Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆ : ಚಿತ್ರದುರ್ಗದಲ್ಲಿ ಸ್ವಾಗತ

Facebook
Twitter
Telegram
WhatsApp

 

ಚಿತ್ರದುರ್ಗ. ಅ.10 :  ಕಿತ್ತೂರು ಉತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ವಿಜಯ ಜ್ಯೋತಿ ಯಾತ್ರೆಯು ಬುಧವಾರ ಚಿತ್ರದುರ್ಗ ನಗರ ತಲುಪಿತು.

ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಸಮೀಪ  ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಯನ್ನು ಹರಿಹರ ವಚನಾನಂದ ಸ್ವಾಮೀಜಿಗಳು, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ಡಾ.ನಾಗವೇಣಿ ಸ್ವಾಗತಿಸಿ, ಪೂಜೆ ಸಲ್ಲಿಸಿದರು.

ನಗರದ ಬಿ.ಡಿ.ರಸ್ತೆಯ ಮೂಲಕ ಕಲಾ ತಂಡಗಳೊಂದಿಗೆ ಸಾಗಿದ ವಿಜಯ ಜ್ಯೋತಿ ಯಾತ್ರೆಗೆ ತರಾಸು ರಂಗಮಂದಿರದ ಮುಂಭಾಗದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸ್ವಾಗತಿಸಿ, ರಥದಲ್ಲಿದ್ದ ರಾಣಿ ಚನ್ನಮ್ಮ ಪುತ್ಥಳಿಗೆ ಹಾರ ಅರ್ಪಿಸಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ನಂತರ ಯಾತ್ರೆಯು ನಗರದ ಪ್ರವಾಸಿ ಮಂದಿರ, ಗಾಂಧಿ ವೃತ್ತದ ಮೂಲಕ ಮುರುಘಾ ರಾಜೇಂದ್ರ ಮಠದ ವರೆಗೂ ಸಂಚರಿಸಿತು.

ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಅ.23 ರಿಂದ 25 ರವರೆಗೆ ನಡೆಯಲಿರುವ ಕಿತ್ತೂರು ಉತ್ಸವ ಪ್ರಯುಕ್ತ ರಾಜ್ಯದಾದ್ಯಂತ ಸಂಚರಿಸುವ ಈ ವಿಜಯ ಜ್ಯೋತಿ ಯಾತ್ರೆ ತುಮಕೂರಿನಿಂದ ಚಿತ್ರದುರ್ಗ ಜಿಲ್ಲೆಗೆ ತಲುಪಿದ್ದು, ಜಿಲ್ಲೆಯಿಂದ ದಾವಣಗೆರೆ ಜಿಲ್ಲೆಗೆ ಬಿಳ್ಕೊಡಲಾಯಿತು.

ಈ ಸಂದರ್ಭದಲ್ಲಿ ವಚನಾನಂದ ಸ್ವಾಮೀಜಿ, ಮಡಿವಾಳ ಮಾಚಿದೇವ ಸ್ವಾಮೀಜಿ, ಬಸವ ಕುಮಾರಸ್ವಾಮೀಜಿ, ಸೇರಿದಂತೆ ವಿವಿಧ ಸ್ವಾಮೀಜಿಗಳು, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ಡಾ.ನಾಗವೇಣಿ, ಸಮಾಜದ ಶಿವಪ್ರಕಾಶ್, ಪರಮೇಶ್ವರಪ್ಪ, ಗುತ್ತಿನಾಡು ಪ್ರಕಾಶ್, ಮಂಜುನಾಥ್, ಉಮಾ ರಮೇಶ್, ಶೈಲಾ ಕಲ್ಲೇಶ್, ಸವಿತಾ, ಮೋಕ್ಷಾ ರುದ್ರಸ್ವಾಮಿ ಹಾಗೂ ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕಾಲೇಜು ಕಟ್ಟಡದ ಮೇಲಿಂದ ಬಿದ್ದು ಯುವತಿ ಆತ್ಮಹತ್ಯೆ…!

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಮಕ್ಕಳ ಭವಿಷ್ಯ ಉತ್ತಮವಾಗಲಿ, ಮುಂದೆ ಚೆನ್ನಾಗಿ ಬಾಳಿ ಬದುಕಲಿ ಎಂಬುದೇ ಹೆತ್ತವರ ಹಾರೈಕೆಯಾಗಿರುತ್ತದೆ. ಅದಕ್ಕೆಂದೆ ಕಷ್ಟಪಟ್ಟು ಮಕ್ಕಳನ್ನ ಓದಿಸುತ್ತಾರೆ. ಇನ್ನೇನು ಮಗಳ ಭವಿಷ್ಯ ಉಜ್ವಲವಾಗುತ್ತದೆ. ಮಗಳ ಆನಂದವನ್ನು

ಇಳಕಲ್ಲಿನ ಮಹಾಂತೇಶ್‌ ಎಂ.ಗಜೇಂದ್ರಗಡ ಅವರಿಗೆ ಸಂದ ಶ್ರೀ ಶಿವಕುಮಾರ ಪ್ರಶಸ್ತಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘ ರಂಗಭೂಮಿಗೆ ಸಲ್ಲಿಸಿದ ಜೀವಮಾನದ ಕೊಡುಗೆಯನ್ನು ಮನ್ನಿಸಿ ಪ್ರತಿವರ್ಷ ಕೊಡಮಾಡುವ ಪ್ರತಿಷ್ಠಿತ ಶ್ರೀ ಶಿವಕುಮಾರ ಪ್ರಶಸ್ತಿಗೆ ಈ ಬಾರಿ  ಇಳಕಲ್ಲಿನ

ಚಿತ್ರದುರ್ಗ : ಮಳೆಗೆ ಜಿಲ್ಲೆಯಾದ್ಯಂತ 80 ಮನೆಗಳು ಹಾನಿ : ಮಳೆ ವರದಿ…!

ಚಿತ್ರದುರ್ಗ.ಅ.18:  ಗುರುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 15 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 6.8 ಹಿರಿಯೂರು ತಾಲ್ಲೂಕು 14.2 ಮಿ.ಮೀ, ಹೊಳಲ್ಕೆರೆ ತಾಲ್ಲೂಕು

error: Content is protected !!