Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ| ನಿರಾಶ್ರಿತರ ಬಾಳಲ್ಲಿ  ಬೆಳಕಾಗಿರುವ ಜಿಲ್ಲಾಸ್ಪತ್ರೆಯ ನೇತ್ರತಜ್ಞ ಡಾ.ಪ್ರದೀಪ್

---Advertisement---

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 22 : ಹಲವು ವರ್ಷಗಳಿಂದ ಸ್ವಯಂಪ್ರೇರಿತವಾಗಿ ತಾಲ್ಲೂಕಿನ ಗೊನೂರುನಲ್ಲಿರುವ ನಿರಾಶ್ರಿತರ  ಪರಿಹಾರ ಕೇಂದ್ರಕ್ಕೆ ಕಾಲಕಾಲಕ್ಕೆ  ಜಿಲ್ಲಾಸ್ಪತ್ರೆಯ ನೇತ್ರತಜ್ಞ ಡಾ ಪ್ರದೀಪ್ ಬಿ .ಜಿ, ನೇತ್ರಾಧಿಕಾರಿ  ಕೆ. ಸಿ.ರಾಮು ಹಾಗೂ ತಂಡದವರು ಭೇಟಿ ನೀಡಿ ಇಲ್ಲಿರುವ ನಿರಾಶ್ರಿತರ ನೇತ್ರ ಪರೀಕ್ಷೆ ನೆಡಿಸಿ ಹಾಗು  ದೃಷ್ಟಿ ದೋಷ ನಿವಾರಣೆ ಹಾಗು ಪೊರೆ ಇರುವವರಿಗೆ ಜಿಲ್ಲಾ ಆಸ್ಪತ್ರೆ ವತಿಯಿಂದ ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದಡಿಯಲ್ಲಿ  ಸೋಮವಾರ ಅ 20 ರಂದು 19 ಜನರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ ನೆಡಸುವುದರ ಮೂಲಕ  ನಿರಾಶ್ರಿತರ ಬಾಳಲ್ಲಿ  ಬೆಳಕಾಗಿ ಬೆಳಗಿದ್ದಾರೆ.

ಚಿಕಿತ್ಸೆಯು ಸಂಪೂರ್ಣ ಯಶಸ್ವಿಯಾಗಿದ್ದು ಎಲ್ಲರೂ ಆರೋಗ್ಯವಾಗಿದ್ದಾರೆ. ಕಣ್ಣಿನ ಶಸ್ತ್ರಚಿಕಿತ್ಸೆಯನ್ನು ಮಾಡಿಸಿಕೊಂಡಂತ ಫಲಾನುಭವಿಗಳಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು  ಅನುಸರಿಸಬೇಕೆಂದು ಜಿಲ್ಲಾಸ್ಪತ್ರೆಯ ನೇತ್ರ ತಜ್ಞ ಡಾ ಪ್ರದೀಪ್ ಬಿ.ಜಿ ತಿಳಿಸಿದರು.

ಜಿಲ್ಲಾ ಆಸ್ಪತ್ರೆಯಲ್ಲಿ ಕಳೆದ  ವರ್ಷದಲ್ಲಿ 22 ಜನ ನಿರಾಶ್ರಿತರಿಗೆ ಹಾಗೂ 1100 ರಕ್ಕೂ ಹೆಚ್ಚು ಫಲಾನುಭವಿಗಳಿಗೆ  ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಡಾ ಪ್ರದೀಪ್ ನಡೆಸಿದ್ದು, ಹೆಸರಿಗೆ ತಕ್ಕಂತೆ  ದೀಪವಾಗಿ ಇವರ ಕಾರ್ಯಗಳು  ಶ್ಲಾಘಾನೀಯಯೆಂದ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ಎಸ್ .ಪಿ. ರವೀಂದ್ರ  ಪ್ರಶಂಶಿಸಿದ್ದಾರೆ.

ಹಾಗೆಯೇ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಪ್ರತಿ ತಿಂಗಳು ಎರಡನೇ ಶುಕ್ರವಾರ  ವಿಠ್ಠಲ ಕಣ್ಣಿನ ಆಸ್ಪತ್ರೆಯ ರೆಟಿನಾ ಸ್ಪೆಷಲಿಸ್ಟ್  ತಪಾಸಣೆಗೆ ಭೇಟಿ ನೀಡುತ್ತಿದ್ದು , ಈ  ಸೌಲಭ್ಯವನ್ನು ಚಿತ್ರದುರ್ಗದ ಜನತೆಯು ಸದುಪಯೋಗ ಪಡೆಸಿಕೊಳ್ಳಬೇಕೆಂದು ತಿಳಿಸಿದ್ದಾರೆ.

ಚಿಕಿತ್ಸಾ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ
ಡಾ ಎಸ್ ಪಿ ರವೀಂದ್ರ, ಟಿ ಹೆಚ್ ಓ  ಡಾ ಗಿರೀಶ್, ಜಿಲ್ಲಾ ಅಂಧತ್ವ ನಿವಾರಣಾ ಅಧಿಕಾರಿ ಡಾ ನಾಗರಾಜ್, ಡಾ. ಶಿಲ್ಪಾ, ಶುಶ್ರೂಷಕರಾದ ಲಕ್ಷ್ಮಿ, ,ಸುನಂದಾದೇವಿ, ಸಿಂಧು, ಶಾರದಾ ಹಾಗೂ ಮತ್ತಿತರರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...