Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ : ಜಿಲ್ಲೆಯಾದ್ಯಂತ 55 ಮನೆಗಳು ಭಾಗಶಃ ಹಾನಿ

Facebook
Twitter
Telegram
WhatsApp

 

ಚಿತ್ರದುರ್ಗ. ಅ.19:  ಶುಕ್ರವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 7.8 ಮಿ.ಮೀ ಮಳೆಯಾಗಿದೆ.

ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 16 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 9.3 ಹಿರಿಯೂರು ತಾಲ್ಲೂಕು 8.3 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 1.2 ಮಿ.ಮೀ, ಹೊಸದುರ್ಗ ತಾಲ್ಲೂಕಿನಲ್ಲಿ 0.8 ಮಿ.ಮೀ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 4.2 ಮಿ.ಮೀ ಮಳೆಯಾಗಿದೆ.
ಹೋಬಳಿವಾರು ಮಳೆ ವಿವರ: ಚಳ್ಳಕೆರೆ  ತಾಲ್ಲೂಕಿನ ಚಳ್ಳಕೆರೆಯಲ್ಲಿ 7.8 ಮಿ.ಮೀ, ನಾಯಕನಹಟ್ಟಿ 51.7 ಮಿ.ಮೀ, ಪರಶುರಾಂಪುರ 3.1 ಮಿ.ಮೀ, ತಳಕು 10.4 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 6.5 ಮಿ.ಮೀ, ಭರಮಸಾಗರ 10.2 ಮಿ.ಮೀ, ಹಿರೇಗುಂಟನೂರು 11.7 ಮಿ.ಮೀ, ತುರುವನೂರು 11.3 ಮಿ.ಮೀ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರು 4.4 ಮಿ.ಮೀ,  ಐಮಂಗಲ 6.9 ಮಿ.ಮೀ, ಧರ್ಮಪುರ 14.3 ಮಿ.ಮೀ, ಜವನಗೊಂಡನಹಳ್ಳಿ 6.7 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 0.8 ಮಿ.ಮೀ, ಬಿ.ದುರ್ಗ 1.9 ಮಿ.ಮೀ, ರಾಮಗಿರಿ 0.3 ಮಿ.ಮೀ, ತಾಳ್ಯ 1.9 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 0.8 ಮಿ.ಮೀ, ಮಾಡದಕೆರೆ 0.7 ಮಿ.ಮೀ, ಮತ್ತೋಡು 0.9 ಮಿ.ಮೀ, ಶ್ರೀರಾಂಪುರ 0.7 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 4.1 ಮಿ.ಮೀ ಹಾಗೂ ದೇವಸಮುದ್ರದಲ್ಲಿ 4.4 ಮಿ.ಮೀ ಮಳೆಯಾಗಿದೆ.

55 ಮನೆಗಳು ಭಾಗಶಃ ಹಾನಿ:  ಶುಕ್ರವಾರ ರಾತ್ರಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ 55 ಮನೆಗಳು ಭಾಗಶಃ ಹಾನಿಯಾಗಿದ್ದು, 3 ಮನೆಗಳಿಗೆ ನೀರು ನುಗ್ಗಿರುವ ಪ್ರಕರಣ ವರದಿಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 16 ಮನೆಗಳು ಭಾಗಶಃ ಹಾನಿ, ಚಳ್ಳಕೆರೆ 10 ಮನೆಗಳು, ಹೊಳಲ್ಕೆರೆ 8 ಮನೆಗಳು, ಹೊಸದುರ್ಗ 4 ಮನೆಗಳು ಭಾಗಶಃ ಹಾನಿ ಹಾಗೂ 3 ಮನೆಗಳಿಗೆ ನೀರು ನುಗ್ಗಿವೆ. ಹಿರಿಯೂರು ತಾಲ್ಲೂಕಿನಲ್ಲಿ 15 ಮನೆಗಳು ಭಾಗಶಃ ಹಾನಿ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 2 ಮನೆಗಳು ಭಾಗಶಃ ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

3 ಕ್ಷೇತ್ರಗಳ ಬೈ ಎಲೆಕ್ಷನ್.. ಶಿಗ್ಗಾವಿ, ಸಂಡೂರಿಗೆ ಬಿಜೆಪಿ ಟಿಕೆಟ್ ಘೋಷಣೆ..!

ಬೆಂಗಳೂರು, ಅಕ್ಟೋಬರ್. 19 : ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ಅನೌನ್ಸ್ ಆಗಿದೆ. ಇದು ಬಿಜೆಪಿ ಹಾಗೂ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಷ್ಠೆಯ ಕಣವಾಗಿದೆ. ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ

ಚಿತ್ರದುರ್ಗ | ಅಕ್ಟೋಬರ್ 21 ರಂಗಸೌರಭ ರಂಗೋತ್ಸವ ಕಾರ್ಯಕ್ರಮ

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 19 : ರಂಗಸೌರಭ ಕಲಾ ಸಂಘ ಮತ್ತು ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಧ್ಯೇಯ

ಖಾಸಗಿ ಶಾಲೆಗಳಿಗಿಂತ ಉತ್ತಮ ಶಿಕ್ಷಣ ಕಲ್ಪಿಸಿ : ಪಿ.ಎಂ.ನರೇಂದ್ರ ಸ್ವಾಮಿ

  ಚಿತ್ರದುರ್ಗ. ಅ.19:  ಜಿಲ್ಲೆಯಲ್ಲಿ ಶೇ.50ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಲಾಗುತ್ತಿದ್ದು, ತಳಸಮುದಾಯದ ಈ ಮಕ್ಕಳು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ

error: Content is protected !!