮಳೆ ಸುರಿಯುತ್ತಿರುವ ಕಾತಣ ಕೆಲಸಕ್ಕೆ ಹೋಗುವವರದ್ದು ಕಷ್ಟದ ಬದುಕಾಗಿ ಬಿಟ್ಟಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ : ಮಳೆಗೆ ಜಿಲ್ಲೆಯಾದ್ಯಂತ 80 ಮನೆಗಳು ಹಾನಿ : ಮಳೆ ವರದಿ…!

ಚಿತ್ರದುರ್ಗ.ಅ.18:  ಗುರುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 15 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 6.8 ಹಿರಿಯೂರು ತಾಲ್ಲೂಕು 14.2 ಮಿ.ಮೀ, ಹೊಳಲ್ಕೆರೆ ತಾಲ್ಲೂಕು

ಚಿತ್ರದುರ್ಗ | ಮೂವರು ಮಹಿಳೆಯರು ಕಾಣೆ : ಪತ್ತೆಗೆ ಮನವಿ

ಚಿತ್ರದುರ್ಗ. ಅ.18: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂವರು ಮಹಿಳೆಯರು ಕಾಣೆಯಾದ ಕುರಿತು ಮೂರು  ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಹೊಳಲ್ಕೆರೆ ತಾಲ್ಲೂಕಿನ ತೇಕಲವಟ್ಟಿ ಗೊಲ್ಲರಹಟ್ಟಿ ಗ್ರಾಮದ ರೇಣುಕಮ್ಮ ಗಂಡ ಕರಿಯಪ್ಪ

ಜೈಲಿನಿಂದ ಬಿಡುಗಡೆಯಾದ ನಾಗೇಂದ್ರರಿಗೆ ಹೊಸ ಟಾಸ್ಕ್ ನೀಡಿದ ಸಿಎಂ ಸಿದ್ದರಾಮಯ್ಯ..!

  ಬೆಂಗಳೂರು : ವಾಲ್ಮೀಕಿ ಹಗರಣದಲ್ಲಿ ಬಂಧಿಯಾಗಿದ್ದ ಬಿ.ನಾಗೇಂದ್ರ ಅವರು ಇತ್ತೀಚೆಗಷ್ಟೇ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಜಮೀರ್ ಅಹ್ಮದ್ ಜೊತೆಗೂಡಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ

error: Content is protected !!