Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದ್ಯಾರ್ಥಿಗಳಲ್ಲಿ ಶಾಂತಿ ಸೌಹಾರ್ದತೆಯ ಸಂದೇಶ ಮೂಡಿಸಬೇಕು : ಎಂ.ಕೆ.ತಾಜ್‍ಪೀರ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 08 : ಎಲ್ಲಾ ಜಾತಿ ಧರ್ಮದವರು ಸೌಹಾರ್ದತೆಯಿಂದ ಬದುಕುತ್ತಿರುವುದರಿಂದ ಭಾರತಕ್ಕೆ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಹೆಗ್ಗಳಿಕೆಯಿದೆ ಎಂದು  ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಹೇಳಿದರು.

ದಮ್ಮ ಸಾಂಸ್ಕೃತಿಕ ಕೇಂದ್ರ, ಕರ್ನಾಟಕ ಶಾಂತಿ ಮತ್ತು ಸೌಹಾರ್ಧ ವೇದಿಕೆ ವತಿಯಿಂದ ಸ್ಟೇಡಿಯಂ ಸಮೀಪವಿರುವ ಬುದ್ದನ ಪ್ರತಿಮೆ ಮುಂಭಾಗದಿಂದ ಮಂಗಳವಾರ ಹೊರಟ ಸೌಹಾರ್ದ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.

ಪ್ರತಿ ಶಾಲಾ ಕಾಲೇಜುಗಳಲ್ಲಿ ವಾರಕ್ಕೊಂದು ದಿನವಾದರೂ ಸೌಹಾರ್ದ ಯಾತ್ರೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಶಾಂತಿ ಸೌಹಾರ್ದತೆಯ ಸಂದೇಶ ನೀಡಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ಹಿರಿಯರ ಇತಿಹಾಸಗಳನ್ನು ಯುವ ಪೀಳಿಗೆಗೆ ತಿಳಿಸಬೇಕೆಂದರು.

ದಮ್ಮ ಸಾಂಸ್ಕøತಿಕ ಕೇಂದ್ರದ ಆರ್.ವಿಶ್ವಸಾಗರ್ ಮಾತನಾಡಿ ಜಾತಿ ಧರ್ಮಗಳ ನಡುವೆ ಕೋಮು ಸೌಹಾರ್ದತೆ ಮೂಡಿಸುವ ಉದ್ದೇಶದಿಂದ ಹೊರಟಿರುವ ಸೌಹಾರ್ಧ ಯಾತ್ರೆ ಕಣಿವೆಮಾರಮ್ಮ ದೇವಸ್ಥಾನ, ಚರ್ಚ್, ಮಸೀದಿ, ಸೂಫಿ ಸಂತರ ಜಾಗಗಳಿಗೆ ತೆರಳಿ ದ್ವೇಷ ಭಾವನೆ ಮೂಡಿಸುವ ಬದಲು ಎಲ್ಲಾ ಜಾತಿ ಧರ್ಮದವರು ಸ್ನೇಹ ಸಹಭಾಳ್ವೆಯಿಂದ ಬದುಕುವ ಸಂದೇಶ ನೀಡುವುದು ಯಾತ್ರೆಯ ಉದ್ದೇಶ ಎಂದು ಹೇಳಿದರು.

ಕರ್ನಾಟಕ ಶಾಂತಿ ಮತ್ತು ಸೌಹಾರ್ಧ ವೇದಿಕೆ ಅಧ್ಯಕ್ಷ ನರೇನಹಳ್ಳಿ ಅರುಣ್‍ಕುಮಾರ್ ಮಾತನಾಡಿ ನೆಲಮೂಲದ ಸಂಸ್ಕೃತಿ ಹೊಂದಿರುವ ಭಾರತದಲ್ಲಿ ಶಾಂತಿ ಸೌಹಾರ್ದತೆಯಿಂದ ಬದುಕುವ ವಾತಾವರಣ ಸೃಷ್ಠಿಯಾಗಬೇಕಿದೆ. ಅಸಮಾನತೆ, ಅಶಾಂತಿಯನ್ನು ಹೋಗಲಾಡಿಸಿ ಎಲ್ಲರೂ ಪ್ರೀತಿ ಸಹೋದರತ್ವದಿಂದ ಬದುಕುವಂತಾಗಬೇಕೆನ್ನುವುದು ನಮ್ಮ ಉದ್ದೇಶ. ಹಾಗಾಗಿ ಬುದ್ದ, ಶರಣರು, ಸಾಧು ಸಂತರ ವಿಚಾರಗಳನ್ನು ಎಲ್ಲೆಡೆ ಬಿತ್ತಬೇಕಾಗಿದೆ. ದೇವಸ್ಥಾನ, ಚರ್ಚ್, ಮಸೀದಿಗಳಿಗೆ ಸೌಹಾರ್ದ ಯಾತ್ರೆ ಸಂಚರಿಸಲಿದೆ ಎಂದರು.

ಅನ್ನಪೂರ್ಣಮ್ಮ ವಿಶ್ವಸಾಗರ್, ಬೀಬಿಜಾನ್, ನಾಗರತ್ನ, ಅರಣ್ಯಸಾಗರ್, ಫಾದರ್ ಅಲೆಕ್ಸಾಂಡರ್, ಚಂದ್ರಶೇಖರ್, ಮುರುಗನ್, ಅಬ್ದುಲ್ ರೆಹಮಾನ್, ದಾದಾಪೀರ್, ಡಾ.ರಹಮತ್‍ವುಲ್ಲಾ, ರಹಮಾನ್, ಬಾಬು ಎಂ.ಆರ್.ನಗರ, ತಸ್ಮಿಯ, ಸ್ಪೂರ್ತಿ, ಮಾರುತಿನಗರದ ರಿಹಾನ್, ತನ್ವೀರ್, ಶಾಹಿನಭಾನು, ಅಖಿಲಭಾನು, ಕಾನೂನು ವಿದ್ಯಾರ್ಥಿ ಅನಿಲ್, ಆಕಾಶ್ ಎಂ. ಮಂಜುನಾಥ್ ಡಿ. ಇನ್ನು ಮುಂತಾದವರು ಸೌಹಾರ್ದ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!