Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುರುವನೂರು ರಸ್ತೆಯ ರೈಲ್ವೆ ಕೆಳ ಸೇತುವೆ ಅವ್ಯವಸ್ಥೆ : ಕೂಡಲೇ ಸರಿಪಡಿಸಿ : ಸಂಸದ ಗೋವಿಂದ ಕಾರಜೋಳ

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಅ. 09 : ನಗರದಿಂದ ಹಾದು ಹೋಗುವ ತುರುವನೂರು ರಸ್ತೆಯಲ್ಲಿ ರೈಲು ಮಾರ್ಗವೂ ಕೂಡಾ ಹಾದು ಹೋಗಿದೆ. ಈ ಮಾರ್ಗದ ಮೂಲಕ ಬೆಳಗಟ್ಟ – ತುರುವನೂರು- ಜಗಳೂರು ಮತ್ತು ಬೆಳಗಟ್ಟ – ನಾಯಕನಹಟ್ಟಿ – ಚಳ್ಳಕೆರೆ ಮಾರ್ಗಗಲ್ಲಿ ಹಲವಾರು ಹಳ್ಳಿಗಳಿಗೆ ಇದೇ ರೈಲ್ವೆ ಕೆಳ ಸೇತುವೆ ಮೂಲಕವೇ ಹಾದು ಹೋಗಬೇಕು. ಆದರೆ ಈ ಕೆಳಸೇತುವೆಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದ್ದು. ಪ್ರತಿ ಸಾರಿ ಮಳೆ ಬಂದಾಗ ರೈಲ್ವೆ ಕೆಳ ಸೇತುವೆಯಲ್ಲಿ ನೀರು ನಿಲ್ಲುತ್ತದೆ. ಅದೇ ರೀತಿ ನಿನ್ನೆ (ಮಂಗಳವಾರ) ರಾತ್ರಿ ಸುರಿದ ಮಳೆಗೆ ಸೇತುವೆಯಲ್ಲಿ ನೀರು ಸಂಗ್ರಹವಾಗಿ ವಾಹನ ಸಂಚಾರಕ್ಕೆ ಅಡಚಣೆಯಾಗಿರುವುದನ್ನು ಸಂಸದ ಗೋವಿಂದ ಕಾರಜೋಳ ಇಂದು ವೀಕ್ಷಣೆ ಮಾಡಿ ರೈಲ್ವೆ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡು ಕೂಡಲೇ ಸರಿಪಡಿಸುವಂತೆ ಸೂಚನೆ ನೀಡಿದರು.

ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ರೈಲ್ವೆ ಅಧಿಕಾರಿಗಳ ಸಭೆಯಲ್ಲಿ ಈ ರೀತಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ರೈಲ್ವೆ ಕೆಳಸೇತುವೆಗಳ ಬಳಿ ನೀರು ಜಮಾವಣೆಯಾಗುತ್ತಿದ್ದು, ಇಂತಹ ಸೇತುವೆಗಳನ್ನು ಪಟ್ಟಿ ಮಾಡಿ ಸಭೆಯಲ್ಲಿ ರೈಲ್ವೆ ಅಧಿಕಾರಿಗಳ ಗಮನ ಸೆಳೆಯಲಾಗಿತ್ತು. ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂತಹ ಸಾಕಷ್ಟು ಸೇತುವೆಗಳ ಬಳಿ ನೀರು ಜಮಾವಣೆಯಾಗುತ್ತಿದ್ದು, ಕೂಡಲೇ ಇವುಗಳನ್ನು ಸರಿಪಡಿಸುವಂತೆ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪಠ್ಯಪುಸ್ತಕಗಳಲ್ಲಿ ಸಿರಿಯಜ್ಜಿ ಜನಪದ ಗೀತೆಗಳನ್ನು ಸೇರಿಸಿ : ಒ. ಚಿತ್ತಯ್ಯ ಒತ್ತಾಯ

ಸುದ್ದಿಒನ್, ಪರಶುರಾಮಪುರ, ಅಕ್ಟೋಬರ್. 18 : ಪ್ರಾಥಮಿಕ ಹಾಗೂ ಪ್ರೌಢಶಾಲಾ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ನಾಡೋಜೆ ದಿವಂಗತ ಜಾನಪದ ಸಿರಿ ಸಿರಿಯಜ್ಜಿ ಜನಪದ ಗೀತೆಗಳನ್ನು ಸೇರಿಸಿ ಇಂದಿನ ಅಧುನಿಕ ಕಾಲಘಟ್ಟದ ವಿದ್ಯಾರ್ಥಿಗಳಿಗೆ ಜನಪದ ಸಾಹಿತ್ಯದ

ಚಿತ್ರದುರ್ಗದಲ್ಲಿ ಸ್ವಾಮೀಜಿ ವಿರುದ್ಧ ಮುಸ್ಲಿಮರಿಂದ ಬೃಹತ್ ಪ್ರತಿಭಟನೆ : ಕಾನೂನು ಕ್ರಮಕ್ಕೆ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ವಿಶ್ವಕ್ಕೆ ಶಾಂತಿಯ ಸಂದೇಶ ಸಾರಿದ ಪ್ರವಾದಿ ಮಹಮದ್ ಪೈಗಂಬರ್ ರವರ ಬಗ್ಗೆ

ಸಾಮಾಜಿಕ ಕಾರ್ಯಗಳಿಗೆ ಸ್ವಯಂ ಸೇವಕರ ಅಗತ್ಯ : ಶಾಸಕ ಕೆ.ಸಿ.ವೀರೇಂದ್ರ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಸಾಮಾಜಿಕ ಕಳಕಳಿಯುಳ್ಳವರು ಸಂಘದಲ್ಲಿದ್ದಾಗ ಮಾತ್ರ ಬಲಿಷ್ಟವಾಗಿ ಮುನ್ನಡೆಸಿಕೊಂಡು ಹೋಗಬಹುದು ಎಂದು ಶಾಸಕ

error: Content is protected !!