Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನ್ಯಾಯದ ತಕ್ಕಡಿ ಜರುಗಿತು, ಜ್ಞಾನದ ಹಣತೆ ಹಚ್ಚಿದರು : ಮೈಲಾರ ಲಿಂಗೇಶ್ವರನ ಭವಿಷ್ಯವಾಣಿ

Facebook
Twitter
Telegram
WhatsApp

ಚಿಕ್ಕಮಗಳೂರು: ಮೈಲಾರಲಿಂಗೇಶ್ವರನ ಕಾರ್ಣಿಕ ಎಂದರೆ ಎಲ್ಲರೂ ತದೇಕಚಿತ್ತದಿಂದ ನೋಡುತ್ತಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿರುವ ಮೈಲಾರಲಿಂಗೇಶ್ವರ ಸ್ವಾಮಿಯ ದೇವಸ್ಥಾನದ ಮಹಾನವಮಿ ಬಯಲಿನಲ್ಲಿ ಕಾರ್ಣಿಕ ನಡೆದಿದೆ. ಭಾನುವಾರ ನಸುಕಿನ ಜಾವ 4.45ರ ವೇಳೆಗೆ ಭವಿಷ್ಯ ನುಡಿಯಲಾಗಿದೆ. ಈ ವೇಳೆ ರಾಜ್ಯದ ಬಗ್ಗೆ ಗೊರವಯ್ಯ ಭವಿಷ್ಯ ನುಡಿದಿದ್ದಾರೆ.

ಇಟ್ಟ ರಾಮನ ಬಾಣ ಹುಸಿಯಿಲ್ಲ.. ನ್ಯಾಯದ ತಕ್ಕಡಿ ಜರುಗಿತು, ಜ್ಞಾನದ ಹಣತೆ ಹಚ್ಚಿದರು, ಜೀವ ರಾಶಿ ಸಂಪಾಯಿತಲೇ ಪರಾಕ್ ಎಂಬ ನಾಣ್ನುಡಿ ನುಡಿದಿದ್ದಾರೆ. ಅಂದ್ರೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ. ಇದರಿಂದ ಸಕಲ ಜೀವರಾಶಿಗಳು ಸಂಪಾಗಿರುತ್ತವೆ ಎಂದಿದ್ದಾರೆ. ಹಾಗೇ ನ್ಯಾಯದ ತಕ್ಕಡಿ ಜರುಗಿತು ಎಂದರೆ, ಈಗಾಗಲೇ ಹಲವು ಗಣ್ಯ ವ್ಯಕ್ತಿಗಳ ವಿರುದ್ಧ ಕೇಸು ದಾಖಲಾಗಿವೆ, ಕೆಲವರು ಜೈಲುಪಾಲಾಗಿದ್ದಾರೆ. ನ್ಯಾಯಕ್ಕೆ ಜಯ ಸಿಗದೆ ಅನ್ಯಾಯದ ಮಾರ್ಗದಲ್ಲಿರುವವರಿಗೆ ನ್ಯಾಯ ಸಿಗಲಿದೆ ಎಂದೇ ಹೇಳುತ್ತಿದ್ದಾರೆ.

ಕಾರ್ಣಿಕ ಕೇಳಲು ಸಾಕಷ್ಟು ಜನ ನೆರೆದಿದ್ದರು. ರಾಜ್ಯದಲ್ಲಿ ಮಳೆ ಬೆಳೆಯ ಬಗ್ಗೆ ಕೇಳಿದ ಜನ ಸಂತೃಪ್ತರಾದರು. ಯಾಕಂದ್ರೆ ಕಳೆದ ವರ್ಷ ರಾಜ್ಯದಲ್ಲಿ ಬರಗಾಲ ಆವರಿಸಿತ್ತು. ರೈತರು ನಷ್ಟ ಅನುಭವಿಸಿದರು. ಜಾನುವಾರುಗಳಿಗೂ ಸಾಕಷ್ಟು ತೊಂದರೆ ಆಯ್ತು. ಬೆಳೆ ಕೈಗೆ ಸಿಗದೆ ರೈತರು ಕಂಗಾಲಾಗಿದ್ದರು. ಈ ವರ್ಷ ಅದರ ಟೆನ್ಶನ್ ಇಲ್ಲ. ಆರಂಭದಿಂದಾನೂ ಮಳೆ ಉತ್ತಮವಾಗಿದೆ. ಒಣಗಿ ನಿಂತ ಕೆರೆ ಕಟ್ಟಗಳು ಈಗ ತುಂಬಿ ತುಳುಕುತ್ತಿವೆ. ಜಾನುವಾರುವಳಿಗೂ ಹಸಿರು ಮೇವು ಸಿಗುತ್ತಿದೆ. ಈಗ ಕಾರ್ಣಿಕದಲ್ಲೂ ಅದೇ ರೀತಿಯ ಭವಿಷ್ಯ ಕೇಳಿ ಬಂದಿರುವುದು ರಾಜ್ಯದ ಜನತೆ ಖುಷಿ ಪಡುವಂತೆ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!