Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರತನ್ ಟಾಟಾ ಅವರ ಕೊನೆಯ ಪೋಸ್ಟರ್ ವೈರಲ್ : ಸೋಷಿಯಲ್ ಮೀಡಿಯಾದಲ್ಲಿ ಅವರಾಕಿದ್ದು ಏನು ಗೊತ್ತಾ..?

Facebook
Twitter
Telegram
WhatsApp

ಹಿರಿಯ ಉದ್ಯಮಿ, ಕೈಗಾರಿಕೋದ್ಯಮದ ಸಾಮ್ರಾಜ್ಯ ಕಟ್ಟಿದ ಧೀಮಂತ ಇಂದು ನಮ್ಮೊಡನೆ ಇಲ್ಲ. ವಯೋ ಸಹಜ ಕಾಯಿಲೆಯಿಂದ ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ರತನ್ ಟಾಟಾ ಅವರ ಆರೋಗ್ಯದ ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತಿದ್ದವು. ಗಂಭೀರ ಪರಿಸ್ಥಿತಿಯಲ್ಲಿದ್ದಾರೆ ಎನ್ನಲಾಗಿತ್ತು. ಆ ವದಂತಿಗಳನ್ನು ತಳ್ಳಿ ಹಾಕುವ ಪ್ರಯತ್ನವನ್ನು ರತನ್ ಟಾಟಾ ಅವರು ಮಾಡಿದ್ದರು. ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕ ವದಂತಿಗಳಿಗೆ ತೆತೆ ಎಳೆದಿದ್ದರು. ಆ ಕೊನೆಯ ಪೋಸ್ಟ್ ಈಗ ವೈರಲ್ ಆಗುತ್ತಿದೆ.

ಆ ಪೋಸ್ಟ್ ನಲ್ಲಿ ‘ನನ್ನ ಬಗ್ಗೆ ಯೋಚಿಸಿದ್ದಕ್ಕಾಗಿ ಧನ್ಯವಾದಗಳು’ ಎಂದು ಬರೆದಿದ್ದರು. ‘ನನ್ನ ಆರೋಗ್ಯದ ಬಗ್ಗೆ ಹರಡುತ್ತಿರುವ ಇತ್ತೀಚಿನ ವದಂತಿಗಳ ಬಗ್ಗೆ ನನಗೆ ತಿಳಿದಿದೆ ಮತ್ತು ಈ ಹಕ್ಕುಗಳು ಆಧಾರರಹಿತವಾಗಿವೆ ಎಂದು ಎಲ್ಲರಿಗೂ ಭರವಸೆ ನೀಡಲು ನಾನು ಬಯಸುತ್ತೇನೆ. ನನ್ನ ವಯಸ್ಸು ಮತ್ತು ಸಂಬಂಧಿತ ವೈದ್ಯಕೀಯ ಪರಿಸ್ಥಿತಿಗಳಿಂದಾಗಿ ನಾನು ಪ್ರಸ್ತುತ ವೈದ್ಯಕೀಯ ತಪಾಸಣೆಗೆ ಒಳಗಾಗುತ್ತಿದ್ದೇನೆ. ನಾನು ಉತ್ತಮ ಉತ್ಸಾಹದಲ್ಲಿ ಇದ್ದೇನೆ’ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು.

ಆ ಪೋಸ್ಟ್ ನೋಡಿದ ಸಾಕಷ್ಟು ಜನ ಅವರಿಗೆ ಹರಸಿ, ಹಾರೈಸಿದ್ದರು. ಆದಷ್ಟು ಬೇಗ ಗುಣಮುಖರಾಗಿ ಬನ್ನಿ ಎಂದು ಕೇಳಿದ್ದರು. ದೇವರಲ್ಲಿಯೂ ಪ್ರಾರ್ಥನೆ ಸಲ್ಲಿಸಿದ್ದರು. ಆದರೆ ಇಂದು ಅವರಿಲ್ಲ ಎಂಬ ಸತ್ಯವನ್ನು ಅರಗಿಸಿಕೊಳ್ಳಲಾಗದೆ ದುಃಖಿತರಾಗಿದ್ದಾರೆ. ಎರಡು ದಿನದ ಹಿಂದೆ ಪೋಸ್ಟ್ ಹಾಕಿದ್ದ ವ್ಯಕ್ತಿ ಜಗತ್ತನ್ನೇ ತೊರೆದು ಹೋಗಿದ್ದಾರೆ. ಇಂದು ಮಧ್ಯಾಹ್ನದವರೆಗೆ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಟ್ಟು ಸಂಜೆ ವೇಳೆಗೆ ಅಂತ್ಯ ಸಂಸ್ಕಾರ ಮಾಡಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!