Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೂಡಾ ನಿವೇಶನಗಳನ್ನು ಹಿಂತಿರುಗಿಸಲು ನಿರ್ಧರಿಸಿದ ಮಲ್ಲಿಕಾರ್ಜುನ ಖರ್ಗೆ ಟ್ರಸ್ಟ್..!

Facebook
Twitter
Telegram
WhatsApp

ಬೆಂಗಳೂರು: ಈಗಾಗಲೇ ಮೂಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಿಲುಕಿದ್ದಾರೆ. ಸಿಎಂ ಸ್ಥಾನಕ್ಕೆ ಕುತ್ತು ಬಂದಿದೆ. ಸಿಎಂ ಪತ್ನಿ ಪಾರ್ವತಿ ಅವರು ನಿವೇಶನಗಳನ್ನು ವಾಪಾಸ್ ನೀಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಟ್ರಸ್ಟ್ ನಿಂದ ಕೂಡ ಈಗ ವಾಪಸ್ ಮಾಡಲಾಗುತ್ತಿದೆ.

ಸಿದ್ದಾರ್ಥ್ ವಿಹಾರ್ ಟ್ರಸ್ಟ್. ಇದು ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರ ಟ್ರಸ್ಟ್ ಆಗಿದೆ. ಈ ಟ್ರಸ್ಟ್ ನಲ್ಲಿ ಅವರ ಕುಟುಂಬ ಸದಸ್ಯರೇ ಇದ್ದಾರೆ. ಈ ಟ್ರಸ್ಟ್ ಮೂಲಕ ಐದು ಎಕರೆ ವಿಸ್ತೀರ್ಣದ ಸಿಎ ನಿವೇಶನಗಳನ್ನು ಕೊಂಡುಕೊಳ್ಳಲಾಗಿತ್ತು. ಇದೀಗ ಆ ನಿವೇಶನಗಳನ್ನು ವಾಪಾಸ್ ನೀಡಲು ಟ್ರಸ್ಟ್ ಮುಂದಾಗಿದೆ‌. ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಹಿತಿ ನೀಡಿದ್ದಾರೆ. ಕೆಐಎಡಿಬಿ ವತಿಯಿಂದ ಸಿದ್ದಾರ್ಥ್ ವಿಹಾರ್ ಟ್ರಸ್ಟ್ ಗೆ ನಿವೇಶನಗಳನ್ನು ನೀಡಲಾಗಿತ್ತು.

ಈ ನಿವೇಶನ ವೇಳೆ ಚಾರ ಕೂಡ ಈಗಾಗಲೇ ವಿವಾದಕ್ಕೆ ಸಿಲುಕಿತ್ತು. ರಾಜ್ಯಪಾಲರ ಅಂಗಳಕ್ಕೂ ತಲುಪಿತ್ತು. ಇದೀಗ ಮುಂಜಾಗ್ರತೆಯಿಂದ ಆ ಸೈಟ್ ಗಳನ್ನು ವಾಪಾಸ್ ನೀಡಲು ತೀರ್ಮಾನಿಸಲಾಗಿದೆ. ಆ ನಿವೇಶನಗಳನ್ನು ವಾಪಾಸ್ ನೀಡಲು ನಿರ್ಧರಿಸಿದ್ದೇವೆ‌. ನಮ್ಮ ಟ್ರಸ್ಟ್ ಗೆ ಕಾನೂನು ಬಾಹಿರವಾಗಿ ನಿವೇಶನ ಹಂಚಿಕೆಯಾಗಿದೆ ಎಂಬ ಆರೋಪವಿತ್ತು. ಈ ಬಗ್ಗೆ ಟ್ರಸ್ಟ್ ಅಧ್ಯಕ್ಷರಿಗೆ ಸರಿಯಾದ ಮಾಹಿತಿ ಇರಲಿಲ್ಲ. ನಮ್ಮ ಕುಟುಂಬದಲ್ಲಿ ಮೂರು ಜನರಷ್ಟೇ ರಾಜಕಾರಣದಲ್ಲಿ ಇದ್ದೀವಿ. ನನ್ನ ಸಹೋದರ ಮೃದು ಸ್ವಭಾವದವರು. ಈ ವಿವಾದದಿಂದ ಕುಟುಂಬಸ್ಥರಿಗೆ ನೋವಾಗಿದೆ. ಹೀಗಾಗಿ ಸೈಟ್ ಗಳನ್ನು ವಾಪಾಸ್ ನೀಡಲು ತೀರ್ಮಾನಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕಾಲೇಜು ಕಟ್ಟಡದ ಮೇಲಿಂದ ಬಿದ್ದು ಯುವತಿ ಆತ್ಮಹತ್ಯೆ…!

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಮಕ್ಕಳ ಭವಿಷ್ಯ ಉತ್ತಮವಾಗಲಿ, ಮುಂದೆ ಚೆನ್ನಾಗಿ ಬಾಳಿ ಬದುಕಲಿ ಎಂಬುದೇ ಹೆತ್ತವರ ಹಾರೈಕೆಯಾಗಿರುತ್ತದೆ. ಅದಕ್ಕೆಂದೆ ಕಷ್ಟಪಟ್ಟು ಮಕ್ಕಳನ್ನ ಓದಿಸುತ್ತಾರೆ. ಇನ್ನೇನು ಮಗಳ ಭವಿಷ್ಯ ಉಜ್ವಲವಾಗುತ್ತದೆ. ಮಗಳ ಆನಂದವನ್ನು

ಇಳಕಲ್ಲಿನ ಮಹಾಂತೇಶ್‌ ಎಂ.ಗಜೇಂದ್ರಗಡ ಅವರಿಗೆ ಸಂದ ಶ್ರೀ ಶಿವಕುಮಾರ ಪ್ರಶಸ್ತಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘ ರಂಗಭೂಮಿಗೆ ಸಲ್ಲಿಸಿದ ಜೀವಮಾನದ ಕೊಡುಗೆಯನ್ನು ಮನ್ನಿಸಿ ಪ್ರತಿವರ್ಷ ಕೊಡಮಾಡುವ ಪ್ರತಿಷ್ಠಿತ ಶ್ರೀ ಶಿವಕುಮಾರ ಪ್ರಶಸ್ತಿಗೆ ಈ ಬಾರಿ  ಇಳಕಲ್ಲಿನ

ಚಿತ್ರದುರ್ಗ : ಮಳೆಗೆ ಜಿಲ್ಲೆಯಾದ್ಯಂತ 80 ಮನೆಗಳು ಹಾನಿ : ಮಳೆ ವರದಿ…!

ಚಿತ್ರದುರ್ಗ.ಅ.18:  ಗುರುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 15 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 6.8 ಹಿರಿಯೂರು ತಾಲ್ಲೂಕು 14.2 ಮಿ.ಮೀ, ಹೊಳಲ್ಕೆರೆ ತಾಲ್ಲೂಕು

error: Content is protected !!