Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಭಾರೀ ಮಳೆಯಿಂದಾಗಿ ಸಂಕಷ್ಟದಲ್ಲಿರುವ ಶೇಂಗಾ ಬೆಳೆಗಾರರು..!

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ : ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಉಂಟಾಗಿರುವ ಅವಾಂತರ ಒಂದಾ ಎರಡಾ. ಅದರಲ್ಲೂ ಹಲವು ಬೆಳೆಗಳ ರೈತರು ಸಾಕಷ್ಟು ತೊಂದರೆಗೆ ಸಿಲುಕಿದ್ದಾರೆ. ಮಳೆ ಜಾಸ್ತಿಯಾಗಿರುವ ಪರಿಣಾಮ ಬೆಳೆ ಮಾರುಕಟ್ಟೆಗೆ ಬರದೆ ಕೊಳೆತು ಹೋಗುತ್ತಿದೆ. ಇದು ರೈತರಿಗೆ ದೊಡ್ಡಮಟ್ಟದ ನಷ್ಟವನ್ನೇ ಉಂಟು ಮಾಡಿದೆ. ಇದೀಗ ಚಿತ್ರದುರ್ಗ ಜಿಲ್ಲೆಯಲ್ಲಿ ಶೇಂಗಾ ಬೆಳೆಗಾರರ ಪಾಡು ಅಧೋಗತಿಗೆ ತಿರುಗಿದೆ.

ಜಿಲ್ಲೆಯಾದ್ಯಂತ ಒಂದು ಲಕ್ಷ ಹೆಕ್ಟೇರ್ ನಲ್ಲಿ ಶೇಂಗಾ ಬಿತ್ತನೆಯಾಗಿದೆ. ಮಳೆ ಸುರಿಯುತ್ತಿರುವುದನ್ನು ನೋಡಿದರೆ ಶೇಕಡ 25 ರಿಂದ 30ರಷ್ಟು ಮಾತ್ರ ಬೆಳೆ ಮಾತ್ರ ಕೈಗೆ ಸಿಗುವ ಸಾಧ್ಯತೆ ಇದೆ. ಚಳ್ಳಕೆರೆಯಲ್ಲಿ 65 ಸಾವಿರ, ಹಿರಿಯೂರಿನಲ್ಲಿ 11 ಸಾವಿರ, ಮೊಳಕಾಲ್ಮೂರಿನಲ್ಲಿ 19 ಸಾವಿರ ಹೆಕ್ಟೇರ್ ನಲ್ಲಿ ಶೇಂಗಾವನ್ನು ಬಿತ್ತನೆ ಮಾಡಲಾಗಿದೆ. ಜೂನ್ ಜುಲೈನಲ್ಲಿ ಬಿತ್ತನೆಯಾಗಿದ್ದ ಶೇಂಗಾ ಆಗಸ್ಟ್ ನಲ್ಲಿ ಕಾಯಿಗಟ್ಟಬೇಕಿತ್ತು. ಆದರೆ ಆ ಸಮಯದಲ್ಲಿ ಮಳೆಯ ಕೊರತೆಯುಂಟಾಗಿ ಶೇಂಗಾ ಸರಿಯಾಗಿ ಬಂದಿಲ್ಲ.

ಆದರೆ ಆಗಸ್ಟ್ ಕೊನೆವಾರ, ಸೆಪ್ಟೆಂಬರ್ ನಲ್ಲಿ ಬಿತ್ತನೆಯಾದ ಕಾಯಿಗೆ ಮಳೆಯೇ ಅಡ್ಡಿಯಾಗಿದೆ. ರೋಗವೂ ಹರಡುತ್ತಿದೆ. ಕೊಳೆ ರೋಗ, ಬುಡ ರೋಗ, ಬೆಂಕಿ ರೋಗ ಅಂತ ಬೆಳೆಗೆ ಹಾನಿಯಾಗುತ್ತಿದೆ. ಕೃಷಿ ಇಲಾಖೆ ಹೇಳಿರುವ ಪ್ರಕಾರ 110 ಹೆಕ್ಟೇರ್ ಶೇಂಗಾ ಬೆಳೆ ನಾಶವಾಗಿದೆ ಎಂದಿದೆ. ಆದರೆ ಕೃಷಿ ಇಲಾಖೆ ನೀಡಿರುವುದು ಮಳೆಯಿಂದಾದ ಹಾನಿಯ ವರದಿ. ರೈತರಿಗೆ ಬೇರೆ ಬೇರೆ ಆಯಾಮಾಗಳಿಂದಾನೂ ಸಮಸ್ಯೆಯಾಗಿದೆ ಅದರ ಲೆಕ್ಕ ಅವರ ಬಳಿ ಇಲ್ಲ. ಏನೇ ಆಗಲಿ, ಕಳೆದ ವರ್ಷ ಬರದಿಂದ ಕಂಗೆಟ್ಟಿದ ರೈತ ಈ ವರ್ಷ ಹೆಚ್ಚು ಮಳೆಯಿಂದ ಕಂಗೆಡುವಂತೆ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಗ್ಗಾಂವಿ | ಯಾಸಿರ್ ಅಹ್ಮದ್ ಖಾನ್ ಪಠಾಣ್ ಕಾಂಗ್ರೆಸ್ ಅಭ್ಯರ್ಥಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು , ಅಕ್ಟೋಬರ್ 24 : ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷದ ವರಿಷ್ಠರು ಆಯ್ಕೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು

ದಾವಣಗೆರೆ | ಸೂಳಿಕೆರೆ ತುಂಬುವುದಕ್ಕೆ ಸನಿಹ : ರೈತರಲ್ಲಿ ಮೂಡಿದೆ ಸಂತಸ

ದಾವಣಗೆರೆ : ರಾಜ್ಯದಲ್ಲಿ ನಿರಂತರ ಮಳೆಯಿಂದ ಹಲವೆಡೆ ಸಮಸ್ಯೆಗಳು ಉಂಟಾಗಿವೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಕೆಲವೊಂದು ನಗರ ಪ್ರದೇಶ ರಸ್ತೆಗಳಲ್ಲೂ ಕೆರೆಯಂತಾಗಿದೆ. ಇದರ ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೆರೆಕಟ್ಟೆಗಳಿ, ಜಲಾಶಯಗಳು ತುಂಬುವ ಸೂಚನೆ

ಚಿತ್ರದುರ್ಗ | ಜಿಲ್ಲೆಯಲ್ಲಿ 664.91 ಹೆಕ್ಟೇರ್ ಕೃಷಿ ಬೆಳೆ ನಾಶ

ಚಿತ್ರದುರ್ಗ.24: ಜಿಲ್ಲೆಯಲ್ಲಿ ಅಕ್ಟೋಬರ್ ಮಾಹೆಯಲ್ಲಿ ಬಿದ್ದಂತಹ ಹೆಚ್ಚಿನ ಮಳೆಯಿಂದಾಗಿ ಬೆಳೆಹಾನಿಯಾಗಿದ್ದು, ಜಿಲ್ಲೆಯಾದ್ಯಂತ 664.91 ಹೆಕ್ಟೇರ್‍ಗಳಷ್ಟು ಪ್ರದೇಶದಲ್ಲಿ ಬೆಳೆಹಾನಿಯಾಗಿರುವುದಾಗಿ ಸರ್ಕಾರಕ್ಕೆ ವರದಿ ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ 2024-25ನೇ ಸಾಲಿನ

error: Content is protected !!