Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಿಗೆ ಆರೆಂಜ್ ಅಲರ್ಟ್ : ಶಾಲಾ-ಕಾಲೇಜಿಗೆ ರಜೆ..!

Facebook
Twitter
Telegram
WhatsApp

 

ಬೆಂಗಳೂರು : ಕಳೆದ ಕೆಲವು ದಿನದಿಂದ ರಾಜ್ಯದಲ್ಲಿ ಮಳೆಯಾಗುತ್ತಲೆ ಇದೆ. ಆದರೆ ರಾಜ್ಯದ ಹಲವೆಡೆ ಇಂದು ಬೆಳಗ್ಗಿನ ಜಾವದಿಂದ ಹಿಡಿದುಕೊಂಡಿರುವ ಮಳೆ ಬಿಟ್ಟೆ ಇಲ್ಲ. ಒಂದೇ ಸಮ ಸುರಿಯುತ್ತಿರುವ ಮಳೆಗೆ ಜನ ಹೈರಾಣಾಗಿದ್ದಾರೆ. ಮುಂದಿನ ನಾಲ್ಕು ದಿನ ಇದೇ ರೀತಿಯ ಮಳೆ ಇರಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರ ಜೊತೆಗೆ ಬೆಂಗಳೂರು ನಗರಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಂಬಿಡದೆ ಮಳೆ ಸುರಿದಿದೆ. ಆದರೆ ನಾಳೆ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಶಾಲಾ ಕಾಲೇಜುಗಳು ಹೈಅಲರ್ಟ್ ಆಗಿವೆ. ನಾಳೆ ಜೋರು ಮಳೆಯಾಗುವ ಮುನ್ಸೂಚನೆ ಇರುವ ಕಾರಣ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ‌ ಮಾಡಿದ್ದಾರೆ. ಜಿಲ್ಲಾಧಿಕಾರಿ ಜಗದೀಶ್ ಅವರು ಅಕ್ಟೋಬರ್ 16ರಂದು ಅಂದ್ರೆ ನಾಳೆ ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜಿಗೂ ರಜೆ ಘೋಷಣೆ ಮಾಡಿದ್ದಾರೆ.

ಆದರೆ ಬಹುತೇಕ ಶಾಲೆಗಳಲ್ಲಿ ಇನ್ನು ಕೂಡ ದಸರಾ ರಜೆ ಮುಗಿದಿಲ್ಲ. ಕೆಲ ಖಾಸಗಿ ಶಾಲೆಗಳು ನಡೆಯುತ್ತಿದ್ದು, ನಾಳೆ ಜೋರು ಮಳೆಯ ಮುನ್ಸೂಚನೆಯ ಹಿನ್ನೆಲೆ ರಜೆ ಘೋಷಣೆ‌ ಮಾಡಲಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಸ್ವಲ್ಪ ಮಳೆಯಾದರೂ ರಸ್ತೆ ಗುಂಡಿಗಳು ಉಕ್ಕಿ ಹರಿಯುತ್ತವೆ. ಈಗ ಒಂದೇ ಸಮನೇ ಸುರಿಯುತ್ತಿರುವ ಮಳೆಯಿಂದ ಸಾಕಷ್ಟು ಅನಾಹುತಗಳಾಗುವ ಸಾಧ್ಯತೆಯೂ ಇದೆ. ಹೀಗಾಗಿ ಜನ ಕೂಡ ಎಚ್ಚರಿಕೆಯಿಂದ ಇರಬೇಕಾದ ಅನಿವಾರ್ಯತೆ ಎದುರಾಗಿದೆ. ಹೊರಗೆ ಓಡಾಡುವ ದ್ವಿಚಕ್ರ ವಾಹನ ಸವಾರರಿಗೆ ಇದು ಸವಾಲಿನ ಸಮಯವೇ ಸರಿ. ಮಳೆಯಿಂದ ಕಾಪಾಡಿಕೊಳ್ಳಲು ಬೇಕಾದ ಮುಂಜಾಗ್ರತ ಕ್ರಮ ತೆಗೆದುಕೊಳ್ಳಬೇಕಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ APMC : ರೈತರಿಗೆ ಉಪಯುಕ್ತ ಮಾಹಿತಿ : ರೆಮ್ಸ್ ತಂತ್ರಾಂಶದಲ್ಲಿ ಗೇಟ್ ಎಂಟ್ರಿ ಕಡ್ಡಾಯ

ಚಿತ್ರದುರ್ಗ. ಅ.18: ರೈತರು ತಾವು ಬೆಳೆದ ಕೃಷಿ ಹುಟ್ಟುವಳಿಗಳನ್ನು ಕೃಷಿ ಮಾರುಕಟ್ಟೆ ಸಮಿತಿ ಪ್ರಾಂಗಣಕ್ಕೆ ತಂದಂತಹ ಸಂದರ್ಭದಲ್ಲಿ ತಾವುಗಳು ತಪ್ಪದೇ ರೆಮ್ಸ್ ತಂತ್ರಾಂಶದಲ್ಲಿ ಗೇಟ್ ಎಂಟ್ರಿಯನ್ನು ಮಾಡಿಸಬೇಕು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ

ಚಿತ್ರದುರ್ಗ | ಕಾಲೇಜು ಕಟ್ಟಡದ ಮೇಲಿಂದ ಬಿದ್ದು ಯುವತಿ ಆತ್ಮಹತ್ಯೆ…!

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಮಕ್ಕಳ ಭವಿಷ್ಯ ಉತ್ತಮವಾಗಲಿ, ಮುಂದೆ ಚೆನ್ನಾಗಿ ಬಾಳಿ ಬದುಕಲಿ ಎಂಬುದೇ ಹೆತ್ತವರ ಹಾರೈಕೆಯಾಗಿರುತ್ತದೆ. ಅದಕ್ಕೆಂದೆ ಕಷ್ಟಪಟ್ಟು ಮಕ್ಕಳನ್ನ ಓದಿಸುತ್ತಾರೆ. ಇನ್ನೇನು ಮಗಳ ಭವಿಷ್ಯ ಉಜ್ವಲವಾಗುತ್ತದೆ. ಮಗಳ ಆನಂದವನ್ನು

ಇಳಕಲ್ಲಿನ ಮಹಾಂತೇಶ್‌ ಎಂ.ಗಜೇಂದ್ರಗಡ ಅವರಿಗೆ ಸಂದ ಶ್ರೀ ಶಿವಕುಮಾರ ಪ್ರಶಸ್ತಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘ ರಂಗಭೂಮಿಗೆ ಸಲ್ಲಿಸಿದ ಜೀವಮಾನದ ಕೊಡುಗೆಯನ್ನು ಮನ್ನಿಸಿ ಪ್ರತಿವರ್ಷ ಕೊಡಮಾಡುವ ಪ್ರತಿಷ್ಠಿತ ಶ್ರೀ ಶಿವಕುಮಾರ ಪ್ರಶಸ್ತಿಗೆ ಈ ಬಾರಿ  ಇಳಕಲ್ಲಿನ

error: Content is protected !!