Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೇರಳದಲ್ಲೂ ಸಿದ್ದರಾಮಯ್ಯ ಕ್ರೇಜ್ : ಪ್ರಿಯಾಂಕ ಗಾಂಧಿ ಪರ ಪ್ರಚಾರದಲ್ಲಿ ಏನೆಲ್ಲಾ ಆಯ್ತು..?

---Advertisement---

ಸಿಎಂ ಸಿದ್ದರಾಮಯ್ಯ ಅಂದ್ರೆ ಕರ್ನಾಟಕದಲ್ಲಂತೂ ಸಿಕ್ಕಾಪಟ್ಟೆ ಕ್ರೇಜು. ಅಭಿಮಾನಿಗಳ ಬಳಗ ಕಡಿಮೆ ಏನು ಇಲ್ಲ. ಆದ್ರೆ ಸಿದ್ದರಾಮಯ್ಯ ಅವರಿಗೆ ನಮ್ಮ ರಾಜ್ಯದಲ್ಲಿ ಮಾತ್ರ ಅಭಿಮಾನಿಗಳು ಇರೋದಲ್ಲ, ಪಕ್ಕದ ರಾಜ್ಯದಲ್ಲೂ ಅಷ್ಟೇ ಅಭಿಮಾನಿಗಳಿದ್ದಾರೆ. ಕೇರಳದಲ್ಲೂ ಸಿಎಂ ಸಿದ್ದರಾಮಯ್ಯ ಎಂಟ್ರಿಯಾದೊಡನೆ ಶಿಳ್ಳೆ, ಚಪ್ಪಾಳೆ ಹೊಡೆದು ಸ್ವಾಗತಿಸಿದ್ದಾರೆ.

ಕೇರಳದ ವಯನಾಡಿನಲ್ಲಿ ಉಒಚುನಾವಣೆ ಘೋಷಣೆಯಾಗಿದೆ. ರಾಹುಲ್ ಗಾಂಧಿ ಪ್ರತಿನಿಧಿಸಿದ್ದ ಕ್ಷೇತ್ರ ತೆರವಾಗಿತ್ತು. ಶಾಸಕರಾದ ಮೇಲೆ ಬೇರೆ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿದ್ದರು. ಹೀಗಾಗಿ ಕೇರಳದ ವಯನಾಡಿನಲ್ಲೂ ಉಪಚುನಾವಣೆ ಘೋಷಣೆಯಾಗಿದೆ. ಪ್ರಿಯಾಂಕ ಗಾಂಧಿ ಸ್ಪರ್ಧೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಇಂದು ಕೇರಳಕ್ಕೆ ಭೇಟಿ ನೀಡಿದ್ದರು. ಪ್ರಿಯಾಂಕ ಗಾಂಧಿ ಪರ ಪ್ರಚಾರಕ್ಕೆ ಸಜ್ಜಾಗಿದ್ದರು. ಪ್ರಿಯಾಂಕ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದರು. ಬಳಿಕ ವೇದಿಕೆ ಮೇಲೆ ಕಾರ್ಯಕ್ರಮ ನಡೆಸಲಾಗಿತ್ತು.

ವೇದಿಕೆ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕುಳಿತಿದ್ದರು. ಭಾಷಣ ಕೂಡ ಆರಂಭವಾಗಿತ್ತು. ರಾಹುಲ್ ಗಾಂಧಿ ಅಲ್ಲಿನ ಜನರನ್ನುದ್ದೇಶಿಸಿ ಮಾತನಾಡುವುದಕ್ಕೆ ಶುರು ಮಾಡಿದರು. ಅದೇ ಸಮಯಕ್ಕೆ ವೇದಿಕೆ ಮೇಲೆ ಸಿಎಂ ಸಿದ್ದರಾಮಯ್ಯ ಬಂದರು. ಅಲ್ಲಿ ತನಕ ಸೈಲೆಂಟ್ ಆಗಿದ್ದ ಜನ ಜೋರಾಗಿ ಕೂಗಿದ್ದಾರೆ. ಶಿಳ್ಳೆ, ಚಪ್ಪಾಳೆ ಹೊಡೆದಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರು ಭರ್ಜರಿ ಬಹುಮತದಿಂದ ವಯನಾಡು ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ. ಬಿಜೆಪಿ ನಮ್ಮ ಸೈದ್ಧಾಂತಿಕ ವಿರೋಧಿ. ಬಿಜೆಪಿ ಸೋಲಿಸಲು ಎಲ್ಲ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ಸೋಲಿಸಿ ದೇಶ ಉಳಿಸುವುದು ನಮ್ಮ ಮೊದಲ ಗುರಿ ಎಂದು ಸಿದ್ದರಾಮಯ್ಯ ಹೇಳಿದರು. ವಯನಾಡಿನಲ್ಲಿ ರಾಹುಲ್‌ ಗಾಂಧಿ ಅವರು ಆರಂಭಿಸಿದ ಅಭಿವೃದ್ಧಿ ಕಾರ್ಯಗಳನ್ನು ಮುನ್ನಡೆಸಿಕೊಂಡು ಹೋಗಲು ಪ್ರಿಯಾಂಕಾ ಗಾಂಧಿ ಅವರು ಅತ್ಯಂತ ಸಮರ್ಥರಿದ್ದಾರೆ ಎಂದು ಸಿದ್ದರಾಮಯ್ಯ ಅವರು ಪ್ರಿಯಾಂಲ ಗಾಂಧಿ ಬಗ್ಗೆ ಜನರಿಗೆ ತಿಳಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment