Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಪಕ್ಷಕ್ಕೆ ಹೆಚ್ಚಿನ ಸದಸ್ಯತ್ವ ನೊಂದಾಯಿಸಿ : ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 08 : ನಗರದ 35 ವಾರ್ಡ್‌ ಗಳಲ್ಲಿ ಸಮಿತಿ ರಚಿಸಿ ಹೆಚ್ಚಿನ ಸದಸ್ಯತ್ವ ನೊಂದಾಯಿಸುವಂತೆ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಕರೆ ನೀಡಿದರು.

ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಬಿಜೆಪಿ ನಗರ ಘಟಕ ಸದಸ್ಯತ್ವ ಅಭಿಯಾನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಕೇಂದ್ರ ಬಿಜೆಪಿ ಸರ್ಕಾರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸವಲತ್ತುಗಳನ್ನು ಪಡೆದುಕೊಂಡಿರುವವರು ಪ್ರತಿ ಮನೆಯಲ್ಲಿಯೂ ಸಿಗುತ್ತಾರೆ. ಅಂತಹವರನ್ನು ಹುಡುಕಿ ಪಕ್ಷದ ಯೋಜನೆಗಳ ಕುರಿತು ಮನವರಿಕೆ ಮಾಡಿ ಹೆಚ್ಚಿನ ಸದಸ್ಯತ್ವ ಪಕ್ಷಕ್ಕೆ ಸೇರ್ಪಡೆಗೊಳಿಸುವಂತೆ ನಗರ ಪದಾಧಿಕಾರಿಗಳಿಗೆ ತಿಳಿಸಿದರು.

ಗಾರೆಹಟ್ಟಿ, ಮಾಳಪ್ಪನಹಟ್ಟಿ, ಕೋಣನಹಟ್ಟಿ, ದವಳಗಿರಿ ಬಡಾವಣೆ, ಬಿ.ವಿ.ಕೆ.ಎಸ್.ಲೇಔಟ್, ಕೆಳಗೋಟೆ, ಹೌಸಿಂಗ್‍ಬೋರ್ಡ್ ಕಾಲೋನಿ, ಸಿಹಿನೀರು ಹೊಂಡ, ರೈಲ್ವೆ ಸ್ಟೇಷನ್, ಮಾರುತಿನಗರ, ವಿಜಯನಗರ, ಜೈನ್‍ಕಾಲೋನಿ, ಗುಮಾಸ್ತ ಕಾಲೋನಿ, ಟೀಚರ್ಸ್ ಕಾಲೋನಿ, ಚನ್ನಬಸಪ್ಪ ಕಾಂಪೌಂಡ್, ಜೋಗಿಮಟ್ಟಿ ರೋಡ್, ಬಿ.ಎಲ್.ಗೌಡ ಲೇಔಟ್ ಹೀಗೆ ನಗರದೆಲ್ಲೆಡೆ ಸುತ್ತಾಡಿ ಎಲ್ಲೆಲ್ಲಿ ಪಕ್ಷದ ಮತಗಳು ಜಾಸ್ತಿಯಿವೆಯೋ ಅಲ್ಲೆಲ್ಲಾ ಹೆಚ್ಚು ಸದಸ್ಯತ್ವ ನೊಂದಾಯಿಸಿದರೆ ನಲವತ್ತರಿಂದ ಐವತ್ತು ಸಾವಿರ ದಾಟಬಹುದು. ಅದಕ್ಕಾಗಿ ಒಂದೊಂದು ವಾರ್ಡ್‍ಗಳಲ್ಲಿ ತಂಡ ಕಟ್ಟಿಕೊಳ್ಳಿ ಎಂದು ಹೇಳಿದರು.

ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್, ಪ್ರಧಾನ ಕಾರ್ಯದರ್ಶಿ ಸಂಪತ್, ಯುವ ಮುಖಂಡ ಡಾ.ಸಿದ್ದಾರ್ಥ ಗುಂಡಾರ್ಪಿ ನಗರ ಮಂಡಲ ಅಧ್ಯಕ್ಷ ನವೀನ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ನಗರಸಭೆ ಸದಸ್ಯರುಗಳಾದ ಹೆಚ್.ಶ್ರೀನಿವಾಸ್, ಹರೀಶ್, ಯುವ ಮೋರ್ಚಾದ ರಾಮು, ವಕ್ತಾರ ನಾಗರಾಜ್‍ಬೇದ್ರೆ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶ್ರೀಮತಿ ಶೈಲಜಾರೆಡ್ಡಿ, ಬಸಮ್ಮ, ರಜಿನಿ, ಶಾಂತಮ್ಮ, ಲೀಲ ಇನ್ನು ಮುಂತಾದವರು ಸಭೆಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!