Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬ್ಯಾಂಕ್ ನಿರ್ಲಕ್ಷ್ಯ : ಬಡ್ಡಿ ಸಮೇತ ಪರಿಹಾರ ನೀಡಲು ಗ್ರಾಹಕರ ನ್ಯಾಯಾಲಯ ಆದೇಶ

---Advertisement---

 

 ದಾವಣಗೆರೆ ಅ.18 : ನಗರದ ಎ.ವಿ.ಕೆ. ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ನಿಲ್ಯಕ್ಷದಿಂದ ಗ್ರಾಹಕರೊಬ್ಬರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಜಿಲ್ಲಾ ಗ್ರಾಹಕ ನ್ಯಾಯಾಲಯದ ಮೂಲಕ ಗ್ರಾಹಕರಿಗೆ ಬಡ್ಡಿ ಸಮೇತ ಪರಿಹಾರ ನೀಡಲು ಆದೇಶ ನೀಡಲಾಗಿದೆ.

 

ದಾವಣಗೆರೆ ನಿವೃತ್ತ ಸರ್ಕಾರಿ ಅಭಿಯೋಜಕರಾದ ನಾಗರಾಜ ಆಚಾರ್ ಅವರು ನಗರದ ಎ.ವಿ.ಕೆ. ರಸ್ತೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‍ನಲ್ಲಿ ಖಾತೆ ಹೊಂದಿದ್ದು. 2023 ರ ಸೆಪ್ಟೆಂಬರ್ 28 ರಂದು ಖಾತೆಯ ವಿವರವನ್ನು ಪರಿಶೀಲಿಸಿದಾಗ ಇದೇ 2023 ರ ಸೆಪ್ಟೆಂಬರ್ 26 ರಂದು  ಖಾತೆಯ ಯು.ಪಿ.ಐ. ಮೂಲಕ ರೂ. 99,000 ಮೊತ್ತ ವರ್ಗಾವಣೆಯಾಗಿರುತ್ತದೆ.
ಖಾತೆಯಿಂದ ಹಣವನ್ನು ವರ್ಗಾಹಿಸಲು ತಾವು ಯಾವುದೇ ತೆರನಾದ ಪ್ರಕ್ರಿಯೆಗಳನ್ನು ಪಾಲಿಸದೇ ಅವರ ಗಮನಕ್ಕೆ ಬಾರದಂತೆ ವರ್ಗಾವಣೆಗೊಂಡಿದ್ದರ ಮೊತ್ತದ ಬಗ್ಗೆ ಬ್ಯಾಂಕಿಂಗ್ ಓಂಬಡ್ಸ್ ಮನ್‍ಗೆ ಮತ್ತು ಸಕ್ಷಮ ಪ್ರಾಧಿಕಾರಕ್ಕೆ ದೂರು ಸಲ್ಲಿಸಿದ್ದರೂ ಯಾವುದೇ ಪರಿಹಾರ, ನ್ಯಾಯ ಸಿಕ್ಕಿರಲಿಲ್ಲ.

ಈ ಬಗ್ಗೆ ಹಣ ಕಳೆದುಕೊಂಡ ನಾಗರಾಜ ಆಚಾರ್ ಅವರು ದಾವಣಗೆರೆ ಜಿಲ್ಲಾ ಗ್ರಾಹಕರ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದು, ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯವು ಅವರ ಖಾತೆಯಿಂದ ವರ್ಗಾಹಿಸಲ್ಪಟ್ಟ ರೂ. 99,000 ಗಳನ್ನು ವಾರ್ಷಿಕ ಶೇ.12 ಬಡ್ಡಿಯೊಂದಿಗೆ ಸಂಪೂರ್ಣ ಹಣವನ್ನು ಹಿಂತಿರುಗಿಸುವಂತೆ ಮತ್ತು ದೂರುದಾರರಿಗೆ ಉಂಟಾದ ಮಾನಸಿಕ ಪರಿಹಾರ ಮೊತ್ತವಾಗಿ 10,000 ರೂ. ಹಾಗೂ 5000 ರೂ. ದೂರು ದಾಖಲಿಸಲು ಆಗಿರುವ ವೆಚ್ಚ ಕೊಡಬೇಕು ಎಂದು ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಗಿ, ಸದಸ್ಯರಾದ ತ್ಯಾಗರಾಜನ್ ಆದೇಶಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment