Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುದೀಪ್ ಅವರ ತಾಯಿ ನಿಧನ : ಲಾಯರ್ ಜಗದೀಶ್ ಸುದ್ದಿಗೋಷ್ಟಿ ದಿಢೀರ್ ರದ್ದು..!

Facebook
Twitter
Telegram
WhatsApp

ಬೆಂಗಳೂರು: ಲಾಯರ್ ಜಗದೀಶ್ ಬಿಗ್ ಬಾಸ್ ಮನೆಯಲ್ಲಿ ಒಂದಷ್ಟು ಜಗಳನ್ನು ಮಾಡಿಕೊಂಡು ಹೊರಗೆ ಬಂದರು. ಮತ್ತೆ ಬಿಗ್ ಬಾಸ್ ಮನೆಯೊಳಗೆ ಹೋಗುತ್ತಾರೆ ಎಂಬ ಮಾತಿದೆ‌. ಆದರೆ ಇದರ ನಡುವೆ ನಿನ್ನೆ ಮಧ್ಯರಾತ್ರಿ ಅಂದ್ರೆ ಶನಿವಾರ ಮಧ್ಯರಾತ್ರಿ ವಿಡಿಯೋ ಮೂಲಕ ಇಂದು ಸುದ್ದಿಗೋಷ್ಠಿ ನಡೆಸುತ್ತೀನಿ. ಎಲ್ಲರನ್ನು ಭೇಟಿ ಮಾಡ್ತೀನಿ ಎಂದು ಹೇಳಿದ್ದರು. ಆದರೆ‌ಮತ್ತೊಂದು ವಿಡಿಯೋ ಮಾಡಿ ಸುದ್ದಿಗೋಷ್ಠಿ ಮುಂದೂಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಸುದೀಪ್ ಅವರ ತಾಯಿ ಸರೋಜಾ ಸಂಜೀವ ಅವರು ನಿಧನರಾಗಿದ್ದು, ಇಂದು ಸಂಜೆ ನಡೆಯಬೇಕಿದ್ದ ಸುದ್ದಿಗೋಷ್ಟಿಯನ್ನು ರದ್ದು ಮಾಡಿದ್ದಾರೆ. ವಿಡಿಯೋದಲ್ಲಿ ‘ನನಗೆ ಮಾತನಾಡಲು ಪದಗಳೇ ಬರುತ್ತಿಲ್ಲ. ಸುದೀಪ್ ಅವರಿಗೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ’ ಎಂದಿದ್ದಾರೆ. ಜೊತೆಗೆ ಸರೋಜಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

‘ಇಂದು ಸಂಜೆ ನಾನು ಪ್ರೆಸ್ ಮೀಟ್ ಕರೆದಿದ್ದೆ. ಆದರೆ ನಮ್ಮ‌ದಾದಾ ಅವರ ತಾಯಿ ನಿಧನರಾಗಿದ್ದಾರೆ. ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಶನಿವಾರ ತಾನೇ ತಾಯಿಯ ಬಗ್ಗೆ ಮಾತನಾಡಿದ್ದರು. ಈಗ ನೋಡಿದರೆ ಈ ರೀತಿ ಆಗಿದೆ. ಕಿಚ್ಚ ದಾದಾನಿಗೆ ಈ ರೀತಿ ಆಗಬಾರದಿತ್ತು. ನನಗೆ ಮಾತನಾಡುವುದಕ್ಕೆ ಪದಗಳೇ ಸಿಗುತ್ತಿಲ್ಲ. ದಾದಾ ಅವರ ಕುಟುಂಬಕ್ಕೆ ಈ ನಷ್ಟವನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರು ಕರುಣಿಸಲಿ. ತಾಯಿಯನ್ನು ಕಳೆದುಕೊಂಡಾಗ ಆಗುವ ನೋವು ಎಂಥದ್ದು ಎಂಬುದು ನನಗೆ ಗೊತ್ತಿದೆ. ಮಾಧ್ಯಮ ಮಿತ್ರರು ನನ್ನನ್ನು ಕ್ಷಮಿಸಿ, ಈ ದಿನವನ್ನು ದಾದಾನಿಗಾಗಿ ಮೀಸಲಿಡುತ್ತಿದ್ದೇನೆ. ಇನ್ನೊಂದು ದಿನ ನಿಮ್ಮ ಜೊತೆಗೆ ನಾನು ಮಾತನಾಡಬಹುದು ಎಂದು ಜಗದೀಶ್ ಮತ್ತೊಂದು ವಿಡಿಯೋ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಆರೋಗ್ಯ ಇಲಾಖೆಯ ನೌಕರ ಅವಿನಾಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ತಾಲ್ಲೂಕಿನ ಹಾಯ್ಕಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಅವಿನಾಶ್ (43 ವರ್ಷ) ಇಂದು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಶುಕ್ರವಾರ ದ್ವಿಚಕ್ರ ವಾಹನದಲ್ಲಿ

ಚಿತ್ರದುರ್ಗ | ಬ್ರಹ್ಮಶ್ರಿ ನಾರಾಯಣ ಗುರುಗಳ 170 ನೇ ಜಯಂತಿ ಆಚರಣೆ : ಸಚಿವ ಸುಧಾಕರ್ ಸೇರಿದಂತೆ ಗಣ್ಯರು ಭಾಗಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ಹಿಂದಿನಿಂದಲೂ ಈಡಿಗರ ಸಮುದಾಯದ ಜೊತೆ ನಮ್ಮ ಕುಟುಂಬ ಉತ್ತಮ ಬಾಂಧವ್ಯವಿಟ್ಟುಕೊಂಡಿದೆ. ನನ್ನ

ಚಿತ್ರದುರ್ಗ | ಒನಕೆ ಓಬವ್ವ ಜಯಂತಿ ಅದ್ದೂರಿ ಆಚರಣೆಗೆ ಸಿದ್ದತೆ : ಪೂರ್ವಭಾವಿ ಸಭೆಯಲ್ಲಿ ಮುಖಂಡರು ಭಾಗಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ಮುಂದಿನ ತಿಂಗಳು ನಡೆಯುವ ಒನಕೆ ಓಬವ್ವ ಜಯಂತಿಯನ್ನು ಅದ್ದೂರಿಯಾಗಿ ಆಚರಿಸುವ ಸಂಬಂಧ

error: Content is protected !!