Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುದೀಪ್ ತಾಯಿ ಜೊತೆಗಿನ ಹಳೆಯ ನೆನಪುಗಳನ್ನು ಮೆಲುಕು ಹಾಕಿದ ರಾಘವೇಂದ್ರ ರಾಜ್‍ಕುಮಾರ್

Facebook
Twitter
Telegram
WhatsApp

ಬೆಂಗಳೂರು: ಅನಾರೋಗ್ಯದ ಹಿನ್ನೆಲೆ ಇಂದು ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ನಿಧನರಾಗಿದ್ದಾರೆ. ಜೆಪಿ ನಗರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಚಿತ್ರರಂಗದ ಹಲವು ಗಣ್ಯರು ಸುದೀಪ್ ನಿವಾಸಕ್ಕೆ ಬಂದು ಅವರ ತಾಯಿಯ ಅಂತಿಮ ದರ್ಶನ ಪಡೆದಿದ್ದಾರೆ. ರಾಘವೆಂದ್ರ ರಾಜ್‍ಕುಮಾರ್ ಅವರು ತಮ್ಮ ಮಕ್ಕಳೊಂದಿಗೆ ಬಂದು ಸರೋಜಾ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಈ ವೇಳೆ ಹಳೆಯ ನೆನಪುಗಳಿಗೆ ಜಾರಿದ್ದಾರೆ.

ಪಾರ್ವತಮ್ಮ ಅವರು ಹಾಗೂ ಸರೋಜಾ ಅವರು ಎಷ್ಟು ಆತ್ಮೀಯರಾಗಿದ್ದರು ಎಂಬುದನ್ನು ಮಾತನಾಡುತ್ತಾ, ರಾಘವೇಂದ್ರ ರಾಜ್‍ಕುಮಾರ್ ಅವರು ಭಾವುಕರಾಗಿದ್ದಾರೆ. ತಾಯಿಯ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಬೇಡಿಕೊಂಡಿಕೊಂಡಿದ್ದಾರೆ.

‘ಸುದೀಪ್ ಅವರ ತಾಯಿ, ನಮ್ಮ ತಾಯಿ ತುಂಬಾ ವರ್ಚಗಳಿಂದ ಸ್ನೇಹಿತರು. ತುಂಬಾ ವರ್ಷಗಳಿಂದ ಮನೆಗೆ ಬರ್ತಾ ಇದ್ರು, ಒಬ್ಬರಿಗೊಬ್ಬರು ನೋಡ್ತಾ ಇದ್ರು. ಸುದೀಪ್ ಅವರನ್ನ ನೆನೆಸಿಕೊಂಡರೆ ತುಂಬಾ ಕಷ್ಟವಾಗುತ್ತೆ‌. ತಾಯಿ ಇಲ್ಲದೆ ಇದ್ದರೆ, ತಾಯಿ ಕಳೆದುಕೊಂಡ್ರೆ ಎಷ್ಟು ದುಃಖವಾಗುತ್ತೆ ಅನ್ನೋದು ಅರ್ಥ ಆಗುತ್ತೆ. ಜೀವನ ಹೇಗಿರುತ್ತೆ ಎಂಬ ವೇದನೆ ನಾನು ಅನುಭವಿಸಿದ್ದೀನಿ. ಸುದೀಪದ ಅವರು ಈಗ ಆ ವೇದನೆ ಅನುಭವಿಸಬೇಕಲ್ಲ ಎಂಬ ನೋವಿದೆ. ಸುದೀಪ್ ಅವರ ತಾಯಿಯ ಆತ್ಮಕ್ಕೆ ಶಾಂತಿಸಿಗಲಿ ಎಂಬುದೇ ನನ್ನ ಪ್ರಾರ್ಥನೆ. ಸುದೀಪ್ ಅವರಿಗೆ ಈ ನೋವು ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ ಎಂದೇ ಬೇಡಿಕೊಳ್ಳುತ್ತೇನೆ ಎಂದಿದ್ದಾರೆ.

ಸುದೀಪದ ಅವರ ತಾಯಿಯ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಸುದೀಪ್ ಅವರಿಗೂ ಧೈರ್ಯ ತುಂಬಿದ್ದಾರೆ. ತಾಯಿಯನ್ನು ಕಳೆದುಕೊಂಡ ನೋವು ಕಡಿಮೆ ಏನು ಇರಲ್ಲ. ಅವರ ಅಭಿಮಾನಿಗಳು ಕೂಡ ದೇವರಲ್ಲಿ ಪ್ರಾರ್ಥಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಆರೋಗ್ಯ ಇಲಾಖೆಯ ನೌಕರ ಅವಿನಾಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ತಾಲ್ಲೂಕಿನ ಹಾಯ್ಕಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಅವಿನಾಶ್ (43 ವರ್ಷ) ಇಂದು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಶುಕ್ರವಾರ ದ್ವಿಚಕ್ರ ವಾಹನದಲ್ಲಿ

ಚಿತ್ರದುರ್ಗ | ಬ್ರಹ್ಮಶ್ರಿ ನಾರಾಯಣ ಗುರುಗಳ 170 ನೇ ಜಯಂತಿ ಆಚರಣೆ : ಸಚಿವ ಸುಧಾಕರ್ ಸೇರಿದಂತೆ ಗಣ್ಯರು ಭಾಗಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ಹಿಂದಿನಿಂದಲೂ ಈಡಿಗರ ಸಮುದಾಯದ ಜೊತೆ ನಮ್ಮ ಕುಟುಂಬ ಉತ್ತಮ ಬಾಂಧವ್ಯವಿಟ್ಟುಕೊಂಡಿದೆ. ನನ್ನ

ಚಿತ್ರದುರ್ಗ | ಒನಕೆ ಓಬವ್ವ ಜಯಂತಿ ಅದ್ದೂರಿ ಆಚರಣೆಗೆ ಸಿದ್ದತೆ : ಪೂರ್ವಭಾವಿ ಸಭೆಯಲ್ಲಿ ಮುಖಂಡರು ಭಾಗಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ಮುಂದಿನ ತಿಂಗಳು ನಡೆಯುವ ಒನಕೆ ಓಬವ್ವ ಜಯಂತಿಯನ್ನು ಅದ್ದೂರಿಯಾಗಿ ಆಚರಿಸುವ ಸಂಬಂಧ

error: Content is protected !!