Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಗಾಳಿ ಸಹಿತ ಮಳೆ : ಆರೆಂಜ್ ಅಲರ್ಟ್ ಘೋಷಣೆ..!

Facebook
Twitter
Telegram
WhatsApp

ಬೆಂಗಳೂರು: ದಸರಾ ಹಬ್ಬಕ್ಕೆಂದು ಮೂರ್ನಾಲ್ಕು ದಿನಗಳ ಕಾಲ ಊರು ಸೇರಿದ್ದವರಿಗೆ ಇಂದು ಬೆಳಗ್ಗೆಯಿಂದ ಟ್ರಾಫಿಕ್ ಕಿರಿಕಿರಿ, ಮಳೆಯ ಸಮಸ್ಯೆಯೇ ತಲೆದೂರಿದೆ. ಬೆಳಗ್ಗೆಯಿಂದಾನೂ ಕೆಲ ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ಇದರಿಂದ ಹೊರಗೆ ಹೋಗುವ ಜನರಿಗೆ ಜಿಟಿಜಿಟಿ ಮಳೆ ಅಡ್ಡಿಯಾಗುತ್ತಿದೆ. ಬೆಳಗ್ಗೆನೆ ಎಲ್ಲೆಡೆ ಕಲರ್ ಫುಲ್ ಕೊಡೆಗಳ ದರ್ಶನವೇ ಆಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ರಜೆ ಇದ್ದಿದ್ದರಿಂದ ಊರುಗಳಿಗೆ ತೆರಳಿದ್ದವರು ನಿನ್ನೆ ಸಂಜೆಯಿಂದಾನೂ ಪ್ರಯಾಣ ಮಾಡುತ್ತಲೇ ಇದ್ದಾರೆ. ಹೀಗಾಗಿ ಟ್ರಾಫಿಕ್ ನಲ್ಲಿ ಸಿಲುಕಿದವರು, ಗಾಡಿಗಳು ಮೂವ್ ಆಗುವುದಕ್ಕೇನೆ ಕಷ್ಟಪಟ್ಟಿವೆ.

ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಘೋಷಣೆ ಮಾಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ‌ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಅಕ್ಟೋಬರ್17ರವರೆಗೂ ಕರಾವಳಿ ಹಾಗೂ ಕರಾವಳಿ ಜಿಲ್ಲೆಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಗುಡುಗು ಮಿಂಚಿನ ಜೊತೆಗೆ ಜೋರಾದ ಮಳೆಯಾಗಲಿದೆ. ಹಾಗೇ ರಾಜ್ಯದ ದಕ್ಷಿಣ, ಉತ್ತರ ಒಳನಾಡು ಭಾಗದಲ್ಲಿ ಚದುರಿದ ಮಳೆಯಾಗಲಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದ್ದು, ಹಿರಗೆ ಹೋಗುವ ಜನರು ಎಚ್ಚರದಿಂದ ಇರಬೇಕು. ಆದರೆ ಈ ಸಮಯದಲ್ಲಿ ಮಳೆಯೇ ಹೆಚ್ಚು ಬೀಳುತ್ತಿರುವುದು ಕೆಲ ಭಾಗದ ರೈತರಿಗೆ ಸಂಕಷ್ಟ ಬಂದಂತೆ ಆಗಿದೆ‌. ಬೆಳೆ ಕೊಯ್ಲು ಕಟಾವಿಗೆ ಬಂದಿದ್ದು, ಮಳೆಯಿಂದಾಗಿ ಹಾಳಾಗುವ ಸಾಧ್ಯತೆ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!