Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್ ಹೆಲ್ತ್ ಚೆಕಪ್ ಗೆ ಬಳ್ಳಾರಿ ಜೈಲಿಗೆ ಬಂದ ವೈದ್ಯರು..!

Facebook
Twitter
Telegram
WhatsApp

ಬಳ್ಳಾರಿ: ನಟ ದರ್ಶನ್, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಜೈಲಿನಲ್ಲಿ ಕೂತಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ದರ್ಶನ್ ಗೆ ಅಲ್ಲಿ ಹೊಂದಿಕೊಳ್ಳುವುದು ಬಹಳಷ್ಟು ಸಂಕಟದ ವಿಚಾರವಾಗಿದೆ. ಬೆನ್ನು ನೋವಿನಿಂದಾನೂ ಬಳಲುತ್ತಿದ್ದಾರೆ. ಇದರ ನಡುವೆ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆಯೂ ನಡೆಯುತ್ತಿದೆ. ಇದೀಗ ಬಳ್ಳಾರಿ ಜೈಲಿಗೆ ದರ್ಶನ್ ಸೇರಿದಂತೆ ಎಲ್ಲಾ ಕೈದಿಗಳ ಆರೋಗ್ಯ ತಪಾಸಣೆಗಾಗಿ ವೈದ್ಯರು ಬಂದಿದ್ದಾರೆ.

ಐದು ಜನ ವೈದ್ಯರು ಬಂದಿದ್ರು, ಕೈದಿಗಳ ತಪಾಸಣೆಗೆ ಏನೆಲ್ಲಾ ಬೇಕೋ ಆ ಎಲ್ಲಾ ಅಗತ್ಯ ಮೆಡಿಕಲ್ ಕಿಟ್ ಅನ್ನು ತಂದಿದ್ದಾರೆ. ಜೈಲಿನಲ್ಲಿರು ಕೈದಿಗಳ ಆರೋಗ್ಯದ ಬಗ್ಗೆ ಜೈಲು ಅಧಿಕಾರಿಗಳು ಗಮನ ಹರಿಸುತ್ತಾರೆ. ಆಗಾಗ ವೈದ್ಯರು ಬಂದು ತಪಾಸಣೆ ನಡೆಸಿ, ಬೇಕಾದ ಔಷಧಗಳನ್ನು ನೀಡುತ್ತಾರೆ. ಇದೀಗ ಇಂದು ವೈದ್ಯರು ಭೇಟಿ ನೀಡಿದ್ದಾರೆ.

ದರ್ಶನ್ ಅವರು ಬಳ್ಳಾರಿ ಜೈಲಿಗೆ ಬಂದಾಗಿನಿಂದ ತಮಗೆ ಬೇಕಾದ ಮೆಡಿಕಲ್ ವಸ್ತುಗಳನ್ನು ಮನವಿ ಮಾಡಿ ಈಗಾಗಲೇ ತರಿಸಿಕೊಂಡಿದ್ದಾರೆ. ಆದರೆ ಬೆನ್ನು ನೋವಿಗೆ ಸ್ಕ್ಯಾನಿಂಗ್ ಮಾಡಿಸುವುದಕ್ಕೆ ಮಾತ್ರ ಒಪ್ಪುತ್ತಿಲ್ಲ. ಬೆಂಗಳೂರಿನಲ್ಲಿಯೇ ಮಾಡಿಸುತ್ತೇನೆ ಎಂದು ಹಠ ಮಾಡಿದ್ದಾರೆ. ಪೇನ್ ಕಿಲ್ಲರ್ ಮಾತ್ರೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ದರ್ಶನ್ ಕುಟುಂಬಸ್ಥರು ಕೂಡ ಆಗಾಗ ಬಳ್ಳಾರಿ ಜೈಲಿಗೆ ಬಂದು ದರ್ಶನ್ ಅವರನ್ನು ನೋಡಿಕೊಂಡು ಹೋಗುತ್ತಿದ್ದಾರೆ. ದರ್ಶನ್ ಅವರಿಗೆ ಅವರ ಪತ್ನಿ ವಿಜಯಲಕ್ಷ್ಮೀ ಸಾಕಷ್ಟು ಧೈರ್ಯ ತುಂಬುತ್ತಿದ್ದಾರೆ. ಜಾಮೀನು ಸಿಗುವ ವಿಶ್ವಾಸವನ್ನು ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ದರ್ಶನ್ ಪರ ವಕೀಲರು ಹಾಗೂ ಸರ್ಕಾರಿ ವಕೀಲರ ವಾದ ಪ್ರತಿವಾದ ನಡೆಯುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!