Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಾಜಿ ಸಿಎಂ ಕ್ಷೇತ್ರಕ್ಕೆ ನಾನು ಆಕಾಂಕ್ಷಿಯಲ್ಲ : ಮುರುಗೇಶ್ ನಿರಾಣಿ

---Advertisement---

ಬೆಂಗಳೂರು: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಅಭ್ಯರ್ಥಿಗಳ ಆಯ್ಕೆ ಕಸರತ್ತು ತೀವ್ರ ಜೋರಾಗಿ ಆರಂಭವಾಗಿದೆ.

ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾಂವಿ ಕ್ಷೇತ್ರಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ ಹೆಸರು ಇದೀಗ ಮುನ್ನೆಲೆಗೆ ಬಂದಿದೆ.

‘ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧೆಗೆ ನನ್ನ ಹೆಸರು ಕೇಳಿ ಬರುತ್ತಿದೆ. ಮತ್ತೊಂದು ಜಿಲ್ಲೆಗೆ ಹೋಗಿ ನಾನು ಸ್ಪರ್ಧೆ ಮಾಡುವುದು ಸರಿ ಅಲ್ಲ, ನಾನು ಆಕಾಂಕ್ಷಿಯೂ ಅಲ್ಲ’ ಎಂದು ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ.

‘ಭರತ್ ಬೊಮ್ಮಾಯಿ ಸೇರಿ 60 ಮಂದಿ ಸ್ಪರ್ಧೆಗೆ ಅರ್ಜಿ ಹಾಕಿದ್ದಾರೆ. ಆ ಕ್ಷೇತ್ರದಲ್ಲೂ ಪಂಚಮಸಾಲಿ ಸಮಾಜದವರು ಇದ್ದಾರೆ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ಅಲ್ಲಿ ಇದ್ದಾರೆ. ಹೀಗಾಗಿ ಪಕ್ಷದ ನಾಯಕರು ಅಥಾವ ಕಾರ್ಯಕರ್ತರಿಗೆ ಟಿಕೆಟ್ ನೀಡಬೇಕು. ನಾನು ಅಲ್ಲಿಂದ ಸ್ಫರ್ಧೆ ಬಯಸುವುದಿಲ್ಲ, ಹೈಕಮಾಂಡ್ ಹಾಕುವ ಅಭ್ಯರ್ಥಿಯನ್ನು ಅಂತಿಮವಾಗಿ ಗೆಲ್ಲಿಸಿಕೊಂಡು ಬರುವ ಜವಬ್ದಾರಿ ನಮ್ಮದು, ನಾವು ಆ ಕೆಲಸ ಮಾಡಲಿದ್ದೇವೆ’ ಎಂದು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...