Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಳಗೇರಿ ನಿವಾಸಿಗಳಿಗೆ ಹಕ್ಕುಪತ್ರ ಇದ್ದರೂ ಇ – ಸ್ವತ್ತು ನೋಂದಣಿ ಇಲ್ಲ : ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಪ್ರತಿಭಟನೆ

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 22 : ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿಯಿಂದ ನಗರದ ಕೊಳಗೇರಿ ನಿವಾಸಿಗಳಿಗೆ ಕೆ.ಎಸ್.ಡಿ.ಬಿ. ದಾವಣಗೆರೆ ಉಪ ವಿಭಾಗದಿಂದ ಹಕ್ಕುಪತ್ರಗಳನ್ನು ವಿತರಿಸಿದ್ದರು ಉಪ ನೊಂದಣಾಧಿಕಾರಿ ಕಚೇರಿಯಲ್ಲಿ ಇ.ಸೊತ್ತು ಇಲ್ಲವೆಂದು ನೊಂದಾವಣೆ ಮಾಡದಿರುವುದನ್ನು ವಿರೋಧಿಸಿ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎಂದು ಮಂಗಳವಾರ ಪ್ರತಿಭಟನೆ ನಡೆಸಿ ಶಿರಸ್ತೆದಾರ್‍ಗೆ ಮನವಿ ಸಲ್ಲಿಸಲಾಯಿತು.

2021-22 ನೇ ಸಾಲಿನಲ್ಲಿ ಕೊಳಚೆ ನಿವಾಸಿಗಳಿಗೆ ಹಕ್ಕು ಪತ್ರ ನೀಡಲಾಗಿದೆ. ದಿನಾಂಕ : 9-9-2024 ರಿಂದ ಈಚೆಗೆ ಕ್ರಯಪತ್ರವಿಲ್ಲದೆ ಇ-ಸೊತ್ತು ಮಾಡುವುದಿಲ್ಲವೆಂಬ ಸಬೂಬು ಹೇಳುತ್ತಿರುವುದರಿಂದ ಕೊಳಗೇರಿ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ. ನೊಂದಾವಣೆ ಮಾಡುವಂತೆ ಉಪ ನೊಂದಣಾಧಿಕಾರಿ ಹಾಗೂ ನಗರಸಭೆ ಪೌರಾಯುಕ್ತರಿಗೂ ಆದೇಶಿಸುವಂತೆ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕೆ.ಕೆ.ಎನ್.ಎಸ್.ಎಸ್. ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್ ಮನವಿ ಮಾಡಿದರು.

ಕೆ.ಕೆ.ಎನ್.ಎಸ್.ಎಸ್.ಜಿಲ್ಲಾ ಉಪಾಧ್ಯಕ್ಷ ಎನ್.ರಂಗಸ್ವಾಮಿ, ಜಾನಪದ ಜಾಗೃತಿ ಪರಿಷತ್ ರಾಜ್ಯಾಧ್ಯಕ್ಷ ಹೆಚ್.ಪ್ಯಾರೇಜಾನ್, ಮೈಲಾರಪ್ಪ, ಇಮಾಮ್‍ಸಾಬ್, ಶಬಿನಾಬಿ, ರಜಿಯಾಬಿ, ರಾಧಮ್ಮ, ಇಮ್ರಾನ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಾರೀ ಮಳೆ: ನಾಳೆ ಮತ್ತೆ ಬೆಂಗಳೂರು ಶಾಲೆಗಳಿಗೆ ರಜೆ

  ಬೆಂಗಳೂರು: ಮಳೆರಾಯ ಅದ್ಯಾಕೋ ಏನೋ ಬಿಡುವನ್ನೇ ಕೊಡದಂತೆ ಸುರಿಯುತ್ತಿದ್ದಾನೆ. ಅತ್ತ ಬೆಳೆಯನ್ನ ಕೊಯ್ಲು ಮಾಡುವ ಸಮಯ ಅದು ಆಗ್ತಿಲ್ಲ. ಇತ್ತ ಗಿಡಗಳಿಗೆ ಔಷಧಿ ಹೊಡೆಯುವ ಸಮಯ. ಅದಕ್ಕೂ ಸಮಯ ಸಾಕಾಗುತ್ತಿಲ್ಲ. ಆದರೆ ಮಳೆರಾಯ

ಸಿಪಿ ಯೋಗೀಶ್ವರ್ ಗೆ ಕಾಂಗ್ರೆಸ್ ನಿಂದ ಆಫರ್ ಬಂದಿದ್ಯಾ..? ಸ್ವತಃ ಸಿಪಿವೈ ಹೇಳಿದ್ದೇನು..?

ರಾಮನಗರ: ಚನ್ನಪಟ್ಟಣ ಕ್ಷೇತ್ರ ಸದ್ಯ ಹೈವೋಲ್ಟೇಜ್ ಕ್ಷೇತ್ರವಾಗಿದೆ. ಎರಡು ಪಕ್ಷಗಳಿಂದ ಯಾರು ನಿಲ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಸದ್ಯ ಕಾಂಗ್ರೆಸ್ ನಿಂದ ಸಿಪಿ ಯೋಗೀಶ್ವರ್ ಗೆ ಆಫರ್ ಹೋಗಿದೆ ಎನ್ನಲಾಗಿದೆ. ಝ ಎಲ್ಲಾ

ಚಿತ್ರದುರ್ಗ | ಬೈಕ್ ಗೆ ಲಾರಿ ಡಿಕ್ಕಿ : ವಿದ್ಯಾರ್ಥಿ ಸಾವು

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 22 : ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಬೈಕ್ ಗೆ ಲಾರಿ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಚೇತನ್ ಕುಮಾರ್ 

error: Content is protected !!