Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನನ್ನ ಅವರ ಸಂಬಂಧ ಸಾಯುವವರೆಗೂ ಕೆಡಲ್ಲ : ಜಮೀರ್ ಅಹ್ಮದ್

Facebook
Twitter
Telegram
WhatsApp

 

ಮೈಸೂರು: ಮಾಜಿ ಸಿದ್ದರಾಮಯ್ಯ ಅವರನ್ನ ಶಾಸಕ ಜಮೀರ್ ಅಹ್ಮದ್ ಯಾವಾಗಲೂ ಹೊಗಳುತ್ತಾರೆ ಅನ್ನೋದು ಗೊತ್ತಿರುವ ವಿಚಾರವೇ. ಇದೀಗ ನನ್ನ ಸಿದ್ದರಾಮಯ್ಯ ಸಂಬಂಧ ಸಾಯುವವರೆಗು ಕೆಡುವುದಿಲ್ಲ ಎಂದು ಮತ್ತೊಮ್ಮೆ ಹೇಳಿದ್ದಾರೆ.

ಜಿಲ್ಲೆಯಲ್ಲಿ ಮಾತನಾಡಿದ ಅವರು, ಅವರ ನನ್ನ ನಡುವಿನ ಸಂಬಂಧ ಕೆಡಲು ಸಾಧ್ಯವು ಇಲ್ಲ. ಅಂದು ಸಿದ್ದರಾಮಯ್ಯ ಭಾಷಣಕ್ಕೆ ನಮ್ಮ ಬೆಂಬಲಿಗರು ಅಡ್ಡಿ ಮಾಡಿಲ್ಲ. ಸಿದ್ದರಾಮಯ್ಯ ಭಾಷಣ ಮೊಟಕುಗೊಳಿಸಿಲ್ಲ.

ಪುನೀತ್ ರಾಜ್‌ಕುಮಾರ್ ಕಾರ್ಯಕ್ರಮಕ್ಕೆ ಹೋಗಬೇಕಿದ್ದ ಕಾರಣ 5 ನಿಮಿಷ ಮಾತನಾಡಿ ಹೋಗಿದ್ದಾರೆ. ನನ್ನ ಅನುಪಸ್ಥಿತಿಯಲ್ಲಿ ನನ್ನ ಅಭಿಮಾನಿಗಳು ಜೈಕಾರ ಕೂಗಿದ್ದು ಕಂಡು ಸಿದ್ದರಾಮಯ್ಯ ಖುಷಿಯಾಗಿದ್ದಾರೆ. ಈ ಬಗ್ಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಸಿದ್ದರಾಮಯ್ಯ ಈ ರೀತಿ ಹೊಟ್ಟೆಕಿಚ್ವು ಪಟ್ಟುಕೊಳ್ಳುವ ಮನುಷ್ಯ ಅಲ್ಲ. ಅವರಿಗೆ ಜೊತೆಗಾರರು ಬೆಳೆದರೆ ಸಂತೋಷವಾಗಿರುತ್ತಾರೆ.

ಇದೆ ವೇಳೆ ಮಳೆ ಅವಾಂತರದ ಬಗ್ಗೆ ಮಾತನಾಡಿದ್ದು, ಸಿಎಂ ಬೊಮ್ಮಾಯಿ ಅವರು ನೆಪಮಾತ್ರಕ್ಕೆ ನಗರ ಪ್ರದಕ್ಷಿಣೆ ಮಾಡಿದ್ದಾರೆ. ಜನರ ಸಂಕಷ್ಟವನ್ನ ಕೇಳಿಯೂ ಇಲ್ಲ.‌ ನೆರೆಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ಪರಿಹಾರ ಘೋಷಣೆ ಮಾಡಿಲ್ಲ. ನಿನ್ನೆ ಸಿಎಂ ನೆಪ‌ಮಾತ್ರಕ್ಕೆ ಕೆಲವು ರಸ್ತೆಗೆ ಹೋಗಿ ಬಂದಿದ್ದಾರೆ ಎಂದು ಕಿಡಿಕಾರಿದ್ದಾರೆ.

ವಿಧಾನಪರಿಷತ್ ಚುನಾವಣೆ ಬಗ್ಗೆ ಮಾತನಾಡಿದ ಜಮೀರ್, ಜೆಡಿಎಸ್ ಮತ್ತು ಬಿಜೆಪಿ ಜೊತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿರುವ ಸಾಧ್ಯತೆ ಇದೆ. ಯಾಕಂದ್ರೆ 25 ಸ್ಥಾನಕ್ಕು ಅಭ್ಯರ್ಥಿ ಹಾಕಬೇಕಿತ್ತು. ಆದ್ರೆ ಈಗ ಕೇವಲ 7 ಸ್ಥಾನಕ್ಕೆ ಮಾತ್ರ ಅಭ್ಯರ್ಥಿ ಹಾಕಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಮೇ 1ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಏ.30: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ

ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು : ಕೋರ್ ಕಮಿಟಿಯಲ್ಲಿ ತೀರ್ಮಾನ

ಹುಬ್ಬಳ್ಳಿ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಜಿ.ಟಿ ದೇವೇಗೌಡರ ನೇತೃತ್ವದ ಕೋರ್ ಕಮಿಟಿಯಲ್ಲಿ ಈ ಸಂಬಂಧ ನಿರ್ಧಾರವಾಗಿದ್ದು, ಅಮಾನತು ಮಾಡಲಾಗಿದೆ. ಈ ಸಂಬಂಧ

ಬಿಜೆಪಿ ನಾಯಕನಿಗೆ ಮಾತ್ರ ಪೆನ್ ಡ್ರೈವ್ ಕೊಟ್ಟಿದ್ದೆ : ಶಾಕಿಂಗ್ ವಿಡಿಯೋ ಬಿಟ್ಟ ಡ್ರೈವರ್ ಕಾರ್ತಿಕ್

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನೇ ದಿನೇ ಹಲವು ವಿಚಾರಗಳು ಹೊರಗೆ ಬರುತ್ತಿವೆ. ನಿನ್ನೆಯಷ್ಟೇ ವಕೀಲ, ಬಿಜೆಪಿ ನಾಯಕ ದೇವರಾಜೇಗೌಡ, ಪೆನ್ ಡ್ರೈವ್ ವಿಚಾರವಾಗಿ ಮಾತನಾಡಿ, ಕಾರ್ತಿಕ್ ಬಳಿ ಪೆನ್ ಡ್ರೈವ್

error: Content is protected !!