Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ : ಮುಖ್ಯಮಂತ್ರಿ ಸಿದ್ದರಾಮಯ್ಯ

---Advertisement---

 

ಮೈಸೂರು, ಅಕ್ಟೋಬರ್ 12 : ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ಸುತ್ತೂರು ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ವಿಜಯದಶಮಿ, ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಜಂಬೂಸವಾರಿ ನಡೆಯಲಿದ್ದು, ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ನಡೆಯಲಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ಹಾಗೂ ದೇಶದ ಜನರಿಗೆ ದಸರಾ ಉತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಈ ಬಾರಿನಲ್ಲಿ ಉತ್ತಮ ಮಳೆ ಹಾಗೂ ಬೆಳೆಯಾಗಿದ್ದು, ನಾಡಿನ ರೈತರಲ್ಲಿ ಸಂತಸ ಮನೆಮಾಡಿದೆ. ರಾಜ್ಯದ ಎಲ್ಲಾ ಜಲಾಶಯಗಳು ತುಂಬಿರುವುದು ಸಂತಸದ ವಿಚಾರ. ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ. ರಾಜ್ಯದಲ್ಲಿ ಅಶಾಂತಿ ಮೂಡಿಸಿ, ಬದುಕುಗಳನ್ನು ಹಾಳುಮಾಡಲು ಸಂಚು ರೂಪಿಸುವವರಿಗೆ ದೇವರು ಸದ್ಭುದ್ಧಿ ನೀಡಲಿ ಎಂದು ತಿಳಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment