Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿಮ್ಮ ಮಕ್ಕಳು ಅರೆಸ್ಟ್ ಆಗಿದ್ದಾರೆಂದು ಕರೆ ಬಂದರೆ ಎಚ್ಚರ : ಸಿಬಿಐ ಪ್ರವೀಣ್ ಸೂದ್ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ಈ ಸೈಬರ್ ಕ್ರೈಂ ವಂಚಕರು ಯಾವಾಗ, ಯಾವ ಟ್ರಿಕ್ಸ್ ಬಳಕೆ ಮಾಡುತ್ತಾರೆ ಎಂಬುದು ಗೊತ್ತಾಗಲ್ಲ. ಒಂದಷ್ಟು ಜನ ಮೋಸ ಹೋಗಿ ಇನ್ನೇನು ಎಚ್ಚರಗೊಂಡಿದ್ದಾರೆ ಎನ್ನುವಷ್ಟರಲ್ಲೇ ಹಿಸ ಟ್ರಿಕ್ಸ್ ಬಳಕೆ ಮಾಡಿಕೊಳ್ಳುತ್ತಾರೆ. ಪೊಲೀಸರು ಕೂಡ ಎಷ್ಟೇ ಎಚ್ಚರಿಕೆಯನ್ನು ನೀಡಿದರು ಸಹ ಮೋಸ ಹೋಗುವವರ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿಲ್ಲ. ಇದೀಗ ಹೊಸ ಆಯಾಮದಲ್ಲಿ ಸೈಬರ್ ಕ್ರೈಂ ಶುರುವಾಗಿದೆ. ಅದರಲ್ಲೂ ನಿಮ್ಮ ಮಕ್ಕಳ ವಿಚಾರವನ್ನೇ ತೆಗೆದು ಸೈಬರ್ ಕ್ರೈಂ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಪೊಲೀಸರೇ ಇದರಿಂದ ಮೋಸ ಹೋಗಿರುವುದು ವಿಪರ್ಯಾಸ. ಇದೀಗ ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಅವರೇ ಜನರಿಗೆಲ್ಲಾ ಎಚ್ಚರಿಕೆಯಿಂದ ಇರಲು ಸೂಚಿಸಿದ್ದಾರೆ‌.

ಈಗಾಗಲೇ ರಾಜ್ಯ ರಾಜಧಾನಿಯಲ್ಲಿ ಇದಕ್ಕೆ ಸಂಬಂಧಿಸಿದ ಕೇಸುಗಳು ದಾಖಲಾಗುತ್ತಿವೆ. ಪಾಕಿಸ್ತಾನದ ನಂಬರ್ ನಿಂದ ಮಕ್ಕಳ ಹೆಸರೇಳಿ ಕರೆ ಮಾಡುತ್ತಿದ್ದಾರೆ. 923165788678 ಈ ಸಂಖ್ಯೆಯಿಂದ ವಾಟ್ಸಾಪ್ ಕರೆ ಮಾಡುತ್ತಿದ್ದಾರೆ. ಇದೇ ವಾಟ್ಸಾಪ್ ಸಂಖ್ಯೆಗೆ ಪ್ರವೀಣ್ ಸೂದ್ ಅವರ ಫೋಟೋ ಅಟ್ಯಾಚ್ ಮಾಡಿ ಮೋಸ ಮಾಡುತ್ತಿದ್ದಾರೆ. ಸಿಬಿಐ ಪೊಲೀಸರೇ ಕರೆ ಮಾಡುತ್ತಿದ್ದಾರೆ ಎಂಬಂತೆ ನಂಬಿಸುತ್ತಿದ್ದಾರೆ. ಇದರಿಂದ ಅದೆಷ್ಟೋ ಪೋಷಕರು ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡಿದ್ದಾರೆ.

ನಿನ್ನೆ ಅಂದ್ರೆ ಬುಧವಾರ ಉದ್ಯೋಗಿ ಮಹಿಳೆಗೆ ಕರೆ ಮಾಡಿ, ನಿಮ್ಮ ಮಗನನ್ನು ಸಿಬಿಐ ಪೊಲೀಸರು ಬಂಧಿಸಿದ್ದಾರೆ. ಮಗನನ್ನು ಬಿಡಿಸಲು ಸಾವಿರಾರು ರೂಪಾಯಿ ಖರ್ಚಾಗುತ್ತದೆ. ಕರೆ ಕಟ್ ಮಾಡಬೇಡಿ ಎಂದು ಹೇಳಿದ್ದಾರೆ. ಆ ಮಹಿಳೆ ಗಾಬರಿಯಾಗಿ ಮಗನಿಗೆ ಕರೆ ಮಾಡಿದ್ದಾರೆ. ಮಗ ಕ್ಲಾಸ್ ನಲ್ಲಿದ್ದೀನಿ ಎಂದಾಗ ತಾಯಿ ಸಮಾಧಾನವಾಗಿದ್ದಾರೆ. ತಕ್ಷಣ ಈ ಸಂಬಂಧ ವಿವೇಕ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ವಿಪರ್ಯಾಸವೆಂದರೆ ವಿವೇಕ ನಗರ ಪೊಲೀಸ್ ಠಾಣೆಯ ಪೊಲೀಸರೊಬ್ಬರು ಇಂಥದ್ದೇ ಕರೆ ಸ್ವೀಕರಿಸಿ ಮೋಸ ಹೋಗಿದ್ದಾರೆ. 5 ಸಾವಿರ ಹಣ ಕಳೆದುಕೊಂಡಿದ್ದಾರೆ. ಹೀಗಾಗಿ ಜನತೆಗೆ ವಾಟ್ಸಾಪ್ ಕರೆಯಿಂದ ಎಚ್ಚರದಿಂದ ಇರಲು ಸೂಚನೆ ನೀಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಜಿಲ್ಲೆಯಲ್ಲಿ 664.91 ಹೆಕ್ಟೇರ್ ಕೃಷಿ ಬೆಳೆ ನಾಶ

ಚಿತ್ರದುರ್ಗ.24: ಜಿಲ್ಲೆಯಲ್ಲಿ ಅಕ್ಟೋಬರ್ ಮಾಹೆಯಲ್ಲಿ ಬಿದ್ದಂತಹ ಹೆಚ್ಚಿನ ಮಳೆಯಿಂದಾಗಿ ಬೆಳೆಹಾನಿಯಾಗಿದ್ದು, ಜಿಲ್ಲೆಯಾದ್ಯಂತ 664.91 ಹೆಕ್ಟೇರ್‍ಗಳಷ್ಟು ಪ್ರದೇಶದಲ್ಲಿ ಬೆಳೆಹಾನಿಯಾಗಿರುವುದಾಗಿ ಸರ್ಕಾರಕ್ಕೆ ವರದಿ ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ 2024-25ನೇ ಸಾಲಿನ

ಮಲೇರಿಯಾ, ಡೆಂಗಿ ನಿಯಂತ್ರಣ ಎಲ್ಲರ ಜವಾಬ್ದಾರಿ : ಡಿಹೆಚ್ಒ ಡಾ. ರೇಣು ಪ್ರಸಾದ್

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 24 : ಮಲೇರಿಯಾ, ಡೆಂಗಿ ಜ್ವರ ನಿಯಂತ್ರಣಕ್ಕೆ ಸಮುದಾಯದ ಸಹಕಾರ ಪ್ರಮುಖವಾದ್ದು ಡೆಂಗಿ ನಿಯಂತ್ರಣ ನಮ್ಮ ನಿಮ್ಮೆಲ್ಲರ ಜವಾಬ್ದಾರಿ. ಕ್ಷೇತ್ರ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ 2025 ಕ್ಕೆ ಮಲೇರಿಯ

ಜಾನುವಾರುಗಳಿಗೆ ತಪ್ಪದೇ ಲಸಿಕೆ ಹಾಕಿಸಿ : ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಕರೆ

ಚಿತ್ರದುರ್ಗ.‌ಅ.24: ಸಾಂಕ್ರಾಮಿಕ ಕಾಲುಬಾಯಿ ರೋಗ ಹರಡದಂತೆ ತಡೆಯಲು, ತಪ್ಪದೇ ರೈತರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು ಎಂದು ಜಿ.ಪಂ.ಸಿಇಓ ಎಸ್.ಜೆ ಸೋಮಶೇಖರ್ ಕರೆ ನೀಡಿದರು. ಚಿತ್ರದುರ್ಗ ತಾಲ್ಲೂಕು ವಿಜಾಪುರ ಗ್ರಾಮದಲ್ಲಿ ಗುರುವಾರ, 6ನೇ ಸುತ್ತಿನ

error: Content is protected !!