Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ APMC : ರೈತರಿಗೆ ಉಪಯುಕ್ತ ಮಾಹಿತಿ : ರೆಮ್ಸ್ ತಂತ್ರಾಂಶದಲ್ಲಿ ಗೇಟ್ ಎಂಟ್ರಿ ಕಡ್ಡಾಯ

---Advertisement---

ಚಿತ್ರದುರ್ಗ. ಅ.18: ರೈತರು ತಾವು ಬೆಳೆದ ಕೃಷಿ ಹುಟ್ಟುವಳಿಗಳನ್ನು ಕೃಷಿ ಮಾರುಕಟ್ಟೆ ಸಮಿತಿ ಪ್ರಾಂಗಣಕ್ಕೆ ತಂದಂತಹ ಸಂದರ್ಭದಲ್ಲಿ ತಾವುಗಳು ತಪ್ಪದೇ ರೆಮ್ಸ್ ತಂತ್ರಾಂಶದಲ್ಲಿ ಗೇಟ್ ಎಂಟ್ರಿಯನ್ನು ಮಾಡಿಸಬೇಕು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ತಿಳಿಸಿದ್ದಾರೆ.

ಗೇಟ್ ಎಂಟ್ರಿ ಮಾಡಿಸುವಾಗ ಕಡ್ಡಾಯವಾಗಿ ಅಧಿಕೃತ ರೈತರ ಹೆಸರು, ಹುಟ್ಟುವಳಿಯ ಅಂದಾಜು ಪ್ರಮಾಣ, ರೈತರ ಮೊಬೈಲ್ ಸಂಖ್ಯೆ, ವಿಳಾಸವನ್ನು ಹಾಗೂ ಯಾವ ಅಂಗಡಿಗೆ ಹುಟ್ಟುವಳಿಯನ್ನು ಮಾರಾಟಕ್ಕೆ ಬಿಡಲಾಗಿದೆ ಎಂದು ಕಡ್ಡಾಯವಾಗಿ ತಿಳಿಸಬೇಕು. ಟೆಂಡರ್ ಘೋಷಣೆಯಾದ ನಂತರ ಹುಟ್ಟುವಳಿಯ ನಿಗಧಿತ ತೂಕದ ಪಟ್ಟಿ ಪಡೆಯಲು ಹಾಗೂ ಬಿಳಿ ಚೀಟಿಯನ್ನು ತಿರಸ್ಕರಿಸಿ, ಅಧಿಕೃತ ಲೆಕ್ಕ ತೀರುವಳಿಯ ಪಟ್ಟಿ ಪಡೆಯತಕ್ಕದ್ದು.

ಒಂದು ವೇಳೆ ರೈತರು ಅಧಿಕೃತ ವಿವರಗಳನ್ನು ನಮೂದಿಸದೇ ಇದ್ದಲ್ಲಿ, ಯಾವುದಾದರೂ ದೂರುಗಳು ಬಂದಾಗ ಬಗೆಹರಿಸಲು ಕಷ್ಟಸಾಧ್ಯವಾಗುತ್ತದೆ. ಆದ್ದರಿಂದ ಕಡ್ಡಾಯವಾಗಿ ರೈತರು ತಮ್ಮ ಅಧೀಕೃತ ವಿವರಗಳನ್ನು ನಮೂದಿಸಲು ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...