Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಾಯಿಯೇ ಹೆತ್ತ ಮಕ್ಕಳನ್ನು ಕೊಂದ ಹೃದಯ ವಿದ್ರಾವಕ ಘಟನೆ : ಗಂಡ-ಹೆಂಡತಿಯೂ ನೇಣಿಗೆ ಶರಣು..!

Facebook
Twitter
Telegram
WhatsApp

ಬೆಂಗಳೂರು: ತನಗೆ ಏನೇ ಕಷ್ಟ ಬಂದರು ಮಕ್ಕಳಿಗೆ ಸದಾ ಬೆಂಗಾವಲಾಗಿ ಇರುವವಳು ತಾಯಿ. ಮಕ್ಕಳಿಗೆ ಸುಖ ಸಂತೋಷ ನೀಡುವತ್ತ ಗಮನ ಹರಿಸುತ್ತಾಳೆ. ಮಕ್ಕಳನ್ನ ಬೈಯ್ಯುವಾಗ ಯಾರಾದರೂ ನಿನ್ನ ಸಾವು ಎಂಬ ಮಾತುಗಲಕನ್ನಾಡಿದರೇನೆ ಆ ತಾಯಿ ಸಹಿಸಲ್ಲ. ಆದರೆ ಈ ತಾಯಿಯ ಮನಸ್ಸು ಅದೇನಾಯ್ತೋ ಏನೋ. ತನ್ನಿಬ್ಬರು ಮಕ್ಕಳನ್ನು ಕೊಂದು, ತಾನು ಸಾವಿಗೆ ಶರಣಾಗಿದ್ದಾಳೆ. ಮನೆಗೆ ಬಂದ ಗಂಡ ಈ ದೃಶ್ಯವನ್ನೆಲ್ಲ ನೋಡಿ ತಾನೂ ನೇಣಿಗೆ ಕೊರಳೊಡ್ಡಿದ್ದಾನೆ. ಈ ಘಟನೆ ನಡೆದಿರೋದು ಯಲಹಂಕದ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ.

38 ವರ್ಷ ಅವಿನಾಶ್, 30 ವರ್ಷದ ಮಮತಾ, 5 ವರ್ಷದ ಅಧೀರಾ, ಎರಡೂವರೆ ವರ್ಷದ ಮತ್ತೊಂದು ಮಗು ಸಾವನ್ನಪ್ಪಿರುವುದು. ಅವಿನಾಶ್ ಕಲಬುರಗಿ ಮೂಲದವರು. ಬೆಂಗಳೂರಿಗೆ ಬಂದು ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು. ಬದುಕು ಕಟ್ಟಿಕೊಳ್ಳಲು ಬಂದಿದ್ದವರು ಬದುಕನ್ನೇ ಅಂತ್ಯ ಮಾಡಿಕೊಂಡಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ತಾಯಿಯೇ ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಅವಿನಾಶ್ ನಿನ್ನೆ ಸಂಹೆ ತನ್ನ ಪತ್ನಿ ಮಮತಾಗೆ ಅನೇಕ ಬಾರಿ ಕರೆ ಮಾಡಿದ್ದಾರೆ. ಆದರೆ ಪತ್ನಿ ಕಾಲ್ ರಿಸೀವ್ ಮಾಡಿಲ್ಲ. ಬಳಿಕ ಮನೆಯ ಮೇಲುಗಡೆ ಇರುವವರಿಗೆ ಕರೆ ಮಾಡಿ, ತನ್ನ ಹೆಂಡತಿಗೆ ಕೊಡುವಂತೆ ಹೇಳಿದ್ದಾರೆ. ಅವರು ಬಂದು ಬಾಗಿಲು ತಟ್ಟಿದರು ತೆರೆದಿರಲಿಲ್ಲ. ಸುಮ್ಮನಾದ ಪತಿ ಅವಿನಾಶ್ ರಾತ್ರಿ ಒಂಭತ್ತರ ಸುಮಾರಿಗೆ ಬಂದು, ತನ್ನಲ್ಲಿದ್ದ ಇನ್ನೊಂದು ಕೀ ಬಳಸಿ ಒಳಗೆ ಹೋಗಿದ್ದಾರೆ. ಮಕ್ಕಳು, ಹೆಂಡತಿ ಸತ್ತಿರುವುದನ್ನು ಕಂಡು, ಹೆಂಡತಿಯನ್ನು ನೇಣು ಕುಣಿಕೆಯಿಂದ ಕೆಳಗಿಳಿಸಿ, ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಹಣಕಾಸಿನ ಸಮಸ್ಯೆಯೇ ಕುಟುಂಬದ ಸಾವಿಗರ ಕಾರಣ ಎನ್ನಲಾಗುತ್ತಿದೆ. ಸದ್ಯ ರಾಜಾನುಕುಂಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕಾಲೇಜು ಕಟ್ಟಡದ ಮೇಲಿಂದ ಬಿದ್ದು ಯುವತಿ ಆತ್ಮಹತ್ಯೆ…!

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಮಕ್ಕಳ ಭವಿಷ್ಯ ಉತ್ತಮವಾಗಲಿ, ಮುಂದೆ ಚೆನ್ನಾಗಿ ಬಾಳಿ ಬದುಕಲಿ ಎಂಬುದೇ ಹೆತ್ತವರ ಹಾರೈಕೆಯಾಗಿರುತ್ತದೆ. ಅದಕ್ಕೆಂದೆ ಕಷ್ಟಪಟ್ಟು ಮಕ್ಕಳನ್ನ ಓದಿಸುತ್ತಾರೆ. ಇನ್ನೇನು ಮಗಳ ಭವಿಷ್ಯ ಉಜ್ವಲವಾಗುತ್ತದೆ. ಮಗಳ ಆನಂದವನ್ನು

ಇಳಕಲ್ಲಿನ ಮಹಾಂತೇಶ್‌ ಎಂ.ಗಜೇಂದ್ರಗಡ ಅವರಿಗೆ ಸಂದ ಶ್ರೀ ಶಿವಕುಮಾರ ಪ್ರಶಸ್ತಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘ ರಂಗಭೂಮಿಗೆ ಸಲ್ಲಿಸಿದ ಜೀವಮಾನದ ಕೊಡುಗೆಯನ್ನು ಮನ್ನಿಸಿ ಪ್ರತಿವರ್ಷ ಕೊಡಮಾಡುವ ಪ್ರತಿಷ್ಠಿತ ಶ್ರೀ ಶಿವಕುಮಾರ ಪ್ರಶಸ್ತಿಗೆ ಈ ಬಾರಿ  ಇಳಕಲ್ಲಿನ

ಚಿತ್ರದುರ್ಗ : ಮಳೆಗೆ ಜಿಲ್ಲೆಯಾದ್ಯಂತ 80 ಮನೆಗಳು ಹಾನಿ : ಮಳೆ ವರದಿ…!

ಚಿತ್ರದುರ್ಗ.ಅ.18:  ಗುರುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 15 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 6.8 ಹಿರಿಯೂರು ತಾಲ್ಲೂಕು 14.2 ಮಿ.ಮೀ, ಹೊಳಲ್ಕೆರೆ ತಾಲ್ಲೂಕು

error: Content is protected !!