Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ST ವಸತಿ ಶಾಲೆಗಳಿಗೆ ವಾಲ್ಮೀಕಿ ಹೆಸರು : ಸಿಎಂ ಸಿದ್ದರಾಮಯ್ಯ

---Advertisement---

 

ಬೆಂಗಳೂರು: ವಸತಿ ಶಾಲೆಗಳ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಎಲ್ಲಾ ST ವಸತಿ ಶಾಲೆಗಳಿಗೆ ಹಾಗೂ ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರನ್ನು ಇಡಲು ಘೋಷಣೆ ಮಾಡಲಾಗಿದೆ. ಪರಿಶೊಷ್ಟ ಪಂಗಡಗಳ ಕಲ್ಯಾಣ ಇಲಾಖೆ ಶ್ರೀ ವಾಲ್ಮೀಕಿ ಜಯಂತಿ ಪ್ರಯುಕ್ತ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಲಾಗಿದೆ. ಈ ವೇಳೆ ಐದು ಜನರಿಗೆ ವಾಲ್ಮೀಕಿ ಪ್ತಶಸ್ತಿ ವಿತರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ಮಹತ್ವದ ಘೋಷಣೆ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಶಾಕುಂತಲಾ ನಾಟಕ ಬರೆದ ಕಾಳಿದಾಸ ಕುರುಬ ಸಮುದಾಯದವರು. ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಸಮುದಾಯದವರು. ದರೋಡೆ ಮಾಡಿಕೊಂಡು ಓಡಾಡುತ್ತಿದ್ದ ವಾಲ್ಮೀಕಿ ರಾಮಾಯಣ ಬರೆಯಲು ಸಾಧ್ಯವಾ ಎಂದು ಎಂದು ಕಥೆ ಕಟ್ಟು ಬಿಟ್ಟರು. ತಳ ಸಮುದಾಯಗಳು, ಶೂದ್ರರು, ಶಿಕ್ಷಣ ಹಾಗೂ ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು. ಇಂಥಹ ಹೊತ್ತಲ್ಲಿ ಸಂಸ್ಕೃತ ಕಲಿತು, ಶ್ಲೋಕಗಳ ಮೂಲಕ ಜಗತ್ಪ್ರಸಿದ್ಧ ರಾಮಾಯಣ ಮಹಾಕಾವ್ತ ಬರೆದರಲ್ಲಾ ಇದು ಹೆಮ್ಮೆಯ ಹಾಗೂ ಮಾ್ರಿಯ ಸಂಗತಿ.

ಶಿಕ್ಷಣ ಕಲಿಯಲು ಅವಕಾಶ ಸಿಕ್ಕಾಗೆಲ್ಲಾ ಇವರು ಕಲಿತರು. ಜಗತ್ತಿಗೇನೆ ಪ್ರೇರಣೆಯಾದರು. ವಾಲ್ಮೀಕಿ ಅವರು ಸಮಪಾಲು, ಅಮಬಾಳು, ಸಮಾನ ಅವಕಾಶಗಳ ಬಗ್ಗೆ ಹೇಳಿದರು‌. ರಾಮಾಯಣದ ರಾಮರಾಜ್ಯ ಎಂದರೆ ಸಮಪಾಲಿನ ಸಮಾನ ಅವಕಾಶಗಳ ರಾಜ್ಯ ಎಂದೇ ಅರ್ಥ. ರಾಮನ ಮಕ್ಕಳಾದ ಲವ ಕುಶರಿಗೆ ಆಶ್ರಯ ನೀಡಿ, ಶಿಕ್ಷಣ ಹೇಳಿ ಕೊಟ್ಟಿದ್ದು ವಾಲ್ಮೀಕಿ ಎಂದು ರಾಮಾಯಣದ ದಿನಗಳನ್ನು ಹೇಳಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment