Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ಸಾರ್ವಜನಿಕರ ದಶಕಗಳ ಸಮಸ್ಯೆ ಬಗೆಹರಿಯಲಿದೆ : ಸಚಿವ ಡಿ ಸುಧಾಕರ್ ಹೇಳಿಕೆ

---Advertisement---

ಸುದ್ದಿಒನ್, ಹಿರಿಯೂರು, ಅಕ್ಟೋಬರ್. 14 : ನಗರದ ಬಹುದೊಡ್ಡ ಸಮಸ್ಯೆಯಾಗಿದ್ದ ರಸ್ತೆ ಅಗಲೀಕರಣ ಕಾಮಗಾರಿಗೆ ಚಾಲನೆ ದೊರೆತಿದ್ದು ನಗರದ ಸಾರ್ವಜನಿಕರ ದಶಕಗಳ ಸಮಸ್ಯೆ ಶೀಘ್ರವಾಗಿ ಬಗೆಹರಿಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದರು.

ನಗರದ ತಾಲೂಕು ಕಚೇರಿ ಬಳಿ ಸೋಮವಾರ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯ ಹಂತ ನಾಲ್ಕರ ಅಡಿ ಮಂಜೂರಾಗಿರುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ನಗರ ದಿನೇ ದಿನೇ ಬೆಳೆಯುತ್ತಿದ್ದು ಜನಸಂಖ್ಯೆ ಹೆಚ್ಚಿದಂತೆ, ವಾಹನಗಳ ಸಂಖ್ಯೆಯೂ ಹೆಚ್ಚಿದ್ದು ರಸ್ತೆಯ ಗಾತ್ರ ಹಿರಿದಾಗಿಸುವ ಕಾರ್ಯಕ್ಕೆ ಇದೀಗ ಭರದ ಸಿದ್ಧತೆ ನಡೆಸಲಾಗಿದೆ. ಈಗಾಗಲೇ ರಸ್ತೆ ಆಸು ಪಾಸಿನ ಅಂಗಡಿಗಳ,ಕಟ್ಟಡಗಳ ಮಾಲೀಕರ ಜೊತೆ ಸಭೆ ನಡೆಸಿ ರಸ್ತೆ ವಿಸ್ತರಣೆಯ ಅವಶ್ಯಕತೆ ಮತ್ತು ಅನಿವಾರ್ಯತೆ ವಿವರಿಸಲಾಗಿತ್ತು. ಎಲ್ಲರೂ ರಸ್ತೆ ವಿಸ್ತರಣೆ ಕಾಮಗಾರಿಗೆ ಒಪ್ಪಿದ್ದು ಈ ಬಾರಿ ರಸ್ತೆ ಅಗಲೀಕರಣ ಕಾಮಗಾರಿ ಸರಾಗವಾಗಿ ನಡೆಯಲಿದೆ. ನಗರದ ಅಭಿವೃದ್ಧಿ ಮತ್ತು ಸುರಕ್ಷತೆಯ ಸಂಚಾರಕ್ಕೆ ರಸ್ತೆ ವಿಸ್ತರಣೆ ತುರ್ತು ಅಗತ್ಯವಿದ್ದು ಆದಷ್ಟು ಬೇಗ ಈ ಕಾಮಗಾರಿ ಮುಗಿಸಲು ಸೂಚಿಸಲಾಗಿದೆ.

ರಸ್ತೆ ಅಕ್ಕಪಕ್ಕದ ಮರಗಳ ತೆರವು ಕಾರ್ಯ ಮುಗಿದಿದ್ದು ಕಟ್ಟಡಗಳ ತೆರವು ಕಾರ್ಯವೂ ಇಂದಿನಿಂದ ಶುರುವಾಗಿದೆ. ಕಟ್ಟಡಗಳ ಮಾಲೀಕರು, ಸಾರ್ವಜನಿಕರ ಸಹಕಾರ ಪಡೆದು ಕಟ್ಟಡಗಳ ತೆರವು ಕಾರ್ಯ ನಡೆಯಲಿದೆ.ವಾಹನ ಸವಾರರು ಸಹ ಸಹಕಾರ ನೀಡಿ ಆದಷ್ಟು ಬೇಗ ರಸ್ತೆ ವಿಸ್ತರಣೆಯಾದರೆ ಸುಗಮ ಸಂಚಾರದ ಜೊತೆಗೆ ನಗರದ ಸೌಂದರ್ಯವೂ ಹೆಚ್ಚಲಿದೆ ಎಂದರು.

ನಗರಸಭೆ ಅಧ್ಯಕ್ಷ ಅಜಯ್ ಕುಮಾರ್ ಮಾತನಾಡಿ ನಗರದ ಐದನೇ ವಾರ್ಡ್ ನಿಂದ ಒಂಬತ್ತನೇ ವಾರ್ಡ್ ನಲ್ಲಿ ಹಾದು ಹೋಗಿರುವ ಟಿಬಿ ವೃತ್ತದಿಂದ ತಾಲೂಕು ಕಛೇರಿ ಸೇತುವೆವರೆಗಿನ 1217.30 ಲಕ್ಷ ವೆಚ್ಚದ ಮುಖ್ಯ ರಸ್ತೆ ಅಗಲೀಕರಣ, ವೀಡಿಯನ್ ಮತ್ತು ಚರಂಡಿ ಕಾಮಗಾರಿಗೆ ಸಚಿವರು ಸೋಮವಾರ ಭೂಮಿ ಪೂಜೆ ನೆರವೇರಿಸಿದ್ದು, ತ್ವರಿತ ಗತಿಯಲ್ಲಿ ಕಟ್ಟಡಗಳ ತೆರವು ಕಾರ್ಯ ಮುಗಿಸಲಾಗುವುದು. ಈಗಾಗಲೇ ರಸ್ತೆ ಪಕ್ಕದ ಸರ್ಕಾರಿ ಕಟ್ಟಡಗಳ ತೆರವು ಕಾರ್ಯ ನಡೆದಿದ್ದು ಉಳಿದ ಕಟ್ಟಡಗಳ ತೆರವು ಕಾರ್ಯ ನಿರಂತರವಾಗಿ ನಡೆಯಲಿದೆ. ಟ್ರಾಫಿಕ್ ಸಮಸ್ಯೆಯಿಂದ ಬಳಲಿದ ನಗರದ ಜನತೆಗೆ ಇನ್ನಾದರೂ ಸುಗಮ ಹಾಗೂ ಸುರಕ್ಷತೆಯ ಸಂಚಾರ ಒದಗಲಿದೆ ಎಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಸಿ ರಾಜೇಶ್ ಕುಮಾರ್, ನಗರಸಭೆ ಪೌರಾಯುಕ್ತ ಎ. ವಾಸಿಂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ನಗರಸಭೆ ಸದಸ್ಯರಾದ ಬಿಎನ್ ಪ್ರಕಾಶ್, ಗುಂಡೇಶ್ ಕುಮಾರ್, ಶಿವಕುಮಾರ್, ಮುಖಂಡರಾದ ಸಾದತ್ ಉಲ್ಲಾ, ಕಲ್ಲಹಟ್ಟಿ ಹರೀಶ್, ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment