Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಶಾಸಕ ಎಂ.ಚಂದ್ರಪ್ಪ ಕರೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಹೊಳಲ್ಕೆರೆ, ಅಕ್ಟೋಬರ್. 21 : ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲು ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ. ಜನ ಸೇರಿಸಿ ಯಶಸ್ವಿಗೊಳಿಸುವುದು ನಿಮ್ಮ ಜವಾಬ್ದಾರಿ ಎಂದು ಕನ್ನಡಪರ ಸಂಘಟನೆಗಳಿಗೆ ಶಾಸಕ ಡಾ.ಎಂ.ಚಂದ್ರಪ್ಪ ಕರೆ ನೀಡಿದರು.

ನ.1 ಕನ್ನಡ ರಾಜ್ಯೋತ್ಸವ ಹಾಗೂ 23 ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಕುರಿತು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದರು.

ಯಾವುದೇ ಒಂದು ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ಜನ ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕು. ಅಧಿಕಾರಿಗಳು ನಿಯಮದ ಪ್ರಕಾರ ರಾಜ್ಯೋತ್ಸವದಲ್ಲಿ ಭಾಗವಹಿಸುತ್ತಾರೆ. ಕನ್ನಡದ ಬಗ್ಗೆ ಆಸಕ್ತಿಯಿರುವ ಸಂಘಟನೆಗಳು ಜವಾಬ್ದಾರಿ ತೆಗೆದುಕೊಳ್ಳಬೇಕು. ಕನ್ನಡ ಭುವನೇಶ್ವರಿ ಹಾಗೂ ಕಲಾ ತಂಡಗಳ ಮೆರವಣಿಗೆ ಎಲ್ಲಿಂದ ಹೊರಟು ಎಲ್ಲಿಗೆ ತಲುಪಬೇಕು ಎನ್ನುವುದನ್ನು ನೀವುಗಳು ತೀರ್ಮಾನಿಸಬೇಕು. ಸರ್ಕಾರ ಮೂಲಸೌಕರ್ಯ ಒದಗಿಸುತ್ತದೆ. ಉಳಿದಂತೆ ನಿಮ್ಮ ಪಾತ್ರ ಮುಖ್ಯ ಎಂದು ಹೇಳಿದರು.

ಆಲೂರು ವೆಂಕಟರಾಯರು, ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪನವರು ಕನ್ನಡದ ಏಕೀಕರಣಕ್ಕಾಗಿ ಹೋರಾಟ ಮಾಡಿ ಹರಿದು ಹಂಚಿ ಹೋಗಿದ್ದ ಕನ್ನಡನಾಡನ್ನು ಒಗ್ಗೂಡಿಸಿದರು. ಡಿ.ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದಾಗ ಮೈಸೂರನ್ನು ಕರ್ನಾಟಕವೆಂದು ನಾಮಕರಣ ಮಾಡಿದರು. ಹಾಗಾಗಿ ನಾಡ ಹಬ್ಬ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಬೇಕು. ಅದೇ ರೀತಿ ನ.23 ರಂದು ನಡೆಯುವ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ವೀರ ಮಹಿಳೆ ರಾಣಿ ಚೆನ್ನಮ್ಮನ ತ್ಯಾಗ, ಹೋರಾಟ ಯಾವ ಪುರುಷನಿಗಿಂತಲೂ ಕಮ್ಮಿಯಿರಲಿಲ್ಲ ಎಂದರು.

ಹೊಳಲ್ಕೆರೆ ತಹಶೀಲ್ದಾರ್ ಶ್ರೀಮತಿ ಬೀಬಿ ಫಾತಿಮ, ಪುರಸಭೆ ಮುಖ್ಯಾಧಿಕಾರಿ ಶ್ರೀಮತಿ ರಾಧಾ, ಸದಸ್ಯರುಗಳಾದ ಮುರುಗೇಶ್, ಮಲ್ಲಿಕಾರ್ಜುನಸ್ವಾಮಿ, ಕರ್ನಾಟಕ ರಕ್ಷಣಾ ವೇದಿಕೆ ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷ ಹನುಮಂತಪ್ಪ, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...