ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ರಾಮನಗರ: ರಾಜ್ಯದಲ್ಲಿ ಘೋಷಣೆಯಾದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ದೊಡ್ಡ ಮಟ್ಟಕ್ಕೆ ಸದ್ದು ಮಾಡುತ್ತಿರುವುದು ಚನ್ನಪಟ್ಟಣ ಕ್ಷೇತ್ರ. ಇಡೀ ರಾಜ್ಯ ಮಾತ್ರವಲ್ಲ ದೆಹಲಿಯಲ್ಲಿ ಕುಳಿತ ಹೈಕಮಾಂಡ್ ನಾಯಕರಿಗೂ ತಲೆಕೆಡಿಸಿದಂತ ಕ್ಷೇತ್ರವಾಗಿ ಬದಲಾಯ್ತು. ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸ್ಪರ್ಧಿಯೇ ಕಾಂಗ್ರೆಸ್ ಗೆ ಬಂದರು. ಈಗ ಬಿಜೆಪಿ ಮತ್ತು ಜೆಡಿಎಸ್ ನಲ್ಲಿ ಸ್ಪರ್ಧೆ ಮಾಡೋದು ಯಾರೂ ಎಂಬ ಪ್ರಶ್ನೆ ಎದುರಾಗಿದೆ. ಯಾರೇ ನಿಂತರು ಗೆದ್ದು ಬರುವ ವಿಶ್ವಾಸದಲ್ಲಿರುವ ಸಿಪಿ ಯೋಗೀಶ್ವರ್ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಚನ್ನಪಟ್ಟಣದ ಕಾಂಗ್ರೆಸ್ ಮುಖಂಡರೊಂದಿಗೆ ಅದ್ದೂರಿ ಮೆರವಣಿಗೆಯಲ್ಲಿ ಬಂದ ಸಿಪಿ ಯೋಗೀಶ್ವರ್ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮೆರವಣಿಗೆಯ ವೇಳೆ ಡಿಕೆ ಸುರೇಶ್ ಅವರು ಸಿಪಿ ಯೋಗೀಶ್ವರ್ ಜೊತೆಗೆ ಮೆರವಣಿಗೆ ಬಂದಿದ್ದಾರೆ. ಜೊತೆಗೆ ಸಚಿವ ರಾಮಲಿಂಗಾ ರೆಡ್ಡಿ, ಚೆಲುವರಾಯಸ್ವಾಮಿ, ಹೆಚ್ ಎಂ ರೇವಣ್ಣ ಅವರು ಕೂಡ ಸಿಪಿ ಯೋಗೀಶ್ವರ್ ನಾಮಪತ್ರ ಸಲ್ಲಿಕೆ ವೇಳೆ ಜೊತೆಯಾಗಿದ್ದಾರೆ.
ಸಿಪಿ ಯೋಗೀಶ್ವರ್ ನೇರವಾಗಿ ಈಗ ಕುಮಾರಸ್ವಾಮಿ ಅವರನ್ನೇ ಟಾರ್ಗೆಟ್ ಮಾಡಿದ್ದಾರೆ. ಅಭ್ಯರ್ಥಿ ಯಾರನ್ನೇ ನಿಲ್ಲಿಸಿದರೂ ಸೋಲಿಸಲೇಬೇಕೆಂದು ಹಠ ತೊಟ್ಟಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಸಿಪಿ ಯೋಗೀಶ್ವರ್ ಗೆ ಗಾಳ ಹಾಕಿದ್ದಂತ ಡಿಸಿಎಂ ಡಿಕೆ ಶಿವಕುಮಾರ್ ಗೆಲ್ಲುವ ಕುದುರೆಯನ್ನೇ ಕರೆ ತಂದಿದ್ದಾರೆ. ಆರಂಭದಲ್ಲಿ ಡಿಕೆ ಸುರೇಶ್ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಇದೀಗ ಸಿಪಿ ಯೋಗೀಶ್ವರ್ ಪಕ್ಷ ಸೇರಿದ ಮೇಲೆ ಅವೆಇಗೆ ಟಿಕೆಟ್ ನೀಡಿ, ಎಲ್ಲರೂ ಜೊತೆಯಾಗಿ ನಿಂತಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್