Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡ ಕಥಾ ಲೋಕದಲ್ಲಿ ಹೊಸ ದನಿಗಳಿವೆ: ಜಯಶ್ರೀ ಕಾಸರವಳ್ಳಿ

Facebook
Twitter
Telegram
WhatsApp

ಬೆಂಗಳೂರು, (ನ.25) : ಕನ್ನಡ ಕಥಾ ಲೋಕದಲ್ಲಿ ಹೊಸ ಭರವಸೆಯ ದನಿಗಳು ಕೇಳಿ ಬರುತ್ತಿವೆ. ಅದರಲ್ಲಿ ಮಧುಸೂದನ ವೈ ಎನ್ ಅವರ ‘ಫೀ ಫೋ’ ಸಹಾ ಒಂದು ಎಂದು ಸಾಹಿತಿ ಜಯಶ್ರೀ ಕಾಸರವಳ್ಳಿ ಅವರು ಅಭಿಪ್ರಾಯಪಟ್ಟರು.

‘ಅವಧಿ’ ಅಂತರ್ಜಾಲ ತಾಣ ಹಮ್ಮಿಕೊಂಡಿದ್ದ ಆನ್ ಲೈನ್ ಕಾರ್ಯಕ್ರಮದಲ್ಲಿ ಅವರು ‘ಬಹುರೂಪಿ’ ಪ್ರಕಾಶನದ ಮಧುಸೂದನ ವೈ ಎನ್ ಅವರ ‘ಫೀ ಫೋ’ ಕಥಾ ಸಂಕಲನ ಕುರಿತು ಮಾತನಾಡಿದರು. ಸತ್ಯ ಮತ್ತು ಮಿಥ್ಯೆಯ ನಡುವಿನ ಸಂಘರ್ಷದ ಚರ್ಚೆಯನ್ನು ಈ ಕಥಾ ಸಂಕಲನ ಕೈಗೆತ್ತಿಕೊಂಡಿದೆ. ಈ ಎರಡರ ನಡುವಣ ಭ್ರಾಂತಿಯಲ್ಲಿ ನಮ್ಮ ಬದುಕು ಸಾಗುತ್ತಿದೆ ಎಂದು ವಿವರಿಸಿದರು.

ಕೃತಿಯನ್ನು ಬಿಡುಗಡೆ ಮಾಡಿದ ಹಿರಿಯ ಪತ್ರಕರ್ತ, ಸಾಹಿತಿ ಜೋಗಿ ಅವರು ಮಧುಸೂದನ ಅವರ ಕಥೆಗಳು ಕಂಗೆಡಿಸುವ ಕಥೆಗಳು ಎಂದು ಬಣ್ಣಿಸಿದರು. ಇವತ್ತಿನ ಸೋಶಿಯಲ್ ಮೀಡಿಯಾ ಜಗತ್ತು ನಮ್ಮನ್ನು ಅಭಿಪ್ರಾಯ ರೂಪಿಸಿಕೊಳ್ಳಬೇಕಾದ ಪ್ರೋಗ್ರಾಮ್ ಗೆ ಒಳಪಡಿಸುತ್ತಿದೆ. ಇಂತಹ ಒತ್ತಡವನ್ನು ಹಿಡಿದಿಟ್ಟ ಹೊಸ ರೀತಿಯ ಕಥೆಗಳು ಇವು. ಹೊಸ ಅನುಭವ ಕಟ್ಟಿಕೊಡುತ್ತವೆ. ನಮ್ಮಲ್ಲಿ ಬಿತ್ತಿ ಮೊಳಕೆಯೊಡೆಯುವ ಕಥೆಗಳು ಎಂದು ಬಣ್ಣಿಸಿದರು.

ಕಥೆಗಾರ ಮಧುಸೂದನ ವೈ ಎನ್ , ಮಾತನಾಡಿ ಫೀ ಫೋ ಎನ್ನುವುದು ಕಂಪ್ಯೂಟರ್ ಲೋಕದ ಪದ. ಸರತಿಯಲ್ಲಿ ಮೊದಲು ನಿಂತದ್ದು ಮೊದಲು ಹೊರಗೆ ಬರುತ್ತದೆ ಎನ್ನುವ ಅರ್ಥ. ಮಾನವನ ನೆನಪುಗಳು, ಅನುಭವಗಳು ಗಣಿಯಲ್ಲಿನ ಖನಿಜದಂತೆ. ಈ ಖನಿಜವನ್ನು ಹೊರತೆಗೆಯುವ ಬಗೆ ಹೇಗೆ ಎಂದು ಯೋಚಿಸಿದಾಗ ಹುಟ್ಟಿಕೊಂಡ ಕಥೆಗಳು ಇವು ಎಂದರು. ‘ಅವಧಿ’ಯ ಪ್ರಧಾನ ಸಂಪಾದಕ ಜಿ ಎನ್ ಮೋಹನ್ ಮಾತನಾಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!