Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ ದರೋಡೆ ಪ್ರಕರಣ : ಇಬ್ಬರ ಬಂಧನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ,ಅಕ್ಟೋಬರ್. 09 : ತಾಲೂಕಿನ ಹಿರೇಹಳ್ಳಿ ಗ್ರಾಮದ ಸಮೀಪ ಹೊರವಲಯದಲ್ಲಿದ್ದ ಒಂಟಿ ಮನೆಯ ಬಾಗಿಲು ಮುರಿದು ಒಳಗೆ ನುಗ್ಗಿದ ಕಳ್ಳರು ಮನೆಯ ಯಜಮಾನಿಗೆ ಚಾಕು ತೋರಿಸಿ ಎದುರಿಸಿ ಹಗ್ಗದ ಸಹಾಯದಿಂದ ಕೈಗಳನ್ನು ಕಟ್ಟಿ ಮನೆಯಲ್ಲಿದ್ದ ರೂ. 6,52,500 ನಗದು ಮತ್ತು ಹೆಣ್ಣು ಮಗಳ ಮೈ ಮೇಲಿನ ಆಭರಣಗಳನ್ನ ದೋಚಿಕೊಂಡು ಪರಾರಿಯಾಗಿದ್ದರು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಚಿತ್ರದುರ್ಗ ಜಿಲ್ಲಾ ಎಸ್ ಪಿ ರಂಜಿತ್ ಕುಮಾರ್ ಬಂಡಾರು ಹಾಗೂ ಹೆಚ್ಚುವರಿ ಪೊಲೀಸ ಅಧ್ಯಕ್ಷರಾದ ಕುಮಾರಸ್ವಾಮಿ ಚಳ್ಳಕೆರೆ ಡಿ ವೈ ಎಸ್ ಪಿ ಟಿ ಬಿ ರಾಜಣ್ಣ ಇವರ ನೇತೃತ್ವದಲ್ಲಿ ತಳಕು ಪೊಲೀಸ್ ಠಾಣೆಯ ಪಿಎಸ್ಐ ಲೋಕೇಶ್ ಹಾಗೂ ಶಿವಕುಮಾರ್ ಪೋಲಿ ಸ್.ಸಿಬ್ಬಂದಿಗಳು ಸಿಬ್ಬಂದಿಗಳು ಒಂಟಿ ಮನೆ ದರೋಡೆ ಮಾಡಿ ತಲೆ ತಪ್ಪಿಸಿಕೊಂಡಿದ್ದ ದರೋಡೆಕೋರರಾದ ಆಂಧ್ರ ಪ್ರದೇಶ ಅನಂತಪುರ ಜಿಲ್ಲೆಯ ರುದ್ರಂಪೇಟೆ ಎನ್ ಜಿ ಓ ಕಾಲೋನಿಯ ನೀಲಂ ಶ್ರೀರಾಮ್ ವಿಜಯ್, ವಿಜಯವಾಡದ ರಂಗುಲ ಪ್ರಸಾದ್. ಇಬ್ಬರನ್ನ ಪೊಲೀಸರು ಪತ್ತೆ ಮಾಡಿ ವಶಕ್ಕೆ ಪಡೆದಿದ್ದು ದರೋಡೆಯಲ್ಲಿ ಮುಖಂಡತ್ವ ವಹಿಸಿದ ಪಾಲ ವೆಂಕಟೇಶ್ ರಾವ್ ತಲೆ ತಪ್ಪಿಸಿಕೊಂಡಿದ್ದಾನೆ.

ಇಬ್ಬರನ್ನ ವಶಕ ಪಡೆದ ಪೊಲೀಸರು ಅವರಿಂದ ರಾಬರಿ ಮಾಡುವಾಗ ಬಳಸಿದ್ದ ಸಿಸಿ ಕ್ಯಾಮೆರಾ, ಮುಖದ ಕ್ಯಾಪ್, ಚಾಕುಗಳು, ಟಾರ್ಚ್ಗಳು, ಕಟರ್ ‌ಮೊಲ ಹಿಡಿಯುವ ಬಲೆ ,ಪ್ಲಾಸ್ಟಿಕ್ ಹಾಗೂ ಮೊಬೈಲ್ ಇವುಗಳನ್ನ ವಶಕ ಪಡೆದಿದ್ದು ನ್ಯಾಯಾಲಯದ ಮುಂದೆ ಈ ಇಬ್ಬರನ್ನ ಹಾಜರಿ ಪಡಿಸಲಾಗಿದೆ.

ಮೂರು ತಿಂಗಳ ಹಿಂದೆ ನಡೆದ ಒಂಟಿ ಮನೆ ದರೋಡೆಯನ್ನ ಪತ್ತೆ ಹಚ್ಚಿ ಅವರನ್ನು ವಶಕ್ಕೆ ಪಡೆದ ತಂಡವನ್ನು ಜಿಲ್ಲಾ ಎಸ್ ಪಿ ಅಭಿನಂದಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment