Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಸ್ತಿಪಟು ವಿನೇಶ್ ಪೋಗಟ್ ಗೆ ಹರಿಯಾಣ ಚುನಾವಣೆಯಲ್ಲಿ ಭರ್ಜರಿ ಗೆಲುವು..!

Facebook
Twitter
Telegram
WhatsApp

 

ವಿನೇಶ್ ಪೋಗಟ್ ಎಂದಾಕ್ಷಣ ಒಲಂಪಿಕ್ ನಲ್ಲಿ ನಡೆದ ಅವಾಂತರವೇ ತಕ್ಷಣಕ್ಕೆ ಕಣ್ಣ ಮುಂದೆ ಬರುತ್ತದೆ. ಚಿನ್ನದ ಪದಕಕ್ಕೆ ಮುತ್ತಿಡಬೇಕಾಗಿದ್ದ ವಿನೇಶ್ ಪೋಗಟ್ ಕೇವಲ 100 ಗ್ರಾಂ ಜಾಸ್ತಿಯಾಗಿದ್ದಕ್ಕೆ ರಿಜೆಕ್ಟ್ ಆಗಿದ್ದರು. ಹಾಗೇ ಕುಸ್ತಿಗೆ ವಿದಾಯವನ್ನು ಘೋಷಿಸಿದರು. ಇದರ ಬೆನ್ನಲ್ಲೇ ಚುನಾವಣೆಯಲ್ಲಿ ಸ್ಪರ್ಧಿಸಿದ ವಿನೇಶ್ ಪೋಗಟ್ ಭರ್ಜರಿ ಗೆಲುವು ಕಂಡಿದ್ದಾರೆ.

ಇಂದು ಹರಿಯಾಣ ವಿಧಾನಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಹರಿಯಾಟದಲ್ಲಿ ವಿನೇಶ್ ಪೋಗಟ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜೂಲಾನ ಕ್ಷೇತ್ರದಿಂದ ವಿನೇಶ್ ಪೋಗಟ್ ಸ್ಪರ್ಧೆ ಮಾಡಿದ್ದರು. 11 ನೇ ಸುತ್ತಿನ ಮತ ಎಣಿಕೆಯಲ್ಲೂ ವಿನೇಶ್ ಪೋಗಟ್ 50,617 ಮತಗಳನ್ನು ಪಡೆದಿದ್ದಾರೆ. ಎದುರಾಳಿಯ ವಿರುದ್ಧ 6,050 ಮತಗಳ ಅಂತರದಲ್ಲಿದ್ದಾರೆ. ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ಕಾರ್ಯ ನಡೆಯುತ್ತಿದೆ‌. ಬಹುತೇಕ ವಿನೇಶ್ ಪೋಗಟ್ ಗೆಲ್ಲುವುದು ಖಚಿತವಾಗಿದೆ ಇನ್ನೇನಿದ್ದರೂ ಘೋಷಣೆಯೊಂದೆ ಬಾಕಿ ಇದೆ.

ಇನ್ನೂ ವಿನೇಶ್ ಪೋಗಟ್ ಒಲಂಪಿಕ್ಸ್ ನಲ್ಲಿ ಹೊರಗೆ ಬಂದ ಬಳಿಕ ಸಾಕಷ್ಟು ಕಣ್ಣೀರು ಹಾಕಿದರು. ಕೂದಲೆಳೆ ಅಂತರದಲ್ಲಿ ಈ ರೀತಿಯಲ್ಲಿ ರಿಜೆಕ್ಟ್ ಆದರೆ ಯಾರಿಗೆ ತಾನೇ ನೋವಾಗಲ್ಲ ಹೇಳಿ. ಅಂದೇ ಮತ್ತೆ ಕುಸ್ತಿ ಆಡಲ್ಲ ಎಂದು ನಿರ್ಧಾರ ಕೂಡ ಮಾಡಿದರು. ನಾನು ಹೊಸ ಇನ್ನಿಂಗ್ಸ್ ಪ್ರಾರಂಭಿಸುತ್ತೇನೆ. ನಾನು ಅನುಭವಿಸಿದ್ದನ್ನು ಇನ್ಯಾವ ಕ್ರೀಡಾಪಟು ಅನುಭವಿಸಬಾರದು ಅಂತ ಹೇಳಿದ್ದರು. ಆರಂಭದಿಂದಾನೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ವಿರುದ್ಧ ಹೋರಾಟ ಮಾಡಿದರು. ಲೈಂಗಿಕ ಕಿರುಕುಳದ ಆರೋಪವಿದ್ದರು, ಬ್ರಿಜ್ ಭೂಷಣ್ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲದ ಕಾರಣಕ್ಕೂ ವೀನೇಶ್ ಪೋಗಟ್ ಬೇಸರ ಮಾಡಿಕೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ : ಮಳೆಗೆ ಜಿಲ್ಲೆಯಾದ್ಯಂತ 80 ಮನೆಗಳು ಹಾನಿ : ಮಳೆ ವರದಿ…!

ಚಿತ್ರದುರ್ಗ.ಅ.18:  ಗುರುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 15 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 6.8 ಹಿರಿಯೂರು ತಾಲ್ಲೂಕು 14.2 ಮಿ.ಮೀ, ಹೊಳಲ್ಕೆರೆ ತಾಲ್ಲೂಕು

ಚಿತ್ರದುರ್ಗ | ಮೂವರು ಮಹಿಳೆಯರು ಕಾಣೆ : ಪತ್ತೆಗೆ ಮನವಿ

ಚಿತ್ರದುರ್ಗ. ಅ.18: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂವರು ಮಹಿಳೆಯರು ಕಾಣೆಯಾದ ಕುರಿತು ಮೂರು  ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಹೊಳಲ್ಕೆರೆ ತಾಲ್ಲೂಕಿನ ತೇಕಲವಟ್ಟಿ ಗೊಲ್ಲರಹಟ್ಟಿ ಗ್ರಾಮದ ರೇಣುಕಮ್ಮ ಗಂಡ ಕರಿಯಪ್ಪ

ಜೈಲಿನಿಂದ ಬಿಡುಗಡೆಯಾದ ನಾಗೇಂದ್ರರಿಗೆ ಹೊಸ ಟಾಸ್ಕ್ ನೀಡಿದ ಸಿಎಂ ಸಿದ್ದರಾಮಯ್ಯ..!

  ಬೆಂಗಳೂರು : ವಾಲ್ಮೀಕಿ ಹಗರಣದಲ್ಲಿ ಬಂಧಿಯಾಗಿದ್ದ ಬಿ.ನಾಗೇಂದ್ರ ಅವರು ಇತ್ತೀಚೆಗಷ್ಟೇ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಜಮೀರ್ ಅಹ್ಮದ್ ಜೊತೆಗೂಡಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ

error: Content is protected !!