Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..!

---Advertisement---

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..!

ಬೆಂಗಳೂರು: ನಟಿ ಅಮೂಲ್ಯ ಜಗದೀಶ್ ಅವರ ಸಹೋದರ ದೀಪಕ್ ಅರಸ್ ಇಂದು ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಗೆ ಈ ಸುದ್ದಿ ಬಿರುಗಾಳಿಯಂತೆ ಎದುರಾಗಿದೆ. ದೀಪಕ್ ಅರಸ್ ಸಾವಿನ ಸುದ್ದಿ ಕೇಳಿದ ಚಿತ್ರರಂಗದ ಮಂದಿ ಕಂಬನಿ ಮಿಡಿದಿದ್ದಾರೆ. ಚಿತ್ರರಂಗದಲ್ಲಿ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದವರು, ಚಿಕ್ಕವಯಸ್ಸಿಗೇನೆ ಬಾರದ ಲೋಕದ ಪಯಣ ಬೆಳೆಸಿದ್ದಾರೆ. ಈ ಸುದ್ದಿ ಅಮೂಲ್ಯ ಅವರ ಮನೆಯವರಿಗೆ ಅರಗಿಸಿಕೊಳ್ಳಲು ಅಸಾಧ್ಯವಾದದ್ದಾಗಿದೆ.

ದೀಪಕ್ ಅರಸ್ ಅವರಿಗೆ ಈಗ 42 ವರ್ಷ ವಯಸ್ಸಾಗಿತ್ತು. ಸಿನಿಮಾ ಮೇಲೆ ಅತಿಯಾದ ವ್ಯಾಮೋಹ ಹೊಂದಿದ್ದವರು. ಮನಸಾಲಜಿ ಹಾಗೂ ಶುಗರ್ ಫ್ಯಾಕ್ಟರಿ ಸಿನಿಮಾಗಳನ್ನು ನಿರ್ದೇಶನ ಮಾಡಿ ಹೆಸರು ಮಾಡಿದ್ದರು. ಮುಂದಿನ ದಿನಗಳಲ್ಲಿ ದೊಡ್ಡ ದೊಡ್ಡ ಸಿನಿಮಾಗಳನ್ನು ಮಾಡುವ ಬಯಕೆಯನ್ನು ಹೊಂದಿದ್ದರು. ಒಳ್ಳೆಯ ವ್ಯಕ್ಯಿತ್ವ, ಸರಳ, ಸಾಧು. ಎಲ್ಲರೊಳು ಒಟ್ಟುಗೂಡುವ ಗುಣವಿದ್ದ ದೀಪಕ್ ಇಂದು ಎಲ್ಲರೊಟ್ಟಿಗೆ ಇಲ್ಲ.

ದೀಪಕ್ ಅರಸ್ ಅವರು ಬಹುಕಾಲದಿಂದ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದರು. ಅದಕ್ಕೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ಕಿಡ್ನಿ ವೈಫಲ್ಯದಿಂದ ಅವರು ಬದುಕಿ ಬರಲೇ ಇಲ್ಲ. ಕಿಡ್ನಿ ವೈಫಲ್ಯವಾಗಿದ್ದ ದೀಪಕ್ ಗೆ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಇಂದು ಸಂಜೆ 7 ಗಂಟೆಗೆ ನಿಧನರಾಗಿದ್ದಾರೆ. ನಾಳೆ ಅಂತ್ಯಕ್ರಿಯೆ ಎಲ್ಲಿ, ಎಷ್ಟೊತ್ತಿಗೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಗನನ್ನು ಕಳೆದುಕೊಂಡ ತಾಯಿ, ಸಹೋದರನನ್ನು ಕಳೆದುಕೊಂಡ ಅಮೂಲ್ಯ ಹಾಗೂ ಕುಟುಂಬಸ್ಥರು ದುಃಖದಲ್ಲಿ ಮುಳುಗಿದ್ದಾರೆ. ಸಿನಿಮಾ ಬಗ್ಗೆ ಸಾವಿರ ಕನಸು ಕಂಡಿದ್ದ ನಿರ್ದೇಶಕ, ಆರೋಗ್ಯದ ಕಡೆ್ಎ ಗಮನವೇ ಕೊಟ್ಟಿಲ್ಲ. ಕಿಡ್ನಿ ವೈಫಲ್ಯವಾಗಿರುವ ವಿಚಾರ ತಿಳಿದಾಗಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರುಹ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment