Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್ ಗೆ ಕಾಡುತ್ತಿದೆ ವಿಪರೀತ ಬೆನ್ನು ನೋವು : ಜೈಲು ಅಧಿಕಾರಿಗಳ ನಿರ್ಧಾರವೇನು..?

Facebook
Twitter
Telegram
WhatsApp

 

 

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ದರ್ಶನ್, ಜಾಮೀನು ಅರ್ಜಿ ನಿರಾಕರಣೆಯಾಗಿದ್ದು, ಹೈಕೋರ್ಟ್ ಮೆಟ್ಟಿಲೇರುವ ನಿರ್ಧಾರ ಮಾಡಿದ್ದಾರೆ. ಇದರ ನಡುವೆ ದರ್ಶನ್ ಅವರಿಗೆ ವಿಪರೀತ ಬೆನ್ನು ನೋವು ಕಾಣಿಸಿಕೊಂಡಿದೆ. ಬಳ್ಳಾರಿ ಜೈಲಿಗೆ ಶಿಫ್ಟ್ ಆದಾಗಿನಿಂದ ದರ್ಶನ್ ಅವರು ಬೆನ್ನು ನೋವಿನ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಸ್ಕ್ಯಾನಿಂಗ್ ಮಾಡಿಸಿಕೊಳ್ಳಿ ಎಂದರೂ ಮಾಡಿಸಿಕೊಳ್ಳಲು ಒಪ್ಪುತ್ತಿಲ್ಲ. ಅತ್ತ ಜಾಮೀನು ಸಿಗುತ್ತಿಲ್ಲ. ಹೀಗಾಗಿ ಜೈಲಿನಲ್ಲಿ ದರ್ಶನ್ ಗಾಗಿ ಸೌಲಭ್ಯಗಳನ್ನೇ ಹೆಚ್ಚು ಮಾಡಿದ್ದಾರೆ.

ದರ್ಶನ್ ಅವರ ಮೆಡಿಕಲ್ ರಿಪೋರ್ಟ್ ನಲ್ಲಿ ವಿಮ್ಸ್ ನ್ಯೂರೋ ಸರ್ಜನ್ ಡಾ.ವಿಶ್ವನಾಥ್ ಅವರು, ಮೆಡಿಕಲ್ ಬೆಡ್ ಮತ್ತು ದಿಂಬು ನೀಡುವಂತೆ ಸಲಹೆ ನೀಡಿದ್ದರು. ಇದೀಗ ವೈದ್ಯರ ಸಲಹೆಯಂತೆ ಬಳ್ಳಾರಿ ಜೈಲಿಗೆ ಮೆಡಿಕಲ್ ದಿಂಬು ಮತ್ತು ಬೆಡ್ ನೀಡಲಾಗಿದೆ‌. ಜಿಲ್ಲಾಸ್ಪತ್ರೆಯಿಂದ ತರಿಸಿ ಕೊಡಲಾಗಿದೆ. ಮೇಲಾಧಿಕಾರಿಗಳೊಂದಿಗೆ ಚರ್ಚೆ ಮಾಡಿ ತರಿಸಿ ಕೊಡಲಾಗಿದೆ.

ಇನ್ನು ದರ್ಶನ್ ಗ್ಯಾಂಗ್ ಕಡೆಯಿಂದ ಕೊಲೆಯಾಗಿದ್ದ ರೇಣುಕಾಸ್ವಾಮಿ ಪತ್ನಿಗೆ ಮಗು ಆಗಿದೆ. ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕೊಲೆ ಕೇಸಲ್ಲಿ ಎ2 ಆರೋಪಿಯಾಗಿರುವ ದರ್ಶನ್ ಜಾಮೀನಿಗಾಗಿ ಅರ್ಜಿ ಹಾಕಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಜಾಮೀನು ನೀಡಲು ನಿರಾಕರಣೆ ಮಾಡಿತ್ತು. ಶಕ್ತಿ ಪೀಠಗಳಿಗೆಲ್ಲ ಹೋಗಿ ಬಂದಿದ್ದ ವಿಜಯಲಕ್ಷ್ಮೀ ಅವರಿಗೂ ಈ ಬಾರಿ ಜಾಮೀನು ಸಿಗಬಹುದು ಎಂಬ ನಿರೀಕ್ಷೆ ಇತ್ತು. ದರ್ಶನ್ ಅವರು ಕೂಡ ಜಾಮೀನು ಸಿಗುವ ಭರವಸೆಯಲ್ಲಿದ್ದರು. ಆದರೆ ಅದೆಲ್ಲವೂ ಹುಸಿಯಾಗಿದೆ. ಜಾಮೀನಿಗಾಗಿ ದರ್ಶನ್ ಹೈಕೋರ್ಟ್ ಮೆಟ್ಡಿಲೇರಲು ನಿರ್ಧಾರ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!