Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೂಡಾ ನಿವೇಶನಗಳನ್ನು ಹಿಂತಿರುಗಿಸಲು ನಿರ್ಧರಿಸಿದ ಮಲ್ಲಿಕಾರ್ಜುನ ಖರ್ಗೆ ಟ್ರಸ್ಟ್..!

---Advertisement---

ಬೆಂಗಳೂರು: ಈಗಾಗಲೇ ಮೂಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಿಲುಕಿದ್ದಾರೆ. ಸಿಎಂ ಸ್ಥಾನಕ್ಕೆ ಕುತ್ತು ಬಂದಿದೆ. ಸಿಎಂ ಪತ್ನಿ ಪಾರ್ವತಿ ಅವರು ನಿವೇಶನಗಳನ್ನು ವಾಪಾಸ್ ನೀಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಟ್ರಸ್ಟ್ ನಿಂದ ಕೂಡ ಈಗ ವಾಪಸ್ ಮಾಡಲಾಗುತ್ತಿದೆ.

ಸಿದ್ದಾರ್ಥ್ ವಿಹಾರ್ ಟ್ರಸ್ಟ್. ಇದು ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರ ಟ್ರಸ್ಟ್ ಆಗಿದೆ. ಈ ಟ್ರಸ್ಟ್ ನಲ್ಲಿ ಅವರ ಕುಟುಂಬ ಸದಸ್ಯರೇ ಇದ್ದಾರೆ. ಈ ಟ್ರಸ್ಟ್ ಮೂಲಕ ಐದು ಎಕರೆ ವಿಸ್ತೀರ್ಣದ ಸಿಎ ನಿವೇಶನಗಳನ್ನು ಕೊಂಡುಕೊಳ್ಳಲಾಗಿತ್ತು. ಇದೀಗ ಆ ನಿವೇಶನಗಳನ್ನು ವಾಪಾಸ್ ನೀಡಲು ಟ್ರಸ್ಟ್ ಮುಂದಾಗಿದೆ‌. ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಹಿತಿ ನೀಡಿದ್ದಾರೆ. ಕೆಐಎಡಿಬಿ ವತಿಯಿಂದ ಸಿದ್ದಾರ್ಥ್ ವಿಹಾರ್ ಟ್ರಸ್ಟ್ ಗೆ ನಿವೇಶನಗಳನ್ನು ನೀಡಲಾಗಿತ್ತು.

ಈ ನಿವೇಶನ ವೇಳೆ ಚಾರ ಕೂಡ ಈಗಾಗಲೇ ವಿವಾದಕ್ಕೆ ಸಿಲುಕಿತ್ತು. ರಾಜ್ಯಪಾಲರ ಅಂಗಳಕ್ಕೂ ತಲುಪಿತ್ತು. ಇದೀಗ ಮುಂಜಾಗ್ರತೆಯಿಂದ ಆ ಸೈಟ್ ಗಳನ್ನು ವಾಪಾಸ್ ನೀಡಲು ತೀರ್ಮಾನಿಸಲಾಗಿದೆ. ಆ ನಿವೇಶನಗಳನ್ನು ವಾಪಾಸ್ ನೀಡಲು ನಿರ್ಧರಿಸಿದ್ದೇವೆ‌. ನಮ್ಮ ಟ್ರಸ್ಟ್ ಗೆ ಕಾನೂನು ಬಾಹಿರವಾಗಿ ನಿವೇಶನ ಹಂಚಿಕೆಯಾಗಿದೆ ಎಂಬ ಆರೋಪವಿತ್ತು. ಈ ಬಗ್ಗೆ ಟ್ರಸ್ಟ್ ಅಧ್ಯಕ್ಷರಿಗೆ ಸರಿಯಾದ ಮಾಹಿತಿ ಇರಲಿಲ್ಲ. ನಮ್ಮ ಕುಟುಂಬದಲ್ಲಿ ಮೂರು ಜನರಷ್ಟೇ ರಾಜಕಾರಣದಲ್ಲಿ ಇದ್ದೀವಿ. ನನ್ನ ಸಹೋದರ ಮೃದು ಸ್ವಭಾವದವರು. ಈ ವಿವಾದದಿಂದ ಕುಟುಂಬಸ್ಥರಿಗೆ ನೋವಾಗಿದೆ. ಹೀಗಾಗಿ ಸೈಟ್ ಗಳನ್ನು ವಾಪಾಸ್ ನೀಡಲು ತೀರ್ಮಾನಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...