Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅವಳನ್ನು ಮುಟ್ಟಿದ್ರೆ ನನ್ನ ತಾಯಿಯನ್ನು ಮುಟ್ಟಿದಂತೆ : ಅತ್ಯಾಚಾರ ಆರೋಪಕ್ಕೆ ವಿನಯ್ ಕುಲಕರ್ಣಿ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ಶಾಸಕ ವಿನಯ್ ಕುಲರ್ಣಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದೀಗ ಶಾಸಕ ವಿನಯ್ ಕುಲಕರ್ಣಿ ಕೂಡ ಪ್ರತಿ ದೂರು ದಾಖಲಿಸಿದ್ದಾರೆ. ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಂತ್ರಸ್ತೆ ಸಂಚು ರೂಪಿಸಿ, ಮಾನಹಾನಿ ಮಾಡಿದ್ದಾರೆ. ರಾಜಕೀಯ ನಾಯಕರಿಗೂ ಬ್ಲಾಕ್ ಮೇಲ್ ಮಾಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತಮ್ಮ ಮೇಲೆ ಬಂದಿರುವ ಆರೋಪದ ಬಗ್ಗೆ ಮಾತನಾಡಿರುವ ಶಾಸಕ ವಿನಯ್ ಕುಲಕರ್ಣಿ, ನಾನು ಆಕೆಯನ್ನು ಟಚ್ ಮಾಡಿದರೆ ನನ್ನ ತಾಯಿಯನ್ನು ಟಚ್ ಮಾಡಿದಂತೆ. ಇಷ್ಟೇ ಹೇಳುತ್ತೇನೆ. ನನ್ನ ವಿರುದ್ಧ ಮಹಿಳೆಯೊಬ್ಬರು ಕಿರುಕುಳ ಆರೋಪ ಹೊರಿಸಿದ್ದಾರೆ. ಈ ವಿಚಾರ ಏನಂದ್ರೆ ಒಂದು ವಿಡಿಯೋ ಕಾಲ್ ಮಾಡಿದ್ದು. ಆ ವಿಚಾರ ಇಟ್ಟುಕೊಂಡು ಇಷ್ಟೆಲ್ಲಾ ಆರೋಪ ಮಾಡುತ್ತಿದ್ದಾರೆ. ಅದೆಲ್ಲ ಸತ್ಯಕ್ಕೆ ದೂರವಾಗಿದೆ. ನಾನು ರಾಜಕೀಯದಲ್ಲಿ ಇಷ್ಟು ವರ್ಷ ಇದ್ದೇನೆ. ಆದರೆ ಯಾರ ಜೊತೆಗೂ ನಾನು ಕೆಟ್ಟದಾಗಿ ನಡೆದುಕೊಂಡಿಲ್ಲ.

ಕೆಲವು‌ ಮಂದಿ ಹಿಂದೆಯಿಂದ ಮಾಡಿಸುತ್ತಿರಬಹುದು. ನನ್ನದೂ ಒಂದು ಕೇಸ್ ಇದೆ. ಸಾಕ್ಷಿಗಳ ಮೇಲೆ ಇಂಪ್ಯಾಕ್ಟ್ ಮಾಡಿಸುವ ಷಡ್ಯಂತ್ರವಿದು. ನಾನಂತು ಈ ವಿಚಾರದಲ್ಲಿ ಸ್ಪಷ್ಟವಾಗಿದ್ದೇನೆ. ಇದರಲ್ಲಿ ನನ್ನದೇನು ಪಾತ್ರವಿಲ್ಲ. ನಾನೂ ಕೂಡ ದೂರು ಕೊಟ್ಟಿದ್ದೇನೆ. ಈ ಬಗ್ಗೆ ತನಿಖೆ ಆಗಲಿ, ಸತ್ಯಾಸತ್ಯತೆ ಹೊರ ಬರಲಿ ಎಂದಿದ್ದಾರೆ.

ಇದೀಗ ವಿನಯ್ ಕುಲಕರ್ಣಿ ಪ್ರತಿ ದೂರಿನ ಮೇರೆಗೆ ಸಂಜಯನಗರ ಪೊಲೀಸರು, ಕನ್ನಡ ಸುದ್ದಿ ವಾಹಿನಿ ಮಾಲೀಕ ಹಾಗೂ ರೈತ ಮಹಿಳೆಯ ಮೇಲೆ ದೂರು ದಾಖಲಿಸಿಕೊಂಡಿದ್ದಾರೆ. ಖಾಸಗಿ ಸುದ್ದಿ ವಾಹಿನಿಯ ಮಾಲೀಕನೆ ಎ1 ಆರೋಪಿಯಾಗಿದ್ದು, ರೈತ ಮಹಿಳೆ ಎ2 ಆರೋಪಿಯಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!